ಬಾಣಂತಿಯರ ಸರಣಿ ಸಾವು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Spread the love

ಮೈಸೂರು: ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಕ್ರಮ ಕೈಗೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಮೈಸೂರು ಜಿಲ್ಲಾ ಪಂಚಾಯತ್ ಬಳಿ ಬಿಜೆಪಿ ಮಹಿಳಾ ಮೋರ್ಚ ಪ್ರತಿಭಟನೆ ನಡೆಸಿತು.

ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿದ್ದರೂ, ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡಿಲ್ಲ ಎಂದು ಕಿಡಿಕಾರಿದರು.

ಬಾಣಂತಿಯರ ಸರಣಿ ಸಾವು ಕಂಡರೂ ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ಪ್ರತಿಭಟನಾ ನಿರತರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರೂ,ಬಿಜೆಪಿ ಮೈಸೂರು ನಗರ ಜಿಲ್ಲಾ ಅಧ್ಯಕ್ಷರಾದ ನಾಗೇಂದ್ರ ಹಾಗೂ ಮೈಸೂರು ಗ್ರಾಮಾಂತರ ಮಹಿಳಾ ಜಿಲ್ಲಾ ಅಧ್ಯಕ್ಷರು ನಳಿನಾ ಗೌಡ, ಮೈಸೂರು ನಗರ ಮಹಿಳಾ ಜಿಲ್ಲಾ ಅಧ್ಯಕ್ಷೆ ರೇಣುಕಾ ರಾಜ್ ಹಾಗೂ ರಾಜ್ಯ ಮಹಿಳಾ ಉಪಾಧ್ಯಕ್ಷರು ಪ್ರಫುಲ್ಲ ಮಲ್ನಾಡಿ, ಜಿಲ್ಲಾಪಂಚಾಯತ್ ಮಾಜಿ ಸದಸ್ಯೆ ಮಂಗಳ ಸೋಮಶೇಖರ್ ಹಾಗೂ ಎಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆ ನಂತರ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಸಲ್ಲಿಸಲಾಯಿತು.

ಆ ನಂತರ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರಿಗೂ ಮನವಿಪತ್ರ ಸಲ್ಲಿಸಲಾಯಿತು.