ಮೈಸೂರು,ಸೆ.1: ಕಿವುಡು ಮತ್ತು ಮೂಕರ ಆರೋಗ್ಯ ಚಿಕಿತ್ಸೆ, ಶಿಕ್ಷಣ, ವೈದ್ಯಕೀಯ ಮತ್ತು ಸಂಶೋಧನೆ ಕಾರ್ಯದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯು ಇಡೀ ದೇಶದ ಹೆಮ್ಮೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಣ್ಣಿಸಿದರು.
ಮಾನಸ ಗಂಗೊತ್ರಿಯಲ್ಲಿರುವ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದೊಂದು ಐತಿಹಾಸಿಕ ಸಂದರ್ಭ.
1965 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಕಳೆದ 6 ದಶಕಗಳಲ್ಲಿ ಸಂವಹನ ಅಸಮರ್ಥತೆ ಪರಿಹಾರಕ್ಕಾಗಿ ತಜ್ಞ ಮಾನವ ಸಂಪನ್ಮೂಲಗಳ ಸಹಾಯದಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.
ಎಲ್ಲಾ ವಯೋಮಾನದವರಿಗೂ ಬಹುಮುಖಿ ಚಿಕಿತ್ಸೆ ಮೂಲಕ ಸೇವೆ ಒದಗಿಸುತ್ತಿರುವುದು ಅಭಿನಂದನೀಯ. ಸಮುದಾಯ ಸೇವಾ ಕೇಂದ್ರಗಳು, ಟೆಲಿ ಸರ್ವೆಕ್ಷಣೆ ಇನ್ನಿತರ ಸೇವೆಗಳ ಮೂಲಕ ದೇಶದಾದ್ಯಂತ ಜನತೆಗೆ ನೆರವಾಗುತ್ತಿದೆ ಎಂದು ದ್ರೌಪದಿ ಮರ್ಮು ಅವರು ಶ್ಲಾಘಿಸಿದರು.
ಹಲವು ವರ್ಷಗಳಿಂದ
ಈ ಸಂಸ್ಥೆಯ ನಾಯಕತ್ವವನ್ನು ಮಹಿಳೆಯರು ವಹಿಸಿರುವುದು ವಿಶೇಷವಾಗಿದೆ.ಈಗಿನ ನಿರ್ದೇಶಕಿ ಡಾ. ಪುಷ್ಪಲತಾ ಎಸ್ ಅವರು ನೀಡುತ್ತಿರುವ ಸೇವೆ ಪ್ರಶಂಸನೀಯ. ಈ ಸಂಸ್ಥೆ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.
ಎಐ ಐ ಎಸ್ ಹೆಚ್ ಸಂಸ್ಥೆ ಪ್ರಾರಂಭಕ್ಕೆ ಮೈಸೂರು ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಭೂಮಿ ದಾನ ಮಾಡಿರುವುದು ಸ್ಮರಣೀಯ ಇಂದು ಅವರ ಕುಟುಂಬದ ಯದಯವೀರ್ ಒಡೆಯರ್ ಅವರು ಉಪಸ್ಥಿತರಿರುವುದು ಖುಷಿ ತಂದಿದೆ ಎಂದು ತಿಳಿಸಿದರು.
ಇತರೆ ಸಮಸ್ಯೆಗಳಂತೆ ವಾಕ್ ಮತ್ತು ಶ್ರವಣ ಸಂಬಂಧಿತ ತೊಂದರೆಗಳಲ್ಲಿ ಕೂಡ ಪ್ರಾಥಮಿಕ ಹಂತದಲ್ಲಿಯೇ ಲಕ್ಷಣಗಳನ್ನು ಗುರುತಿಸುವುದು ಮತ್ತು ಚಿಕಿತ್ಸೆ ನೀಡಲು ತಜ್ಞರ ಅವಶ್ಯಕತೆ ಇದೆ ಅವರು ರಾಷ್ಟ್ರಪತಿಗಳು ಅಭಿಪ್ರಾಯ ಪಟ್ಟರು.
ಈ ಸಂಸ್ಥೆಯ ಮೂಲಕ ಸ್ಥಾಪಿಸಲ್ಪಟ್ಟ Inclusive Therapy Park ದೇಶದ ಮೊದಲ ಮಾದರಿಯಾಗಿದ್ದು, ಮಕ್ಕಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಇದು ಸಂವಹನ ಅಸಮರ್ಥತೆ ಯಿಂದ ಬಳಲುತ್ತಿರುವವರಿಗೆ ಉಪಯುಕ್ತವಾಗಿದೆ ಎಂದು ಮುರ್ಮು ತಿಳಿಸಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ, ವಾಕ್ ಮತ್ತು ಶ್ರವಣ ತೊಂದರೆಗಳನ್ನು ನಿವಾರಿಸಲು ಅತ್ಯಾಧುನಿಕ ತಂತ್ರಜ್ಞಾನ ಬಹಳ ಮುಖ್ಯ.ಇವುಗಳ ಬಳಕೆಯಿಂದ ಸಾಮಾನ್ಯ ಜನರು ಶ್ರವಣ ಸಹಾಯಕ ಸಾಧನಗಳು ಮತ್ತು ಸಾಧನೋಪಕರಣಗಳನ್ನು ಸುಲಭವಾಗಿ ಪಡೆಯಬಹುದು ಎಂದು ಅವರು ಅಭಿಪ್ರಾಯ ಪಟ್ಟರು.
Cochlear Implants ಗಳಂತಹ ಸಾಧನಗಳು ಈಗ ಲಭ್ಯವಾಗುತ್ತಿವೆ. ಇಂತಹ ಸಾಧನಗಳ ತಯಾರಿಕೆಯಲ್ಲಿ ಸ್ವಾವಲಂಬಿ ಆಗಲು ಆಯುಶ್ ಸಂಸ್ಥೆಗಳು ಪ್ರಮುಖ ಪಾತ್ರವಹಿಸಬೇಕು ಸಂಶೋಧನೆ ಮತ್ತು ಆವಿಷ್ಕಾರಗಳ ಮೂಲಕ ದೇಶವನ್ನು ಆತ್ಮನಿರ್ಭರವಾಗಿಸಲು ಸಹಕಾರಿಯಾಗಬೇಕು ಎಂದು ಮುರ್ಮು ಕರೆ ನೀಡಿದರು.