ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

(ವರದಿ:ಸಿಬಿಎಸ್‌)

ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದ ಕೂಡಲೇ ಕೆಲಕಾಲ ಆತಂಕದ ವಾತಾವರಣ‌ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಪೊಲೀಸರು‌ ಸ್ಥಳಕ್ಜೆ ಧಾವಿಸಿ ದರು.

ಬೆದರಿಕೆ ಮೇಲ್‌ನ ಸಾರಾಂಶದ ಪ್ರಿಂಟೌಟ್ ತೆಗೆದು ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ಹೊರಡಿಸಿದ್ದರು.

ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ ನಡುವೆಯೂ ಜಿಲ್ಲಾಧಿಕಾರಿಗಳು ಸಭೆ ಮುಂದುವರೆಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ Read More

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ

ಮೈಸೂರು: ಶಾಸಕರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ಸೋಮವಾರ ಭಾವಪೂರ್ಣ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್. ಎಸ್, ಉಪಾಧ್ಯಕ್ಷರುಗಳಾದ ರಂಗಸ್ವಾಮಿ ಪಾಪು, ರಾಜೇಶ್ ಸಿ ಗೌಡ, ಶಿವಲಿಂಗಯ್ಯ, ರೇಷ್ಮಾ, ನಾಸೀರ್ ಖಾನ್, ನಿರೂಪಕ ಅಜಯ್ ಶಾಸ್ತ್ರಿ, ಶುಭಪಲ್ಲವಿ, ಗುರುರಾಜ್, ಸದಸ್ಯರುಗಳಾದ ಶ್ರೀಕಾಂತ, ಮೊಹಮ್ಮದ್ ಸಿದ್ದಿಖ್, ಚಿಕ್ಕಣ್ಣ ಶಿವರುದ್ರ, ರಾಜಶೇಖರ್ ಕಾರ್ತಿಕ್ ಲೋಕೇಶ್ ಮತ್ತಿತರರು ಹಾಜರಿದ್ದರು

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ Read More

ಲಯನ್ಸ್ ಪ್ರಾಂತೀಯ ಸಮ್ಮೇಳನ:’ಬದುಕಿ ಬದುಕಲು ಬಿಡಿ’ ಸಂದೇಶಕ್ಕೆ ಆದ್ಯತೆ

ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು.

ಬದುಕಿ ಬದುಕಲು ಬಿಡಿ ಎಂಬ ಮಾನವೀಯ ಸಂದೇಶವನ್ನು ಕೇಂದ್ರವಾಗಿಟ್ಟುಕೊಂಡು ಆಯೋಜಿಸಲಾಗಿದ್ದ ಈ ಸಮ್ಮೇಳನವು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮಹತ್ವವನ್ನು ಸಾರಿತು.

ಸಮ್ಮೇಳನವನ್ನು ಉದ್ಘಾಟಿಸಿದ ಗ್ರೀನ್ ಆಸ್ಕರ್ ಪ್ರಶಸ್ತಿ ವಿಜೇತರಾದ ಕೃಪಾಕರ ಮತ್ತು ಸೇನಾನಿ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ಬದುಕುವುದು ಅಗತ್ಯವಿದೆ. ಪ್ರತಿಯೊಬ್ಬರೂ ತಮ್ಮ ಬದುಕಿನ ಜೊತೆಗೆ ಇತರರ ಬದುಕಿನ ಹಕ್ಕನ್ನು ಗೌರವಿಸಿದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಮೈಸೂರು ರಂಗನಾಥ್ ಅವರನ್ನು ಗೌರವಿಸಲಾಯಿತು.

ಈ ವೇಳೆ ಪ್ರಾಂತೀಯ ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜು ಅವರು ಮಾತನಾಡಿ, “ಬದುಕಿ ಬದುಕಲು ಬಿಡಿ” ಎಂಬುದು ಕೇವಲ ನುಡಿ ಮಾತ್ರವಲ್ಲ, ಅದು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಮೌಲ್ಯವಾಗಿದೆ ಎಂದು ತಿಳಿಸಿದರು.

ಯುವಜನತೆ ಈ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಹೆಚ್ಚಲಿದೆ ಎಂದು ಹೇಳಿದರು.

