ಕಲಾವಿದರ ವೇತನ ಮಂಜೂರಿಗೆ ಬಿಜೆಪಿ ಕಲೆ,ಸಾಂಸ್ಕೃತಿಕ ಪ್ರಕೋಸ್ಟ ಅಗ್ರಹ

Spread the love

ಬೆಂಗಳೂರು: ರಾಜ್ಯದ ಕಲಾವಿದರಿಗೆ ಶೀಘ್ರ ವೇತನ ಮಂಜೂರು ಮಾಡುವಂತೆ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಸ್ಟ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಕೆ ಧರಣಿ ದೇವಿ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನ ಕನ್ನಡ ಭವನಕ್ಕೆ‌ ಭೇಟಿ ನೀಡಿ ಡಾ. ಕೆ ಧರಣಿ ದೇವಿ ಅವರಿಗೆ ಬಿಜೆಪಿ
ಕಲೆ ಮತ್ತು ಸಂಸ್ಕೃತಿ ಪ್ರಕೋಷ್ಠ ರಾಜ್ಯ ಸಂಚಾಲಕಿ ರೂಪ ಅಯ್ಯರ್ ಹಾಗೂ ಸಹ ಸಂಚಾಲಕ ಆತ್ಮನಂದ ಮನವಿ ಪತ್ರ ಸಲ್ಲಿಸಿದರು.

ರಾಜ್ಯದ ಕಲೆ, ಸಂಸ್ಕೃತಿ ಮತ್ತು ಭಾಷೆಗೆ ಸರ್ಕಾರದಿಂದ ಸಿಗುವ ಅನುದಾನ ಮತ್ತು ಸಹಕಾರವನ್ನು ಇಲಾಖೆ ನೀಡುತ್ತಿಲ್ಲ, ಕಲಾವಿದರಿಗೆ ಕಲೆ, ಸಂಸ್ಕೃತಿಗೆ ಅಸಡ್ಡೆ ತೋರುತ್ತಿರುವುದು ದುಃಖಕರ ಸಂಗತಿ.

ಈಗಾಗಲೇ ಕಲಾಸಂಸ್ಥೆಗಳು ನಿರಂತರವಾಗಿ ಕಾರ್ಯಕ್ರಮಗಳನ್ನು ತಮ್ಮ ಖರ್ಚಿನಲ್ಲೇ ನಿರ್ವಹಿಸಿ ತೊಂದರೆಗೆ ಒಳಗಾಗಿದ್ದಾರೆ, 23 -24 ನೇ ಸಾಲಿನ ಧನಸಹಾಯ ಮಂಜೂರಾಗಿದ್ದು ಶೇ. 30 ಹಾಗೂ ಶೇ 40 ರಂತೆ ಬಿಡುಗಡೆ ಮಾಡಿದೆ ಇನ್ನ ಉಳಿದ ಧನಸಹಾಯವನ್ನು ಒಂದೇ ಕಂತಿನಲ್ಲಿ ಮಾಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕಲಾತಂಡಗಳಿಗೆ ನೀಡುವ ಇಲಾಖೆಯ ಪ್ರಯೋಜನೆಯನ್ನು ಒಂದೇ ವ್ಯಕ್ತಿಗೆ ಕೊಡುತ್ತಿದ್ದು ಇದರಿಂದ ಜನಪದ ಕಲಾತಂಡಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ, ಇಲಾಖೆಯ ಅಧಿಕಾರಿಗಳ ನಿರಂತರ ಸಂಪರ್ಕದಲ್ಲಿರುವಂತ ನಗರ ಪ್ರದೇಶದ ವ್ಯಕ್ತಿಗಳಿಗೆ ಮಾತ್ರ ಪ್ರಯೋಜನ ನೀಡುವ ಕ್ರಮ ಕೂಡಲೇ ನಿಲ್ಲಿಸಬೇಕು ಇಲ್ಲದಿದ್ದಲ್ಲಿ ನಿರಂತರ ಹೋರಾಟ ಮಾಡಬೆರಕಾಗುತ್ತದೆ ಎಂದು ತಿಳಿಸಲಾಗಿದೆ.

ಕಳೆದ ಮೂರು ತಿಂಗಳಿನಿಂದ ಯಾವುದೇ ಕಲಾವಿದರಿಗೆ ವೇತನ ಬಂದಿಲ್ಲ, ಆದ್ದರಿಂದ ಹಿರಿಯ ಕಲಾವಿದರಿಗೆ ವೈದ್ಯಕೀಯ ಕರ್ಚಿಗೆ ತೊಂದರೆಯಾಗುತ್ತದೆ ಕೂಡಲೇ ವೇತನ ಸಿಗಬೇಕೆಂದು ಮನವಿ ಪತ್ರದಲ್ಲಿ ಒತ್ತಾಯ ಮಾಡಲಾಗಿದೆ ಎಂದು ರೂಪ ಅಯ್ಯರ್ ತಿಳಿಸಿದ್ದಾರೆ.