ಬೆಂಗಳೂರು: ಸಂಸತ್ತಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಟ್ಟು ತೊಲಗಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಅಮಿತ್ ಶಾ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅನರ್ಹರು ಎಂದು ವಾಗ್ದಾಳಿ ನಡೆಸಿದರು.

ದೇಶದ ಎಲ್ಲರಿಗೂ ಅಂಬೇಡ್ಕರ್ ಅವರು ದೈವ ಸಮಾನರು ನಮ್ಮ ದೈವಕ್ಕೆ ಅಪಮಾನಕಾರಿಯಾಗುವ ಹೇಳಿಕೆಗಳನ್ನು ಯಾರೆ ನೀಡಿದರು ಪಕ್ಷವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಪ್ರಜಾಪ್ರಭುತ್ವದ ದೇಗುಲಗಳೆಂದು ನಾವೆಲ್ಲ ನಂಬಿರುವ ಸಂಸತ್ತು ಹಾಗೂ ವಿಧಾನಸಭೆಗಳು ನಡೆಯುವ ರೀತಿ ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂತಿದೆ ಎಂದು ಇದೇ ವೇಳೆ ಸಿ.ಟಿ. ರವಿ ಪ್ರಕರಣ ಉಲ್ಲೇಖಿಸಿ ಜಗದೇಶ್ ಚಂದ್ರ ಕಿಡಿಕಾರಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ, ರುದ್ರಯ್ಯ ನವಲಿ ಹಿರೇಮಠ, ಪ್ರೊ. ಮಹದೇವಸ್ವಾಮಿ, ಅಶೋಕ್, ಮೃತ್ಯುಂಜಯ ,ಉಷಾ ಮೋಹನ್, ವೀಣಾ,ಶಶಿಧರ್ ಆರಾಧ್ಯ , ಶ್ರೀಧರ,ಸಿದ್ದು,ಸರವಣ,ಮುನೇಂದ್ರ ,ಮುನೇಶ್ , ಮಹಾಲಕ್ಷ್ಮಿ, ಅಂಜನಾ ಗೌಡ, ಮಾರಿಯಾ, ಪುಷ್ಪ,ಇರ್ಷಾದ್, ಮಣಿಕಂಠ ಸೇರಿದಂತೆ ಹಲವು ಮುಖಂಡರುಗಳು ಭಾಗವಹಿಸಿದ್ದರು.