ಲಯನ್ಸ್ ಅಂಬಾಸಿಡರ್ ಸಂಸ್ಥೆಯ ಸ್ಥಾಪಕ ಸದಸ್ಯರು ಅತಿಥಿಯ ಸಮಿತಿಯ ಅಧ್ಯಕ್ಷರಾದ ಲಯನ್ ಎಮ್. ಶಿವಕುಮಾರ್ ಅವರು ಪಿರಿಯಾಪಟ್ಟಣದ ಬೇಗೂರು ಗ್ರಾಮದಲ್ಲಿ ಯುವಕ ಯುವತಿಯರಿಗೆ ಸ್ವಉದ್ಯೋಗ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ, ಹೊಲಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಉದ್ದೇಶದಿಂದ ತಮ್ಮ ಎರಡು ಎಕರೆ ಜಾಗವನ್ನು ಲಯನ್ಸ್ ಕ್ಲಬ್ ಮೈಸೂರು ಅಂಬ್ಯಾಸಿಡರ್ ಸೇವಾ ಟ್ರಸ್ಟಿಗೆ ದಾನವಾಗಿ ನೀಡಿದರು.

ಪ್ರಾಂತೀಯ ಸಮ್ಮೇಳದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕ್ಯಾನ್ಸರ್ ಪಿಡೀತ ಎಂಟು ವರ್ಷದ ಮಗುವಿಗೆ 50,000 ಧನ ಸಹಾಯ ,ಹೊಲಿಗೆ ಯಂತ್ರಗಳು, ವಿದ್ಯಾರ್ಥಿಗಳಿಗೆ ಶುಲ್ಕ ವಿತರಿಸಲಾಯಿತು.

ಜಿಲ್ಲಾ ರಾಜ್ಯಪಾಲರಾದ ಲಯನ್ ಕೆ.ಎಲ್.ರಾಜಶೇಖರ ಅವರು ನಮ್ಮ ಜಿಲ್ಲೆಯಲ್ಲಿ ಲಯನ್ ಸಂಸ್ಥೆಗಳಿಂದ ಅತ್ಯಮೂಲ್ಯವಾದ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ಎಲ್ಲಾ ಸದಸ್ಯರಿಗೆ ಅಭಿನಂದನೆಗಳು ಎಂದು ಹೇಳಿದರು.

ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಎನ್ ಕೃಷ್ಣೇಗೌಡ ಅವರು ಮಾತನಾಡಿ ಪ್ರಸ್ತುತ ವಿದ್ಯಮಾನದಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ ಆದ್ದರಿಂದ ಅವುಗಳನ್ನು ನಿಯಂತ್ರಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷರಾದ ಬಾಲು ,ನಾಗರಾಜು, ಮೆಂಟರ್ ಕರಿಯಪ್ಪ, ಡಾ.ಆರ್.ಡಿ.ಕುಮಾರ್ ,ಕೆ.ಟಿ ವಿಷ್ಣು, ರಾಜೇಶ್ ಉಪಸ್ಥಿರಿದರು.

ವಿ.ಶ್ರೀಧರ್ ವಂದಿಸಿದರೆ ಕಾರ್ಯಕ್ರಮದ ನಿರೂಪಣೆಯನ್ನು ಸಿ.ಆರ್.ದಿನೇಶ್ ಮಾಡಿದರು.

ಲಯನ್ಸ್ ಪ್ರಾಂತೀಯ ಸಮ್ಮೇಳನ:’ಬದುಕಿ ಬದುಕಲು ಬಿಡಿ’ ಸಂದೇಶಕ್ಕೆ ಆದ್ಯತೆ Read More

ಜೋರ್ಡಾನ್ ಗೆ ಬಂದ ಮೋದಿ:ಆತ್ಮೀಯವಾಗಿ ಸ್ವಾಗತಿಸಿದ ಜಾಫರ್ ಹಸನ್

ಜೋರ್ಡಾನ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಷ್ಟ್ರಗಳ ಪ್ರವಾಸದಲ್ಲಿ ಸೋಮವಾರ ಜೋರ್ಡಾನ್ ರಾಜಧಾನಿ ಅಮ್ಮನ್‌ನಲ್ಲಿ ಬಂದಿಳಿದರು,ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಮೋದಿ‌ ಅವರ ಪ್ರವಾಸದಲ್ಲಿ ಇಥಿಯೋಪಿಯಾ ಮತ್ತು ಒಮಾನ್ ಕೂಡ ಸೇರಿವೆ.
ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ಅವರು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ 75 ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗಿದೆ, ಇದು ದ್ವಿಪಕ್ಷೀಯ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯ ಮೈಲಿಗಲ್ಲಾಗಿದೆ.

ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಡಿಸೆಂಬರ್ 15 ರಿಂದ 16 ರವರೆಗೆ ಜೋರ್ಡಾನ್‌ನಲ್ಲಿ ಇರಲಿದ್ದಾರೆ.

ಈ ಸಮಯದಲ್ಲಿ ಅವರು ಭಾರತ-ಜೋರ್ಡಾನ್ ಸಂಬಂಧಗಳ ಸಂಪೂರ್ಣ ಶ್ರೇಣಿಯನ್ನು ಪರಿಶೀಲಿಸಲು ಮತ್ತು ಪ್ರಾದೇಶಿಕ ಅಭಿವೃದ್ಧಿಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಭಾರತ ಮತ್ತು ಜೋರ್ಡಾನ್ ಆರೋಗ್ಯ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಾಮರ್ಥ್ಯ ವೃದ್ಧಿಯಲ್ಲಿ ಸಹಕರಿಸುತ್ತಿವೆ.

2021 ರಲ್ಲಿ ಉದ್ಘಾಟನೆಯಾದ ಭಾರತ-ಜೋರ್ಡಾನ್ ಮಾಹಿತಿ ತಂತ್ರಜ್ಞಾನದ ಶ್ರೇಷ್ಠತಾ ಕೇಂದ್ರವು ತರಬೇತಿಯನ್ನು ಗುರಿಯಾಗಿರಿಸಿಕೊಂಡ ಒಂದು ಪ್ರಮುಖ ಉಪಕ್ರಮವಾಗಿದೆ ಎಂದು ಬಿಂಬಿಸಲಾಗಿದೆ.

ಜೋರ್ಡಾನ್ ಗೆ ಬಂದ ಮೋದಿ:ಆತ್ಮೀಯವಾಗಿ ಸ್ವಾಗತಿಸಿದ ಜಾಫರ್ ಹಸನ್ Read More

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ

ಮೈಸೂರು: ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.

ಶಾಮನೂರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಅವರು ಶಾಮನೂರು ಶಿವಶಂಕರಪ್ಪ ನವರ ನಿಧನದ ಸುದ್ದಿ ತಿಳಿದು ಆಘಾತವಾಯಿತು ಹಾಗೂ ತೀವ್ರ ದುಃಖವನುಂಟು ಮಾಡಿದೆ ಎಂದು ಹೇಳಿದರು.

ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಮಾರ್ಗದರ್ಶಕರಾಗಿ ಅವರು ಸಲ್ಲಿಸಿದ ಸೇವೆ ಅಮೂಲ್ಯ,ದೀರ್ಘಕಾಲದ ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ಶಿಸ್ತಿನ ರಾಜಕಾರಣ ಮಾಡಿದ್ದರು.
ಅವರ ಅಗಲಿಕೆ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ರಾಜಕೀಯ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ, ಅವರ ಆದರ್ಶಗಳು ಹಾಗೂ ಸೇವಾ ಮನೋಭಾವ ಮುಂದಿನ ತಲೆಮಾರಿಗೆ ಪ್ರೇರಣೆಯಾಗಲಿದೆ ಎಂದು ನಜರ್ಬಾದ್ ನಟರಾಜ್ ತಿಳಿಸಿದರು.

ಎಸ್ ಎನ್ ರಾಜೇಶ್, ಕಡಕೋಳ ಶಿವಲಿಂಗು, ದಿನೇಶ್, ಮೊಹಮ್ಮದ್, ನಂಜುಂಡಸ್ವಾಮಿ,ರವಿಚಂದ್ರ, ದೀಪಕ್, ಹರೀಶ್ ನಾಯ್ಡು, ಲೋಕೇಶ್ ಮತ್ತುತರರು ಹಾಜರಿದ್ದರು.

