ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು

Spread the love

ಬೆಳಗಾವಿ,ಸುವರ್ಣಸೌಧ: ಗುರುವಾರ ಕೂಡಾ ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲಿ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದರು.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ಚರ್ಚೆಗೆ ಆಗ್ರಹಿಸಿ, ನಿರ್ಣಯ ಕೈಗೊಳಲು ಒತ್ತಾಯಿಸಿದರು.

ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನಿಂದಲೇ ಅಂಬೇಡ್ಕರ್‌ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು.ಈ ವೇಳೆ ಯಾರೊಬ್ಬರ ಮಾತೂ ಕೇಳದಂತೆ ಗದ್ದಲವಾಯಿತು.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ‌ ಪ್ರದರ್ಶಿಸಿ ವ್ಯಂಗ್ಯವಾಡಿದರು.

ಗದ್ದಲ ಚದರ ಸತತ ಜೋರಾಗುತ್ತಿದ್ದಂತೆ ಸ್ಪೀಕರ್‌ ಯು.ಟಿ.ಖಾದರ್ ಕೆಲಕಾಲ ಕಲಾಪವನ್ನು ಮುಂದೂಡಿದರು.