ಮೈಸೂರು: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಿoದ ಗ್ರೂಪ್ ʼಎʼ ಮತ್ತು ʼಬಿʼ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡುತ್ತಿರುವುದು ನಮ್ಮ ರಾಜ್ಯದ ಹೆಮ್ಮೆಯ ವಿಷಯ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಧೆಯ ಮಹಾ ನಿರ್ದೇಶಕರಾದ ಶಾಲಿನಿ ರಜನೀಶ್ ತಿಳಿಸಿದರು.
ಪ್ರತಿ ವರ್ಷ ಸರಾಸರಿ 280 ತರಬೇತಿ ಕಾರ್ಯಕ್ರಮಗಳ ಮೂಲಕ
ಸುಮಾರು 8400 ಗ್ರೂಪ್ ʼಎʼ ಮತ್ತು ʼಬಿʼ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಲಾಗುತ್ತಿದೆ, ನಮ್ಮ ರಾಜ್ಯದ ಉತ್ತಮ ಆಡಳಿತದ ಬಗ್ಗೆ ತಿಳಿದು ಕೊಳ್ಳಲು ಬರುವ ಇತರೆ ರಾಜ್ಯಗಳ ಅಧಿಕಾರಿಗಳಿಗೆ ನಮ್ಮ ಸಂಸ್ಥೆ ವತಿಯಿಂದ ತರಬೇತಿ ನೀಡುತ್ತಿರುವುದು ನಮ್ಮ ರಾಜ್ಯದ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.
2024 ನೇ ಬ್ಯಾಚ್ ನ ತ್ರಿಪುರ ರಾಜ್ಯದ ಆಡಳಿತ ಸೇವೆಗೆ ಸೇರಿದ ʼಎʼ ವೃಂದದ ಒಟ್ಟು 30 ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಮೇ 9 ರಿಂದ ಮೇ 12 ರವರೆಗೆ ಹಮ್ಮಿಕೊಂಡಿದ್ದು ಈ ತರಬೇತಿ ಕಾರ್ಯಕ್ರಮವನ್ನು ಮೈಸೂರು ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಶಾಲುನಿ ರಜನೀಶ್ ಮಾತನಾಡಿದರು.

ನಮ್ಮ ರಾಜ್ಯದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಉತ್ತಮ ಆಡಳಿತ ಹಾಗೂ ನಾಗರೀಕ ಸ್ನೇಹಿ ಯೋಜನೆಗಳಾದ ʼಭೂಮಿʼ, ʼಮೋಜಿಣಿʼ,ʼಸೇವಾಸಿಂಧುʼ, ʼಏಕೀಕೃತ ಭೂ ನಿರ್ವಹಣಾ ವ್ಯವಸ್ಥೆʼ, ʼಕೂಸಿನ ಮನೆʼಇತ್ಯಾದಿ ಯಶಸ್ವಿ ಯೋಜನೆಗಳ ಕುರಿತು ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಶಿಕ್ಷಣಾರ್ಥಿಗಳು ಮೈಸೂರಿನ ಪಾರಂಪರಿಕ ಸ್ಥಳಗಳು, ಚಾಮರಾಜನಗರ ಜಿಲ್ಲೆಯ ನಿಟ್ರೆ ಗ್ರಾಮ ಪಂಚಾಯತಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬoಧಿಸಿದoತೆ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾದ (ಆಡಳಿತ), ರೂಪಶ್ರೀ ಕೆ, ಜಂಟಿ ನಿರ್ದೇಶಕರಾದ (ತರಬೇತಿ) ಸಾಧನ ಅಶೋಕ್ ಪೋಟೆ, ಹಾಗೂ ತರಬೇತಿ ನಿರ್ದೇಶಕರಾದ ಡಾ. ಕವಿತ ಎಂ.ಆರ್ ಮತ್ತು ಸಂಸ್ಥೆಯ ಎಲ್ಲಾ ಬೋಧಕರು ಉಪಸ್ಥಿತರಿದ್ದರು.