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ Read More

ಶಾಮನೂರು ಅವರಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ರಾಮಾನುಜ ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅವರ ಸೇವೆಗಳನ್ನು ಸ್ಮರಿಸಲಾಯಿತು.

ಶಾಮನೂರು ಅವರಿಗೆ ಶ್ರದ್ಧಾಂಜಲಿ Read More

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ

ಮೈಸೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರು ಖಡಕ್ ಸೂಚನೆ ನೀಡಿದರು.

ಪೊಲೀಸ್ ಗೃಹ ನಿರ್ಮಾಣ ಸಂಘದ ಅಧ್ಯಕ್ಷ, ನಾಗೇಶ್, ಉಪಾಧ್ಯಕ್ಷ ಮರಿಗೌಡ ಹಾಗೂ ಯುವ ಮುಖಂಡ ಗಗನ್ ಅವರುಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದರು.

ಶಾಸಕರು ಬಡಾವಣೆಗೆ ಸಂಬಂಧಪಟ್ಟ ಅಧಿಕಾರಿಗಳೊಡನೆ ಚರ್ಚಿಸಿದರು,ಮತ್ತು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿ ಬಡಾವಣೆಯಲ್ಲಿರುವ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಡವಣಿಗೆ ಮೂರು ಬೋರ ಗಳನ್ನು ಹಾಕಿಸಬೇಕು ಕಾವೇರಿ ನೀರನ್ನು ಒಂದೂವರೆ ತಿಂಗಳಲ್ಲಿ ಕೊಡಬೇಕು ಮತ್ತು ಎರಡು ರಸ್ತೆಗಳನ್ನು ಮಾಡಿ ಮೂರು ಹೈಮಾಸ್ಟ್ ದೀಪಗಳನ್ನು ಹಾಕುವಂತೆ ಅಧಿಕಾರಿಗಳಿಗೆ ಜಿಟಿಡಿ ಸೂಚಿಸಿದರು.

ಇದೇ ವೇಳೆ ಜಿ ಟಿ ಗೌಡರ 75ನೇ ವರ್ಷದ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಪೆಟಲ್ಸ್ ಶಾಲೆಯ ಮಕ್ಕಳು ಹಾಡು ಹೇಳುವ ಮೂಲಕ ಆಚರಿಸಿ ಶಾಸಕರಿಗೆ ಶುಭ ಕೋರಿದರು.

ಈ ವೇಳೆ ಮಕ್ಕಳ ಜೊತೆ ಕೇಕ್ ಕತ್ತರಿಸಿ, ಗಿಡಗಳನ್ನು ನೆಡುವ ಮೂಲಕ ಜಿ ಟಿ ದೇವೇಗೌಡರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

ಇದೇ ಸಂದರ್ಭದಲ್ಲಿ ಯುವ ಮುಖಂಡ ಗಗನ್ ಅವರು ಮಾಡುತ್ತಿರುವ‌‌ ಸಮಾಜ ಸೇವೆಯನ್ನು ಗುರುತಿಸಿ ಬಡಾವಣೆ ಜನರು ಹಾಗೂ ಶಾಸಕರು ಸನ್ಮಾನ ಮಾಡಿದರು.

ಪೊಲೀಸ್ ಬಡಾವಣೆಯ ಜನತೆಯ ಕಷ್ಟಗಳಿಗೆ ತಕ್ಷಣ ಪರಿಹಾರ ಮಾಡಿಕೊಟ್ಟ ಶಾಸಕ ಜಿ.ಟಿ.ದೇವೇಗೌಡರಿಗೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ನಾಗರಿಕರು ವಂದನೆಗಳನ್ನು ಸಲ್ಲಿಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ Read More

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ

ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ
ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಮೆತ್ತಲೋಕ ವಿದ್ಯಾರ್ಥಿ ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸಿ ಎಚ್ ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಅವರು, ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ದೇಶದ ಅಭಿವೃದ್ಧಿ ಜೊತೆಗೆ ಹೆಚ್ಚಿನ ಆದ್ಯತೆಯ ಮೇಲೆ ರಾಜ್ಯದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ, ಇವರಿಗೆ ತಾಯಿ ಚಾಮುಂಡೇಶ್ವರಿ ಹೆಚ್ಚಿನ ಆರೋಗ್ಯ ಕರುಣಿಸಲಿ ಎಂದು ಹಾರೈಸಿದರು.

