ವಿಷ್ಣುವರ್ಧನ್ ಹುಟ್ಟುಹಬ್ಬ ವಿಶಿಷ್ಟ ಆಚರಣೆ

Spread the love

ಮೈಸೂರು: ಡಾಕ್ಟರ್ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ
ಮುಂಭಾಗ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಬಳಗ ಹಾಗೂ ಸಂಘಗಳ ಒಕ್ಕೂಟದ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.

ರಸಮಂಜರಿ ಕಾರ್ಯಕ್ರಮ, ಅನ್ನದಾನ,ವರ್ಣ ತೈಲ ಚಿತ್ರ ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ವಿಷ್ಣುವರ್ಧನ್ ಅವರನ್ನು ಸ್ಮರಿಸಲಾಯಿತು.

ವಿಷ್ಣು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೇಕ್ ಕಟ್ ಮಾಡಿ ನಂತರ ಅನ್ನಸಂತರ್ಪಣೆ ಮಾಡಲಾಯಿತು.

ಈ ವೇಳೆ ಚಂದನ ಶ್ರೀನಿವಾಸ್ ತಂಡ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯಿಸಿರುವ ಚಿತ್ರಗಳ ಗೀತೆಗಳನ್ನು ಹಾಡುವ ಮೂಲಕ ಜನಮನ ಮನರಂಜಿಸಿದರು.

ಕಲಾವಿದ ಅರ್ಜುನ್ ಆರ್ಯ ಅವರು ವಿಷ್ಣುವರ್ಧನ್ ಅವರ ವರ್ಣ ತೈಲ ಚಿತ್ರ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದರು.

ವಿಷ್ಣು ಸಂಘ ಒಕ್ಕೂಟದ ಅಧ್ಯಕ್ಷ ಎಂ. ಡಿ ಪಾರ್ಥಸಾರಥಿ ಮಾತನಾಡಿ,
ಮಹಾನ್ ನಟರ ನಡುವೆಯೂ ಮೊದಲ ಚಿತ್ರದಿಂದ ಕೊನೆಯ ಚಿತ್ರದವರೆಗೆ ಅಭಿಮಾನಿಗಳಿಗೆ ರಸದೌತನ ಉಣಬಡಿಸಿದ ಮಹಾನ್ ನಟ ಎಂದು ಸ್ಮರಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ
ಸಾಹಸ ಸಿಂಹ, ಕನ್ನಡಿಗರ ಕಣ್ಮಣಿ ಡಾ. ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ ಎಂದು ಹೇಳಿದರು.

ಗಾಂಧಿ ಚೌಕ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಮುಬಾರಕ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ರೂಪದರ್ಶಿ ರೇಣುಕಾ ಹೊರಕೇರಿ,ಸಕಲಿ ಮಹದೇವ್, ಕುಮಾರ್, ಜಬಿ ,ಬಸವಣ್ಣ, ಬಿಜೆಪಿ ಮುಖಂಡರಾದ ಎಂ ಆರ್ ಬಾಲಕೃಷ್ಣ, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜಿ ರಾಘವೇಂದ್ರ, ರಾಜೇಶ್ ಪಳನಿ, ರವಿಚಂದ್ರ, ಕಡಕೋಳ ಶಿವಲಿಂಗ, ಮಹಾದೇವ್, ನವೀನ್ ಮತ್ತಿತರರು ಹಾಜರಿದ್ದರು.