ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಭ್ರಮ

Spread the love

ರಾಯಚೂರು,ಆ.22: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಪ್ರಯುಕ್ತ ರಾಯರ ಉತ್ತರಾರಾಧನೆ ಸಂಭ್ರಮ ಮನೆ ಮಾಡಿದೆ.

ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯುತ್ತಿದೆ.

ಆರಾಧನಾ ಮಹೋತ್ಸವದ ಕೊನೆಯ ಘಟ್ಟ ತಲುಪಿದ್ದು, ರಾಯರು ವೃಂದಾವನಸ್ಥರಾದ ಮರುದಿನವನ್ನ ಉತ್ತರರಾಧನೆಯಾಗಿ ಆಚರಣೆ ಮಾಡಲಾಗಿತ್ತಿದೆ. ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಲಿದ್ದು, ಅಂತಿಮ ಸಿದ್ದತೆಗಳು ನಡೆದಿವೆ.

ಬಳಿಕ ಉತ್ಸವ ಮೂರ್ತಿ ಪ್ರಹ್ಲಾದ ರಾಜರ ಮೆರವಣಿಗೆ ನಡೆಯುತ್ತದೆ. ಮೆರವಣಿಗೆ ಬಳಿಕ ಮಹಾರಥೋತ್ಸವ ನಡೆಯಲಿದೆ. ರಥಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಟಿವೃಷ್ಠಿ ಮಾಡಲಾಗುತ್ತದೆ.