ಗಜಮುಖ ಯುವಕರ ಬಳಗದಿಂದ ಶ್ರೀ ರಾಮನಿಗೆ ವಿಶೇಷ ಪೂಜೆ, ಅನ್ನದಾನ

ಮೈಸೂರು: ಮೈಸೂರಿನ ಕುವೆಂಪುನಗರ ಎಂ ಬ್ಲಾಕ್ ನಲ್ಲಿ ಅಯೋಧ್ಯ ರಾಮ ಮಂದಿರ ಮೊದಲ ವಾರ್ಷಿಕೋತ್ಸವ ಪ್ರಯುಕ್ತ ಯ ಗಜಮುಖ ಯುವಕರ ಬಳಗದಿಂದ ಶ್ರೀ ರಾಮನಿಗೆ ವಿಶೇಷ ಪೂಜೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಟಿ ಎಸ್ ಶ್ರೀವತ್ಸ ಅವರು ಮಾತನಾಡಿ,
2024 ರಲ್ಲಿ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಪೂರ್ಣಗೊಂಡು ಲಕ್ಷಾಂತರ ಜನರು ರಾಮನ ದರ್ಶನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮಿಯರ ಜೀವಾಳವಾಗಿದೆ. ಇಂದಿಗೆ ಅಯೋಧ್ಯೆಯ ಬಾಲ ರಾಮನ ಪ್ರತಿಷ್ಠಾಪನೆಯಾಗಿ ದೇಶಾದ್ಯಾಂತ ಸಂಭ್ಮದಿಂದ ಮೊದಲ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದು ಶ್ರೀವತ್ಸ ಹೇಳಿದರು.

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋಪಾಲರಾಜ್ ಅರಸ್, ರಾಜಗೋಪಾಲ್,
ಗಜಮುಖ ಯುವಕರ ಬಳಗ ಅಧ್ಯಕ್ಷರಾದ
ಹೇಮಂತ್, ರಾಜೇಶ್, ಸುಮಿತ್ರ ,ಮಂಜುಳಾ, ಚೇತನ್, ಮಂಜು, ರಾಜು, ರಾಘವೇಂದ್ರ, ಕೆಂಚಪ್ಪ ,ಲಿಂಗರಾಜು, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.