ಎಂಇಎಸ್ ನಾಯಕರ ಗಡಿಪಾರಿಗೆ ತೇಜಸ್ವಿ ಆಗ್ರಹ

Spread the love

ಮೈಸೂರು: ಎಂಇಎಸ್ ನಾಯಕರನ್ನು ನಾಡದ್ರೋಹಿ ಗಳೆಂದು ಪರಿಗಣಿಸಿ ಗಡಿಪಾರು ಮಾಡಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಬೆಳಗಾವಿ ಗಡಿಭಾಗದಲ್ಲಿ ಭಾಷಾ ವೈಷಮ್ಯ ವಿಷಬೀಜ ಬಿತ್ತಿ ಮುಗ್ಧ ಕನ್ನಡಿಗರು ಮತ್ತು ಮರಾಠಿಗರನ್ನು ಪ್ರಚೋದಿಸಿ, ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ ಎಂಇಎಸ್ ನಾಯಕರನ್ನು ನಾಡದ್ರೋಹಿ ಗಳೆಂದು ಪರಿಗಣಿಸಿ ಗಡಿಪಾರು ಮಾಡಬೇಕು
ಮತ್ತು ಎಂಇಎಸ್ ಸಂಘಟನೆಯನ್ನು ನಿಷೇಧಿಸಲು ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ರಾಜ್ಯೋತ್ಸವ ದಿನ ಕರಾಳ ದಿನಾಚರಣೆ ಮಾಡಿ ಅಧಿವೇಶನ ಸಂದರ್ಭದಲ್ಲಿ ಮರಾಠಿ ಮೇಳಾವ್ ಮಾಡಿ ಕನ್ನಡಿಗರು ಸಂಭ್ರಮ ಪಡುವ ಸಂದರ್ಭದಲ್ಲಿ ಪದೇ ಪದೇ ಶಾಂತಿ ಭಂಗ ಮಾಡುತ್ತಿರುವ ಎಂಇಎಸ್ ನಾಯಕರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಗಡಿಪಾರು ಮಾಡಿ ಕನ್ನಡದ ಹಿತವನ್ನು ಕಾಯಬೇಕು ಎಂದು ತೇಜಸ್ವಿ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ದಿನ ಎಂಇಎಸ್ ಸಂಘಟನೆಗೆ ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿ ರಾತ್ರೋರಾತ್ರಿ ಅನುಮತಿ ನೀಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.