ಈಗಾಗಲೇ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಜನರ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ,
ಲಾಟರಿ ನಿಷೇಧ, ಸಾರಾಯಿ ನಿಷೇಧ, ಗ್ರಾಮ ವಾಸ್ತವ್ಯ, ರೈತರ ಸಾಲ ಮನ್ನಾ ಮತ್ತಿತರ ಒಳ್ಳೆಯ ಕೆಲಸ ಮಾಡಿ ಜನಪರ ಆಡಳಿತ ನೀಡಿದ್ದಾರೆ, ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಅವರು ತಾಯಿ ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ನಂತರ ಸ್ನೇಹ ಬಳಗದ ಸದಸ್ಯರು ವಿದ್ಯಾರ್ಥಿಗಳು ಎಚ್ ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್,ಸಿಂಚನಗೌಡ, ವಿದ್ಯಾ, ನಾಗಶ್ರೀ ಸುಚಿಂದ್ರ, ಛಾಯಾ,ಗಾಯಕ ಯಶವಂತ್ ಕುಮಾರ್, ಜಗದೀಶ್,ರಾಜೇಶ್ ಕುಮಾರ್,ಮಹೇಶ, ಶ್ರೀಧರ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್ ,ದತ್ತ ಮತ್ತಿತರರು ಹಾಜರಿದ್ದರು.

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ Read More

ಮಾಜಿ ಸಚಿವ, ದಾವಣಗೆರೆ‌ ಧಣಿ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದಾರೆ.

ಅವರಿಗೆ‌ 95 ವರ್ಷಗಳಾಗಿತ್ತು,ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಭಾನುವಾರ ಸುಮಾರು 6.45 ರ ಸಮಯದಲ್ಲಿ ವಿಧಿವಶರಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯ ವಿಚಾರಿಸಿದ್ದರು.

ಶಾಮನೂರ್ ಶಿವಶಂಕರಪ್ಪ ಅವರು 1931 ಜೂನ್‌ 16ರಂದು ಶಾಮನೂರು ಕಲ್ಲಪ್ಪ – ಶಾಮನೂರು ಸಾವಿತ್ರಮ್ಮ ದಂಪತಿ ಪುತ್ರನಾಗಿ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು.
ಅವರು ಪತ್ನಿ ಪಾರ್ವತಮ್ಮ, ನಾಲ್ವರು ಪುತ್ರಿಯರಾ ಡಾ. ಮಂಜುಳಾ ಶಿವಶಂಕರ್, ಸುಧಾ ಪಾಟೀಲ್, ಡಾ. ಶೈಲಜಾ ಭಟ್ಟಾಚಾರ್ಯ, ಮೀನಾ ಡಾ. ಶರಣ್‌ ಪಾಟೀಲ್ ಹಾಗೂ ಮೂವರು ಗಂಡು ಮಕ್ಕಳಾದ ಎಸ್.ಎಸ್ ಬಕ್ಕೇಶ್, ಎಸ್.ಎಸ್ ಗಣೇಶ್, ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಬಂಧು ಬಳಗ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಶಾಮನೂರು ಶಿವಶಂಕರಪ್ಪನವರು 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. 1971 ರಿಂದ 1973ರ ವರೆಗೆ ಅವಿಭಜಿತ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1980ರಲ್ಲಿ ಲೋಕಸಭಾ ಚುನಾವಣೆಗೆ ಅರಸು ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇಂದಿರಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಟಿ.ವಿ ಚಂದ್ರಶೇಖರಪ್ಪರ ವಿರುದ್ಧ ಪರಾಭವಗೊಂಡರು.

