ಬೆಂಗಳೂರು: ನಮ್ಮ ನಾಡಿನಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಸಂಕ್ರಾಂತಿ ಹಬ್ಬ ಆಚರಣೆ ಮಾಡುತ್ತಾರೆ,ಆದರೆ ಆಮ್ ಆದ್ಮಿ ಪಕ್ಷದ ಯುವ ಘಟಕದವರು ಆರೋಗ್ಯ ಸಂಕ್ರಾಂತಿ ಆಚರಣೆ ಮಾಡಿ ಮಾದರಿಯಾಗಿದ್ದಾರೆ.

ಆಮ್ ಆದ್ಮಿ ಪಕ್ಷದ ಯುವ ಘಟಕದ
ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ನೇತೃತ್ವದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ಮಕರ ಸಂಕ್ರಾಂತಿ ಹಬ್ಬವನ್ನು ಆರೋಗ್ಯ ಸಂಕ್ರಮಣ ಹೆಸರಿನಲ್ಲಿ ರೋಗಿಗಳ ಆರೈಕೆ ಮಾಡಲು ಬಂದವರೊಂದಿಗೆ ಆಚರಿಸಲಾಯಿತು.

ಸಿಹಿ ಪೊಂಗಲ್ ಹಾಗೂ ಹಣ್ಣುಗಳನ್ನು ವಿತರಿಸುವ ಮೂಲಕ ಪಕ್ಷದ ಯುವ ಘಟಕದ ಸದಸ್ಯರು ಸಂಭ್ರಮದಿಂದ ಸಂಕ್ರಾಂತಿಯನ್ನು ಆಚರಿಸಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯುವ ಘಟಕದ ಸದಸ್ಯರು ತಮ್ಮ ಮನೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುವ ಬದಲು ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಆಚರಿಸುತ್ತಿರುವುದು ನಿಜಕ್ಕೂ ಸಾರ್ಥಕ ಕಾರ್ಯ ಹಾಗೂ ಇವುಗಳು ಇನ್ನಿತರ ರಾಜಕೀಯ ಪಕ್ಷಗಳಿಗೂ ಸಹ ಮಾದರಿಯಾಗಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ ಇಂದು ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ಹಬ್ಬವನ್ನು ಆಚರಿಸುತ್ತಿರುವುದು ಬಹಳ ಸಂತಸ ತಂದಿದೆ ಎಂದು ತಿಳಿಸಿದರು.

ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ, ಪ್ರತಿ ವರ್ಷವೂ ನಾವು ಇದೇ ರೀತಿ ಅನೇಕ ಸಾರ್ಥಕ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ರಾಜ್ಯದ ಯುವಜನತೆಗೆ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇವೆ,ಎಲ್ಲರಿಗೂ ಉತ್ತಮ ಆರೋಗ್ಯ ಸಿಗಲೆಂದು ಆಶಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಡಾ.ಸತೀಶ್ ಕುಮಾರ್, ಅನಿಲ್
ನಾಚಪ್ಪ ವಿಶ್ವನಾಥ್ , ಯುವ ಘಟಕದ ಪದಾಧಿಕಾರಿಗಳಾದ
ತೇಜಸ್ವಿನಿ , ನಾಗರತ್ನ,,ವಿಜಯ್ , ಮಂಜುನಾಥ್,ಕೀರ್ತಿ, ದೃವ, ಸೋಮು, ಹರೀಶ್, ರಾಕೇಶ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.