ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀ ಯದುಗಿರಿ ಯತಿರಾಜ ಮಠ ಹಾಗೂ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾ ಹಮ್ಮಿಕೊಂಡಿದ್ದ ಶ್ರೀ ರಾಮಾನುಜ ವಿಶ್ವವಿಜಯ ಮಹೋತ್ಸವ ಹಾಗೂ ಬೃಹತ್ ಶ್ರೀ ವೈಷ್ಣವ ಸಮಾವೇಶದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೈಸೂರು ನಗರದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಅವರಿಗೆ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಯದುಗಿರಿ ಮಠದ ಶ್ರೀ ಯದುಗಿರಿ ಯತಿರಾಜ ರಾಮಾನುಜ ಜಿಯರ್ ಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದರು.

ಇದೇ ವೇಳೆ ಶಾಸಕ ಟಿ. ಎಸ್
ಶ್ರೀವತ್ಸ ಅವರು ವಿಕ್ರಂ ಅಯ್ಯಂಗಾರ್ ಅವರಿಗೆ ಶುಭ ಕೋರಿದರು.
ಯುವ ಮುಖಂಡ ಟಿ ಎಸ್ ಅರುಣ್ ಮತ್ತಿತತರರು ಹಾಜರಿದ್ದರು.