ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ದಾಳಿ

ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದ್ದು,
ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಲಾಗಿದೆ.

10 ಜನರ ತಂಡ ಮಾರಕಾಸ್ತ್ರಗಳಿಂದ ಧನರಾಜ್ ಭೋಲಾ ಮೇಲೆ
ದಾಳಿ ನಡೆಸಿದ್ದಾರೆ.

ನಂಜನಗೂಡು ಪಟ್ಟಣದ ಶಂಕರಪುರ ಬಡಾವಣೆ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ.

ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಭಾವಮೈದುನ ರಘು ಹಾಗೂ ಇತರರು ಅಟ್ಯಾಕ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಯಿಂದ ಧನರಾಜ್ ಭೋಲಾ ನ ಬೆರಳುಗಳು ಕಟ್ ಆಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಘು ಹಾಗೂ ಕಾರ್ತಿಕ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧನರಾಜ್ ಭೋಲಾ ನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.