ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವಿಶೇಷ ಚೇತನ ಕ್ರೀಡಾಪಟು ಅಲೋಕ್

Spread the love

ಮೈಸೂರು: ಅಂತರಾಷ್ಟ್ರೀಯ ವಿಶೇಷ ಚೇತನರ ಕ್ರೀಡಾಪಟು ಅಲೋಕ್ ಆರ್ ಜೈನ್ ಅವರು‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ‌ ಭಾಜನರಾಗಿದ್ದಾರೆ.

ಮೈಸೂರು ಜಿಲ್ಲಾಡಳಿತ ವತಿಯಿಂದ ಓವೆಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಅಲೋಕ್ ಆರ್ ಜೈನ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಕ್ರೀಡಾ ಕ್ಷೇತ್ರದಿಂದ ಮೈಸೂರು ಜಿಲ್ಲಾ ಮಂತ್ರಿ ಹೆಚ್ ಸಿ ಮಹದೇವಪ್ಪ ಅವರು
ಪ್ರಶಸ್ತಿ ನೀಡಿ,ಸನ್ಮಾನಿಸಿ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯುಬ್ ಖಾನ್,
ಕನ್ನಡ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.