ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಸ್. ರಘುನಾಥ್ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಅಧಿಕೃತ ಅಭ್ಯರ್ಥಿಯಾಗಿ ಆರ್.ಎಸ್ ಸತ್ಯ ನಾರಾಯಣ್ ಸ್ಪರ್ಧಿಸಿದ್ದಾರೆ ಎಂದು ವಿಪ್ರ ಮುಖಂಡರಾದ ಎನ್ ಎಂ ನವೀನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ನವೀನ್ ಕುಮಾರ್,ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ ಏಪ್ರಿಲ್ 13 ರಂದು ರಾಜ್ಯದಂತ ನಡೆಯಲಿದ್ದು ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಎಸ್ ರಘುನಾಥ್ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿರುವ ಅಧಿಕೃತ ಅಭ್ಯರ್ಥಿ ಆರ್.ಎಸ್ ಸತ್ಯ ನಾರಾಯಣ್ ಅವರನ್ನು ಗೆಲ್ಲಿಸಬೇಕೆಂದು ಕೋರಿದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ
ಕೆಲವರನ್ನು ರಘುನಾಥ್ ಬೆಂಬಲಿತ ಅಭ್ಯರ್ಥಿಯೆಂದು ಅಪಪ್ರಚಾರ ಮಾಡುತ್ತಿದ್ದಾರೆ ಅದಕ್ಕೆ ವಿಪ್ರ ಸಮುದಾಯದವರು ಕಿವಿಗೊಡದೆ
ಮೈಸೂರಿನ ರಘುನಾಥ್ ಬೆಂಬಲಿತ ಅಧಿಕೃತ ಅಭ್ಯರ್ಥಿ ಆರ್. ಎಸ್ ಸತ್ಯ ನಾರಾಯಣ ಅವರನ್ನು ಬೆಂಬಲಿಸಬೇಕು ಹಾಗೂ ಮತ್ತೊಂದು ಪ್ರತಿನಿಧಿ ಸ್ಥಾನದ ಅಭ್ಯರ್ಥಿ ಭಾಗ್ಯ ಶ್ರೀ ಭಟ್ ಅವರನ್ನು ಬೆಂಬಲಿಸಬೇಕೆಂದು ನವೀನ್ ಕುಮಾರ್ ಮನವಿ ಮಾಡಿದರು.
ಏ.13 ರಂದು ಮೈಸೂರಿನ ಕೃಷ್ಣಮೂರ್ತಿ ಪುರಂ ನಲ್ಲಿರುವ ಬಗನಿ ಸೇವಾ ಸಮಾಜದಲ್ಲಿ ಬೆಳಗೆ 8ರಿಂದ ಸಂಜೆ 4 ರವರೆಗೂ ಮತದಾನ ನಡೆಯಲಿದೆ, ಬ್ರಾಹ್ಮಣ ಬಂಧುಗಳು ತಪ್ಪದೇ ಆಗಮಿಸಿ ಮತದಾನ ಮಾಡುವುದರ ಮೂಲಕ ಬ್ರಾಹ್ಮಣ ಮಹಾಸಭಾ ಸಂಘಟನೆಗೆ ಶಕ್ತಿ ತುಂಬಬೇಕೆಂದು ಅವರು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರತಿನಿಧಿ ಸ್ಥಾನದ ಅಭ್ಯರ್ಥಿ ಆರ್.ಎಸ್ ಸತ್ಯನಾರಾಯಣ್, ಭಾಗ್ಯಶ್ರೀ ಭಟ್, ಹಿರಿಯ ವಿಪ್ರ ಮುಖಂಡರಾದ ಸಿ ವಿ ಪಾರ್ಥಸಾರಥಿ, ಎಸ್ ಬಿ. ವಾಸುದೇವ್ ಮೂರ್ತಿ, ನಾಗಚಂದ್ರ, ರಾಜಕುಮಾರ್, ಜಗದೀಶ್ ಹಾಜರಿದ್ದರು.