ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರಂದು ನಗರದ ಜೆ ಕೆ ಮೈದಾನದ ಸಭಾಂಗಣದಲ್ಲಿ ಸಂವಿಧಾನ ಬದಲಾಯಿಸಿದವರು ಯಾರು ಎಂಬ ಪುಸ್ತಕದದ ಕುರಿತು ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಈ ಪುಸ್ತಕದ ಕುರಿತು ಹಮ್ಮಿಕೊಂಡಿರುವ ಗೋಷ್ಠಿ ಕಾರ್ಯಕ್ರಮಕ್ಕೆ ಸಾರ್ವಜನಿಕರು, ವಿದ್ಯಾವಂತರು, ಸಮಾಜದ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಆಮಂತ್ರಣ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಮಾಡಲು ಬಿಹಾರದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ. ಎಸ್. ಶ್ರೀವತ್ಸ ಅವರು, ಪುಸ್ತಕದ ಲೇಖಕರಾದ ವಿಕಾಸ್ ಪುತ್ತೂರು ಹಾಗು ಪ್ರಭಾವಿ ನಾಯಕರುಗಳು ಭಾಗವಹಿಸಲಿದ್ದಾರೆ.
ನಮ್ಮ ದೇಶದಲ್ಲಿ ಸಂವಿಧಾನ ಭಕ್ತಿಯಿಂದ ನೋಡುವಂತಹ ಶ್ರೇಷ್ಠವಾದ ಗ್ರಂಥ.ಆದರೆ ಇತ್ತೀಚಿಗೆ ಕಾಂಗ್ರಸ್ ಪಕ್ಷ ಅದರ ಶ್ರೇಷ್ಠತೆಯನ್ನೇ ಹಾಳುಮಾಡುವ ರೀತಿಯಲ್ಲಿ ಸಂವಿಧಾನವನ್ನು ಚುನಾವಣಾ ಸರಕಾಗಿ ಉಪಯೋಗಿಸುತ್ತಿದೆ. ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆವುಂಟು ಮಾಡಿದ ಕಾಂಗ್ರೇಸ್ ಈಗ ಅದನ್ನು ಮುಚ್ಚಿಹಾಕಲು ಮತ್ತೊಬ್ಬರಿಂದ ಸಂವಿಧಾನಕ್ಕೆ ಧಕ್ಕೆಯಾಗಲಿದೆ ಎನ್ನುವ ಸುಳ್ಳು ಆತಂಕವನ್ನು ಸಮಾಜದಲ್ಲಿ ನಿರ್ಮಾಣ ಮಾಡುತ್ತಿದೆ.
ಇಂತಹ ಸುಳ್ಳುಗಳ ನಡುವೆ ನಿಜವಾಗಿಯೂ ಸಂವಿಧಾನವನ್ನು ಬದಲಾಯಿಸಿದವರು ಯಾರು ಎಂದು ತಿಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ ಹಾಗಾಗಿ ಈ ಕಾರ್ಯಕ್ರಮಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಈ ವೇಳೆ ಕಾರ್ಯಕರ್ತರು ಕರೆ ನೀಡಿದರು.
ಈ ಸಂಧರ್ಭದಲ್ಲಿ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿಮಂಜು, ಕೆ.ಆರ್. ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಪ್ರಧಾನ ಕಾರ್ಯದರ್ಶಿ ಅಕ್ಷಯ್, ಮುಖಂಡರುಗಳಾದ ಅಜಯ್ ಶಾಸ್ತ್ರಿ, ವರುಣ್, ಪ್ರಶೀಕ್, ರವಿಕುಮಾರ್, ಶ್ರೇಯಸ್ ಮಹಾನ್, ಸಾಯಿಕುಮಾರ್, ರಂಜನ್, ಮಿತುನ್ ಮತ್ತಿತರರು ಹಾಜರಿದ್ದರು.