ಇದಾದ ಬಳಿಕ 1994ರಲ್ಲಿ ನಡೆದ 10ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಖಾಡಕ್ಕಿಳಿದ ಅವರು ಬಿಜೆಪಿ ಅಭ್ಯರ್ಥಿ ಕೆ.ಬಿ ಶಂಕರನಾರಾಯಣರನ್ನ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

1997 ರಲ್ಲಿ ಲೋಕಸಭಾ ಚುನಾವಣೆಗೆ ಸ್ಫರ್ಧಿಸಿದ ಶಿವಶಂಕರಪ್ಪ, ಬಿಜೆಪಿ ಅಭ್ಯರ್ಥಿ ಜಿ.ಮಲ್ಲಿಕಾರ್ಜುನಪ್ಪ ಅವರನ್ನ ಸೋಲಿಸಿ ಸಂಸದರಾದರು. 2004 ರಲ್ಲಿ ಶಿವಶಂಕರಪ್ಪ 2ನೇ ಬಾರಿ ಶಾಸಕರಾಗಿ ಆಯ್ಕೆಯಾದರು. ಆ ನಂತರ 2008 ರಲ್ಲಿ 3ನೇ ಬಾರಿಗೆ. 2013 ರಲ್ಲಿ 4ನೇ ಬಾರಿಗೆ, 2018ರಲ್ಲಿ 5ನೇ ಬಾರಿಗೆ ಹಾಗೂ 2023ರಲ್ಲಿ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಶಾಮನೂರು ಅವರು 2013 ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಸಂಪುಟದಲ್ಲಿ ಎರಡೂವರೆ ವರ್ಷ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸಂತಾಪ: ಮುಖ್ಯ ಮಂತ್ರಿ ಸಿದ್ದ ರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್,ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್,ಬಸವರಾಜ ಬೊಮ್ಮಾಯಿ,ಪ್ರತಿಪಕ್ಷ ನಾಯಕ ಆರ್.ಅಶೋಕ,ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಸೇರಿದಂತೆ ರಾಜಕೀಯ ನಾಯಕರು ಪಕ್ಷಾತೀತವಾಗಿ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ, ದಾವಣಗೆರೆ‌ ಧಣಿ ಶಾಮನೂರು ಶಿವಶಂಕರಪ್ಪ ವಿಧಿವಶ Read More

ಮತದಾನದ ಶಕ್ತಿಯೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ-ಸಿದ್ದರಾಮಯ್ಯ

ನವದೆಹಲಿ: ಮತದಾನದ ಶಕ್ತಿಯೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ ಎಂದು ಮುಖ್ಯ ಮಂತ್ರಿ ಸುದ್ದರಾಮಯ್ಯ ಹೇಳಿದರು.

ದೆಹಲಿಯಲ್ಲಿ ಮತಗಳ್ಳತನದ ಬಗ್ಗೆ ನಡೆದ ಲಿಯಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ,
ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಅತ್ಯಂತ ಪವಿತ್ರ ಹಕ್ಕು ಮತದಾನದ ಹಕ್ಕನ್ನು ರಕ್ಷಿಸಲು ಬಂದಿದ್ದೇವೆ ಎಂದು ತಿಳಿಸಿದರು.

ಒಬ್ಬ ರೈತ ತನ್ನ ಮಕ್ಕಳ ಭವಿಷ್ಯವನ್ನು ರೂಪಿಸಲು, ಒಬ್ಬ ಕಾರ್ಮಿಕ ತನ್ನ ಘನತೆಯನ್ನು ಕಾಯ್ದುಕೊಳ್ಳಲು, ಒಬ್ಬ ಯುವಕ ತನ್ನ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಒಂದು ರಾಷ್ಟ್ರ ತನ್ನ ಸಾಮೂಹಿಕ ಇಚ್ಛೆಯನ್ನು ಘೋಷಿಸಲು ಇರುವ ಸಾಧನವೇ ಮತದಾನ ಎಂದು ಬಣ್ಣಿಸಿದರು.

