ಮಂಡ್ಯ: ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಬಿಜೆಪಿ ಮಂಡ್ಯ ಕಚೇರಿಯಲ್ಲಿ ಸಭೆ ಹಮ್ಮಿಕೊಂಡು ಸುದೀರ್ಘ ಚರ್ಚೆ ನಡೆಸಲಾಯಿತು.ಪ್ರತಿಪಕ್ಷ ನಾಯಕ ಆರ್.ಅಶೋಕ್ ಅಗತ್ಯ ಸಲಹೆ ನೀಡಿದರು.
ಬಿಜೆಪಿ ಸದಸ್ಯತ್ವದ ಅಭಿಯಾನ ಶ್ರೀರಂಗಪಟ್ಟಣ ಕ್ಷೇತ್ರದ ತಾಲೂಕು ಮಾಜಿ ಅಧ್ಯಕ್ಷ ಟಿ ಶ್ರೀಧರ್ ಹಾಗೂ ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭಾಗವಹಿಸಿ ಅಗತ್ಯ ಸಲಹೆ ನೀಡಿದರು.
ಸದಸ್ಯತ್ವ ಗುರಿ ಮುಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಶೋಕ್ ಮಾರ್ಗದರ್ಶನ ನೀಡಿದರು.
ಜಿಲ್ಲಾ ಅದ್ಯಕ್ಷ ಇಂದ್ರೇಶ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಹೆಚ್. ಆರ್ ಅಶೋಕ್ ಕುಮಾರ್, ಮದ್ದೂರು ಸ್ವಾಮಿ, ಹಿಂಡುವಾಳು ಸಚಿನ್ ಮತ್ತಿತರರು ಭಾಗವಹಿಸಿದ್ದರು.