ಮರಣದ ನಂತರವೂ ಜೀವಿಸಿರುವ ಪುನೀತ್ : ನಾರಾಯಣ ಗೌಡ

Spread the love

ಮೈಸೂರು: ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿತ್ತು ಎಂದು
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ‌ ತಿಳಿಸಿದರು.

ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ 25 ಜನ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನವನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ಮಾತನಾಡಿದ ನಾರಾಯಣಗೌಡರು ಪುನೀತ್ ರಾಜಕುಮಾರ್ ಅವರ ಆದರ್ಶ ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು.

ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಲಿಂಗರಾಜು ಮಾತನಾಡಿ, ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಪುನೀತ್ ರಾಜ್‍ಕುಮಾರ್ ಅವರು ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ನೀಡುತ್ತಿದ್ದರಲ್ಲದೇ, ಎಲೆಮರೆಯ ಕಾಯಿಯಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಇಂದಿನ ಯುವ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ತಿಳಿಸಿದರು

ಈ ಕಾರ್ಯಕ್ರಮದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್, ಸಮಾಜ ಸೇವಕರಾದ ಖುಷಿ ವಿನು, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಸವಿತಾ ಘಾಟ್ಕೆ, ವಕೀಲರಾದ ಜಯಶ್ರೀ ಶಿವರಾಮ್, ಮಹಾನ್ ಶ್ರೇಯಸ್, ಹೇಮಾ, ಪವನ್ ಮತ್ತಿತರರು ಹಾಜರಿದ್ದರು.