ಇಂದು ಬಿಜೆಪಿ ಸರ್ಕಾರವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ದುರುಪಯೋಗ ಸೇರಿದಂತೆ ವಿವಿಧ ಮತಗಳ್ಳತನ ವಿಧಾನಗಳ ಮೂಲಕ ಈ ಪವಿತ್ರ ಶಕ್ತಿಯನ್ನು ಕಸಿಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಒಂದು ಬಾರಿಯಲ್ಲ, ಎರಡಲ್ಲ, ಪದೇ ಪದೇ ಕದಿಯಲಾಗುತ್ತಿದೆ. ಅದಕ್ಕಾಗಿ ಭಾರತದ ಜನತೆ ಇಲ್ಲಿಗೆ ಬಂದು ಸಾಕು, ಮತಳ್ಳತನವನ್ನು ನಿಲ್ಲಿಸಿ, ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಹೇಳುತ್ತಿದ್ದಾರೆ.ಇತಿಹಾಸ ನಮಗೆ ಕಲಿಸಿದ ಪಾಠವೆಂದರೆ, ಸರ್ವಾಧಿಕಾರವು ಬೀದಿಗಳಲ್ಲಿ ಬಂದೂಕುಗಳಿಂದ ಪ್ರಾರಂಭವಾಗುವುದಿಲ್ಲ. ಅದು ಸಂಸ್ಥೆಗಳ ದುರ್ಬಳಕೆ ಹಾಗೂ ನಿಧಾನವಾಗಿ ವ್ಯವಸ್ಥೆಗಳನ್ನು ಅಗತ್ಯಕ್ಕೆ ತಕ್ಕಂತೆ ತಿರುಚುವ ಮತ್ತು ಅಂತಿಮವಾಗಿ, ಚುನಾವಣೆಗಳ ಕಳ್ಳತನದಿಂದ ಪ್ರಾರಂಭವಾಗುತ್ತದೆ
ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ರಕ್ಷಿಸುವಂತೆ ನಟಿಸುತ್ತಲೇ, ಅದನ್ನು ಬುಡಮೇಲು ಮಾಡುವುದನ್ನೇ ಪ್ರಪಂಚದಾದ್ಯಂತದ ಸರ್ವಾಧಿಕಾರಿ ಆಡಳಿತಗಳು ಮೂಲ ತಂತ್ರವನ್ನಾಗಿಸಿದೆ ಇಂದು ಬಿಜೆಪಿ ಇದನ್ನೇ ಮಾಡುತ್ತಿದೆ ಎಂದು ಸಿಎಂ ಹೇಳಿದರು.

ಕದ್ದ ಮತಗಳಿಂದ ಅಧಿಕಾರಕ್ಕೆ ಬಂದ ಸರ್ಕಾರವು ಪ್ರಜಾಸತ್ತಾತ್ಮಕ ಸರ್ಕಾರವಲ್ಲ ಎಂಬುದು ಸುಸ್ಪಷ್ಟ. ಅದು ಜನರನ್ನು ಹೆದರಿಸುವ, ಜನಾದೇಶವನ್ನು ತಿರುಚುವ, ಮತ್ತು ವಂಚನೆಯ ಮೂಲಕ ಮಾತ್ರ ಬದುಕುಳಿಯುವ ಸರ್ಕಾರ. ಇದು, ಪ್ರಜಾಪ್ರಭುತ್ವಗಳು ಚುನಾವಣಾ ದೌರ್ಜನ್ಯಗಳ ಮಟ್ಟಕ್ಕೆ ಇಳಿಯುವ ರೀತಿಯಾಗಿದೆ. ಇಂದು ಬಿಜೆಪಿಯ ‘ಮತಗಳ್ಳತನ’ವು ಸ್ವಾತಂತ್ರ್ಯಾನಂತರದ ನಮ್ಮ ಗಣರಾಜ್ಯಕ್ಕೆ ಎದುರಾದ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಂತಹ ಕ್ಲಿಷ್ಟಕರ ಸಮಯದಲ್ಲಿ , ಅಸಾಧಾರಣ ಧೈರ್ಯದಿಂದ ನಿಂತಿರುವ ಏಕೈಕ ನಾಯಕ ರಾಹುಲ್ ಗಾಂಧಿಯವರು. ರಾಹುಲ್ ಗಾಂಧಿಯವರು ಹೊಂದಿಕೆಯಾಗದ ಮತದಾರರ ಪಟ್ಟಿಗಳನ್ನು, ಬೂತ್ ಮಟ್ಟದಲ್ಲಿ ತಿರುಚಿದ ಅಂಶಗಳನ್ನು ಮತ್ತು ವ್ಯವಸ್ಥಿತ, ಸಂಘಟಿತ ಮತಗಳ್ಳತನ’ವನ್ನು ತನಿಖೆಯ ಮೂಲಕ ಬಯಲು ಮಾಡಿದರು ಎಂದು ಸಿದ್ದು ಹೇಳಿದರು.

