ಕಾಂಗ್ರೆಸ್ ವಿರುದ್ಧ ಅಶೋಕ್ ವ್ಯಂಗ್ಯ

Spread the love

ಬೆಂಗಳೂರು: ಸ್ವಾರ್ಥಕ್ಕಾಗಿ ಅಂಗೈನಲ್ಲಿ ಆಕಾಶ ತೋರಿಸಿ, ಜನರ ಕಣ್ಣಿಗೆ ಮಂಕುಬೂದಿ ಎರಚಿ ಅಧಿಕಾರ ಹಿಡಿದ ಹಿಮಾಚಲ ಸರ್ಕಾರ ದಿವಾಳಿಯತ್ತ ಸಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಶಾಸಕರು, ಸಚಿವರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲದೆ ದೇವರ ಹುಂಡಿಗೆ ಕೈ ಹಾಕುವ ಪಾಪದ ಕೆಲಸ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲೂ ಆರ್ಥಿಕ ಸ್ಥಿತಿ ಬಿಗಾಡಾಯಿಸಿದ್ದು, ಸರ್ಕಾರ ಐಸಿಯುನಲ್ಲಿದೆ! ಎಂದು ಟೀಕಿಸಿದ್ದಾರೆ

ಅವೈಜ್ಞಾನಿಕ ಗ್ಯಾರಂಟಿಗಳಿಂದ ಹಿಮಾಚಲ ಪ್ರದೇಶವನ್ನು ದಿವಾಳಿಯಂಚಿಗೆ ತಳ್ಳಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತಿರುವಾಗ ಅದೇ ಹಾದಿಯಲ್ಲಿ ಸಾಗುತ್ತಿರುವ ಸಿಎಂ ಸಿದ್ದರಸಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಅಧೋಗತಿಗೆ ತಳ್ಳುತ್ತಿದ್ದು, ಕರ್ನಾಟಕವೂ ಶೀಘ್ರದಲ್ಲೇ ದಿವಾಳಿ ಆಗಲಿದೆ ಎಂದು ಅಶೋಕ್ ಟ್ವೀಟ್ ಮಾಡಿ ಗೇಲಿ ಮಾಡಿದ್ದಾರೆ.