ಮೈಸೂರು: ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಆವರಣದಲ್ಲಿ ನವೆಂಬರ್ 24ರಂದು ರಾಮಾನುಜ ವಿಶ್ವವಿಜಯೋತ್ಸವದ ಸಮಾವೇಶದಲ್ಲಿ ವೇಳೆ 108 ಶಂಖನಾದ ಮೊಳಗಿಸುವ ಮೂಲಕ ಧಾರ್ಮಿಕ ವೇದಘೋಷ ನಡೆಯಲಿದೆ ಎಂದು ಸಮಿತಿಯ ಸಂಚಾಲಕರಾದ
ಯೋಗನರಸಿಂಹ (ಮುರುಳಿ) ತಿಳಿಸಿದರು.

ಮೈಸೂರು ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಮಾವೇಶ ಯಶಸ್ವಿಗೊಳಲಿ ಎಂದು ಪೂಜೆ ಸಲ್ಲಿಸಿ ಅನಂತರ ರಾಮಾನುಜರ ಧ್ವಜ ಹಿಡಿದು ಬ್ರಾಹ್ಮಣ ಸಮುದಾಯದ ಮುಖಂಡರನ್ನು ಆಹ್ವಾನಿಸಿ ಮಾತನಾಡಿದರು.
ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾದಿಂದ ಶ್ರೀ ಯದುಗಿರಿ ಯತಿರಾಜ ರಾಮಾನುಜಾ ಜಿಯರ್ ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ಶ್ರೀವೈಷ್ಣವ ಸಮಾಜದ ಯಾವುದೇ ಒಳಪಂಗಡಗಳು ಇದ್ದರೂ ಅವೆಲ್ಲವನ್ನು ಒಂದೇ ವೇದಿಕೆಯಡಿ ತಂದು ಅವರ ಶೈಕ್ಷಣಿಕ ಪ್ರಗತಿಗೆ ಈ ಮಹಾಸಭಾ ಮುಂದಾಗಲಿದೆ ಎಂದು ತಿಳಿಸಿದರು.
ಶ್ರೀವೈಷ್ಣವ ಜನಾಂಗದ ಯಾವುದೇ ಸಮಸ್ಯೆಗಳಿದ್ದರೂ ಸರ್ಕಾರದ ಗಮನಕ್ಕೆ ತರುವುದು ಸೂಕ್ತವಾದ ಪರಿಹಾರ ಕಂಡುಕೊಳ್ಳುವುದು ಸಮಾವೇಶದ ಉದ್ದೇಶವಾಗಿದೆ ಎಂದು ಹೇಳಿದರು.
ಶುಕ್ರವಾರ ಹಾಗೂ ಶನಿವಾರ ಶ್ರೀ ವೈಷ್ಣವ ಸಂಪ್ರದಾಯದಂತೆ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು ಭಾನುವಾರ ಬೆಳಗ್ಗೆ ನಡೆಯುವ ಬೃಹತ್ ಧಾರ್ಮಿಕ ಸಮಾರಂಭದಲ್ಲಿ 108 ಶಂಖುಗಳಿಂದ ಏಕಕಾಲಕ್ಕೆ ಶಂಖನಾದದ ಮೂಲಕ ಕಾರ್ಯಕ್ರಮ ಉದ್ಘಾಟನೆಯಾಗಲಿದೆ ಎಂದು ಯೋಗನರಸಿಂಹ ವಿವರಿಸಿದರು.
ಈ ಕಾರ್ಯಕ್ರಮಕ್ಕೆ ಮೈಸೂರಿನಿಂದ 2000ಕ್ಕೂ ಹೆಚ್ಚು ಹಾಗೂ ರಾಜ್ಯದ ನಾನಾ ಮೂಲೆಗಳಿಂದ ಸುಮಾರು 80,000ಕ್ಕೂ ಅಧಿಕ ಭಕ್ತರು ಆಗಮಿಸಲಿದ್ದಾರೆ,ಅವರಿಗೆ ಸಂಘ ಸಂಸ್ಥೆಗಳ ಮೂಲಕ ಬಸ್ಸುಗಳ ವ್ಯವಸ್ಥೆ ಮತ್ತು ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಅರ್ಚಕ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಚಕ್ರಪಾಣಿ,ಬಾಲಾಜಿ,ಆನಂದ್,
ಶಾಂತಾರಾಮ್,ಪಾರ್ಥ ಸಾರಥಿ,
ಮುರಳಿ,ಮತ್ತಿತರರು ಹಾಜರಿದ್ದರು.