ಕರ್ನಾಟಕದ ಮಹದೇವಪುರ ಮತ್ತು ಆಳಂದ ವಿಧಾನಸಭಾ ಕ್ಷೇತ್ರಗಳಲ್ಲಿ, ‘ವೋಟ್ ಚೋರಿ’ ಕೇವಲ ಆರೋಪವಾಗಿರದೇ, ಜೀವಂತ ವಾಸ್ತವ ಎಂದು ರಾಹುಲ್ ಗಾಂಧಿಯವರು ಗಂಭೀರ ಅಕ್ರಮಗಳನ್ನು ಉದಾಹರಣೆಗಳಾಗಿ ಎತ್ತಿ ತೋರಿಸಿದ್ದಾರೆ ಎಂದು ತಿಳಿಸಿದರು.

ನಿನ್ನೆ ಒಂದು ವಿಶೇಷ ತನಿಖಾ ತಂಡ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ಇದರಲ್ಲಿ ಮಾಜಿ ಬಿಜೆಪಿ ಶಾಸಕರು ಮತ್ತು ಅವರ ಪುತ್ರ ಸೇರಿದಂತೆ ಏಳು ವ್ಯಕ್ತಿಗಳು ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತದಾರರ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಿದ ಆರೋಪವಿದೆ. ಇದು “ಮತಗಳತನ’ ವಿರುದ್ಧದ ಹೋರಾಟದಲ್ಲಿ ಮಹತ್ವದ ಕಾನೂನು ಹೆಜ್ಜೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇಂದು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಕೋಟ್ಯಂತರ ಭಾರತೀಯರು ನಮ್ಮ ಪ್ರಜಾಪ್ರಭುತ್ವವನ್ನು ಕದಿಯಲು ನಾವು ಬಿಡುವುದಿಲ್ಲ ಎಂದು ಹೇಳುವ ಮನವಿಪತ್ರದ ಮೇಲೆ ಸಹಿ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಮತವನ್ನು ರಕ್ಷಿಸಿ,
ನಿಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಿ,
ನಿಮ್ಮ ಭವಿಷ್ಯವನ್ನು ರಕ್ಷಿಸಿ ಎಂದು ದೇಶದ ಜನರಿಗೆ ಕರೆ ನೀಡಿದರು
ಮತಗಳ್ಳತನದ ಹಿಂಬಾಗಿಲಿನ ಮೂಲಕ ಫ್ಯಾಸಿಸಂ ಭಾರತವನ್ನು ಪ್ರವೇಶಿಸಲು ಬಿಡುವುದಿಲ್ಲ ಎಂದು ನಾವು ಘೋಷಿಸಬೇಕಿದೆ.

ನಾವು ಕೋಟ್ಯಂತರ ಭಾರತೀಯರ ಸಹಿಯನ್ನು ಇಲ್ಲಿ ಹಸ್ತಾಂತರಿಸುತ್ತಿದ್ದೇವೆ, ಇದು ಕದ್ದ ಯಾವುದೇ ಚುನಾವಣೆಗಿಂತ ಬಲವಾದ ನೈತಿಕ ಜನಾದೇಶವಾಗಿದೆ ಎಂದು ತಿಳಿಸಿದರು.
ಒಂದು ರಾಷ್ಟ್ರವಾಗಿ, ಒಂದು ಜನರಾಗಿ, ಒಂದು ಪ್ರಜಾಪ್ರಭುತ್ವವಾಗಿ ಏಳೋಣ.
ಮತಗಳ್ಳತನ’ ಭಾರತಕ್ಕೆ ಬೆದರಿಕೆಯೊಡ್ಡಿದಾಗ, ಜನರು ಅದರ ವಿರುದ್ಧ ತಿರುಗಿ ನಿಂತು ಗೆದ್ದರು ಎಂದು ಇತಿಹಾಸದಲ್ಲಿ ದಾಖಲಾಗಲಿ ಸಿಎಂ ಆಶಿಸಿದರು.

ಮತದಾನದ ಶಕ್ತಿಯೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ-ಸಿದ್ದರಾಮಯ್ಯ Read More