ಮೈಸೂರು: ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲಮಹಾ ಸಂಸ್ಥಾನ ಶ್ರೀ ಮದುತರದಿ ಮಠಾಧೀಶರಾದ
ಪರಮಪೂಜ್ಯ ಶ್ರೀ1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳರವರ ಮಾರ್ಗದರ್ಶನದಲ್ಲಿ ಸನಾತನ ಧರ್ಮದ ಅಭಿವೃದ್ಧಿ ಹಿಂದೂ ಸಮಾಜದ ಸಂಘಟನೆ ಹಾಗೂ ರಾಮ ರಾಜ್ಯದ ಸಕಾರಾತೆಗಾಗಿ
ಭಕ್ತಾದಿಗಳಿಂದ ಆರು ಕೋಟಿ ರಾಮನಾಮ ಜಪ ಹಮ್ಮಿಕೊಳ್ಳಲಾಗಿದೆ.
ಮೈಸೂರಿನ ಯಾದವಗಿರಿಯಲ್ಲಿರುವ ಶ್ರೀ ಉತ್ತರಾದಿ ಮಠದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19 ರಂದು ಬೆಳಗ್ಗೆ 9 ಗಂಟೆಗೆ ರಾಮ ತಾರಕ ಹೋಮ ಹಾಗೂ 11 ಗಂಟೆಗೆ ಸಾಮೂಹಿಕ ರಾಮನಾಮ ಜಪವನ್ನು ಆಯೋಜಿಸಿದ್ದು ಅದರ ಪೋಸ್ಟರ್ ಅನ್ನು ಯಾದವ ಗಿರಿಯ ಕೆ ಆರ್ ಎಸ್ ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಖಿಲ ಭಾರತ ಬ್ರಾಹ್ಮಣ ಏಕೀಕೃತ ಪರಿಷತ್ ರಾಜ್ಯಾಧ್ಯಕ್ಷರಾದ ಎನ್ ಎಂ ನವೀನ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಅವರು
ಇಂತಹ ಧಾರ್ಮಿಕ ಕಾರ್ಯಕ್ರಮಕ್ಕೆ ಜಾತ್ಯತೀತ ಪಕ್ಷತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಮೀಳಾ ಭರತ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಾದ ಮಹೇಶ್ ಕಾಮತ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್,ಎಕೆಬಿಎಂಎಸ್ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್ ಬಿ ವಾಸುದೇವಮೂರ್ತಿ, ಆರ್ ಎಸ್ ಸತ್ಯನಾರಾಯಣ್, ಟಿ ಎಸ್ ಅರುಣ್, ಪ್ರಮೋದ್ ಆಚಾರ್, ವಿಜಯ ವಿಠಲಾಚಾರ್
, ಪ್ರಧಾನ ಅರ್ಚಕರಾದ ನಾಗಭೂಷಣ್, ಗುರು, ವಕೀಲರಾದ ಚಂದ್ರಶೇಖರ್ ಬಿ ಆರ್, ಚರಣ್ ಮತ್ತಿತರರು ಹಾಜರಿದ್ದರು.
