ಬುರುಡೆ ಗ್ಯಾಂಗ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಮೈಸೂರು: ಧರ್ಮಸ್ಥಳದ ವಿರುಓದ್ಧ ಅಪಪ್ರಚಾರ ಮತ್ತು ಪಿತೂರಿ ನಡೆಸಿದ ಬುರುಡೆ ಗ್ಯಾಂಗ್ ಸದಸ್ಯರನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ವಿಕಾಸ್ ಶಾಸ್ತ್ರಿ ಮತ್ತಿತರರು ಒತ್ತಾಯಿಸಿದ್ದಾರೆ.

ಶನಿವಾರ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಸಾಮಾಜಿಕ ಕಾರ್ಯಕರ್ತ ವಿಕಾಸ್ ಶಾಸ್ತ್ರಿ, ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಭುಸ್ವಾಮಿ, ಹೊನ್ನಾನಾಯ್ಕ, ಸೋಮಶೇಖರ್ ಮೂರ್ತಿ, ಶಿವಯ್ಯ, ಶಂಕರ್, ಪ್ರಸಾದ್ ನಾಯಕ್ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ರವಾನಿಸಿದರು.

ಧರ್ಮಸ್ಥಳದ ಮೇಲಿನ ಅಪಪ್ರಚಾರವು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆಯಿರುವುದರಿಂದ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಮನವಿ ಮಾಡಿದರು.