ಕನ್ನಡ ರಾಜ್ಯೋತ್ಸವದಲ್ಲಿ ಸಾಧಕರಿಗೆ ಸನ್ಮಾನ

ಮೈಸೂರು: ಶ್ರೀ ದತ್ತಾತ್ರೇಯ ಪ್ರತಿಷ್ಠಾನ ಮತ್ತು ಕರ್ನಾಟಕ ಬಸವೇಶ್ವರ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ, ಶ್ರೀ ಶಿವರಾತ್ರಿಶ್ವರ ಆಟೋಚಾಲಕ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್, ಕಾಲಾ ಶನೇಶ್ವರ ಸ್ವಾಮಿ ದೇವಸ್ಥಾನ ಮುಖ್ಯಸ್ಥರಾದ ಸೂರ್ಯ ದೇವ , ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕಮಲಾ ನಟರಾಜ್ ಮತ್ತಿತರ ಸಾಧಕರನ್ನು ಗೌರವಿಸಲಾಯಿತು.

ಕನ್ನಡ ರಾಜ್ಯೋತ್ಸವದಲ್ಲಿ ಸಾಧಕರಿಗೆ ಸನ್ಮಾನ Read More

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಮಹತ್ವದ ವೇದಿಕೆ ಎನ್ಎಸ್ಎಸ್-ಸಿ.ಆರ್.ದಿನೇಶ್

ಹುಣಸೂರು: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಜ್ಯ ಪ್ರಶಸ್ತಿ ವಿಜೇತರಾದ ಸಿ ಆರ್ ದಿನೇಶ್ ತಿಳಿಸಿದರು.

ತಟ್ಟೆಕೆರೆ ಗ್ರಾಮದಲ್ಲಿ ಅಯೋಜಿಸಲಾಗಿದ್ದ
ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ
ಸಮಾರೋಪ ಭಾಷಣದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ, ಪುಸ್ತಕದ ಜ್ಞಾನಕ್ಕಿಂತ ಹೊರತಾಗಿ ಸಮಾಜದ ನೈಜ ಸಮಸ್ಯೆಗಳನ್ನು ಅರಿಯಲು ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸುತ್ತವೆ ಎಂದು ಹೇಳಿದರು.

ಎನ್ಎಸ್ಎಸ್ ಶಿಬಿರಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ತಪಾಸಣೆ ಶಿಬಿರಗಳು, ಮಹಿಳಾ ಸಬಲೀಕರಣ, ಮತದಾರರ ಜಾಗೃತಿ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ಡಿಜಿಟಲ್ ಸಾಕ್ಷರತೆ ಹಾಗೂ ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿರುವುದನ್ನು ದಿನೇಶ್ ಅವರು ಪ್ರಶಂಸಿಸಿದರು.

ಈ ಎಲ್ಲ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುವಲ್ಲಿ ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.
ಹುಣಸೂರಿನ ತಹಸಿಲ್ದಾರರಾದ ಮಂಜುನಾಥ್ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ರಾಷ್ಟ್ರದ ಭವಿಷ್ಯ ಎಂದು ತಿಳಿಸಿದರು.

ಸೇವೆಯ ಮೂಲಕ ಸ್ವಭಾವ ನಿರ್ಮಾಣವೇ ಎನ್ ಎಸ್ ಎಸ್ ಮೂಲ ತತ್ವ. ಸೇವೆಯ ಅನುಭವದಿಂದ ವಿದ್ಯಾರ್ಥಿಗಳಲ್ಲಿ ಸಹಾನುಭೂತಿ, ನಾಯಕತ್ವ ಮತ್ತು ಶಿಸ್ತು ಗುಣಗಳು ಬೆಳೆಯುತ್ತವೆ ಎಂದು ಹೇಳಿದರು.

