ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ, ನಿಮ್ಮ ಕೈನಲ್ಲಿ ಏನು ಮಾಡಲಾಗಲ್ಲ-ಡಿಕೆಶಿ ಟಾಂಗ್

Spread the love

ಮೈಸೂರು: ಈ ಬಂಡೆ ಸಿದ್ದರಾಮಯ್ಯ  ಜೊತೆಗಿದೆ. ನನ್ನ ಜೊತೆ 136 ಶಾಸಕರಿದ್ದಾರೆ. ನಿಮ್ಮ ಕೈಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಬಿಜೆಪಿ,ಜೆಡಿಎಸ್ ಗೆ ಟಾಂಗ್ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಏ ಕುಮಾರಸ್ವಾಮಿ, ಏ ಅಶೋಕಾ, ಏ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ ಎಂದು ಕಾರವಾಗಿ ಪ್ರಶ್ನಿಸಿದರು.

ನಮ್ಮ ಸರ್ಕಾರವನ್ನು10 ತಿಂಗಳಲ್ಲಿ ತೆಗೆಯುತ್ತೇವೆ ಎಂದು ಹುನ್ನಾರ ನಡೆಸಿದ್ದಾರೆ,ಆದರೆ ನಮ್ಮ ಯೋಜನೆಗಳ ರಕ್ಷಣೆಗಾಗಿ ಈ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಜನರು ಅಧಿಕಾರಕ್ಕೆ ಬಂದ ಹಾಗೆ. ನಮ್ಮ ಜನಾಂದೋಲನ ರಾಜ್ಯದ, ಸಂವಿಧಾನದ ರಕ್ಷಣೆಗಾಗಿ ತಿಳಿದುಕೊಳ್ಳಿ ಎಂದರು ಬಂಡೆ.

ಕುಮಾರಸ್ವಾಮಿ ನಿನ್ನ ಅಧ್ಯಕ್ಷತೆಯಲ್ಲಿ ಜೆಡಿಎಸ್‌ 19 ಸೀಟ್ ಗೆದ್ದಿದೆ. ಈ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ 136 ಸ್ಥಾನ ಗೆದ್ದಿದೆ. ಬ್ರಿಟಿಷರಿಂದ ಕಾಂಗ್ರೆಸ್ ತೆಗೆಯಲು ಆಗಲಿಲ್ಲ. ನೀನು ಎರಡು ಜನ್ಮ ಎತ್ತಿದರೂ ನಮ್ಮನ್ನ ತೆಗೆಯಲು ಆಗೋದಿಲ್ಲ ಎಂದು ಡಿ.ಕೆಶಿ ಏಕವಚನದಲ್ಲೇ ಎಚ್ಚರಿಕೆ ಕೊಟ್ಟರು.

Leave a Reply

Your email address will not be published. Required fields are marked *