ಪ್ರತಿಯೊಬ್ಬ ಎನ್ಎಸ್ಎಸ್ ಸ್ವಯಂಸೇವಕರು ತಮ್ಮ ಜೀವನದಲ್ಲಿಯೂ ಸೇವಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪತ್ರಕರ್ತ ಹನುಗೋಡು ನಟರಾಜ್ ಅವರು ಮಾತಾಡಿ, ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಸಾಧ್ಯವಾಗುತ್ತದೆ. ಉನ್ನತ ಹುದ್ದೆ ಪಡೆದವರು ಅವರ ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರದಲ್ಲಿ ಭಾಗವಹಿಸಿದ ಪರಿಣಾಮವಾಗಿ ಅವರುಗಳು ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ಕೊಡಗಿನ ಈ ಹಿಂದೆ ಜಿಲ್ಲಾಧಿಕಾರಿ ಆಗಿದ್ದ ಐಎಎಸ್ ಅಧಿಕಾರಿ ಶ್ರೀವಿದ್ಯಾ ಇದಕ್ಕೆ ಉದಾಹರಣೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮೇಗೌಡ ಅವರು ಅಧ್ಯಕ್ಷೀಯ ಭಾಷಣ ಮಾಡಿ ರಾಷ್ಟ್ರೀಯ ಸೇವಾ ಯೋಜನೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತಟ್ಟೆಕೆರೆ ಶ್ರೀನಿವಾಸ್ ವಿದ್ಯಾರ್ಥಿನಿಯರು ನಮ್ಮ ಗ್ರಾಮಕ್ಕೆ ಆಗಮಿಸಿ ಬಹಳ ಅಚ್ಚುಕಟ್ಟಾಗಿ ಸ್ವಚ್ಛತೆಯ ಅರಿವು ಮೂಡಿಸಿದ್ದಾರೆ. ನಮ್ಮ ಗ್ರಾಮಸ್ಥರು ಎಲ್ಲಾ ರೀತಿಯಲ್ಲೂ ಅವರಿಗೆ ಸಹಕಾರ ನೀಡಿದ್ದಾರೆ. ಅದಕ್ಕಾಗಿ ಎಲ್ಲಾ ಗ್ರಾಮಸ್ಥರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದೇವರಾಜ್ ಅವರು ವಾರ್ಷಿಕ ವರದಿಯನ್ನು ಮಂಡಿಸಿ, ಸ್ವಯಂಸೇವಕರ ಶ್ರಮ, ತ್ಯಾಗ ಮತ್ತು ಸೇವಾಭಾವವನ್ನು ಸ್ಮರಿಸಿದರು.

ಸಮಾರಂಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಎನ್ಎಸ್ಎಸ್ ಸ್ವಯಂಸೇವಕರಿಗೆ ಹಾಗೂ ತಂಡಗಳಿಗೆ ಪ್ರಮಾಣಪತ್ರಗಳು ಮತ್ತು ಗೌರವ ಪತ್ರಗಳನ್ನು ವಿತರಿಸಲಾಯಿತು.

ಸುಶ್ಮಿತಾ ತಮ್ಮ ಶಿಬಿರ ಅನುಭವಗಳನ್ನು ಹಂಚಿಕೊಂಡು,ಎನ್ಎಸ್ಎಸ್ ಜೀವನದಲ್ಲಿ ತಂದಿರುವ ಸಕಾರಾತ್ಮಕ ಬದಲಾವಣೆಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೌರಮ್ಮ, ಉಪಾಧ್ಯಕ್ಷರಾದ ನಟರಾಜು ,ಉಪನ್ಯಾಸಕರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಯಜಮಾನರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಮಹತ್ವದ ವೇದಿಕೆ ಎನ್ಎಸ್ಎಸ್-ಸಿ.ಆರ್.ದಿನೇಶ್ Read More

ಕೆ ಆರ್ ಬ್ಯಾಂಕಿನ ನೂತನ ದಿನದರ್ಶಿಕೆ ಬಿಡುಗಡೆ

ಮೈಸೂರು: ಮೈಸೂರಿನ ಅಗ್ರಹಾರದ ಕೃಷ್ಣರಾಜೇಂದ್ರ ಬ್ಯಾಂಕಿನ 2026ರ ದಿನದರ್ಶಿಕೆಯನ್ನು ಹೊರತರಲಾಗಿದ್ದು,
ಭಾನುವಾರ ಬಿಡುಗಡೆ ಮಾಡಲಾಯಿತು.

ಕೆ.ಆರ್. ಬ್ಯಾಂಕಿನ ಅಧ್ಯಕ್ಷ ಬಸವರಾಜು ಬಸಪ್ಪ ಹಾಗೂ ಸಹಕಾರ ಇಲಾಖೆಯ ಉಪ ನಿಬಂಧಕ ವೀರೇಂದ್ರ ಅವರು ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಉಪ ನಿಬಂಧಕ ವೀರೇಂದ್ರ ಅವರು ಮಾತನಾಡಿ, ಗ್ರಾಹಕರಿಗೆ ಸೇವಾ ಸೌಲಭ್ಯ ಬ್ಯಾಂಕಿನ ವತಿಯಿಂದ ನಿರಂತರವಾಗಿ ತಲುಪಲಿ. ಬ್ಯಾಂಕ್ ಯಶಸ್ವಿಯಾಗಿ ಮುಂದುವರಿಯಲಿ, ಇದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಇಲಾಖೆ ಕೊಡಲಿದೆ ಎಂದು ತಿಳಿಸಿದರು.

ಬ್ಯಾಂಕಿನ ಅಧ್ಯಕ್ಷ ಬಸವಾರಾಜು ಬಸಪ್ಪ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು ಎಂದು ಹೇಳಿದರು.

ಬ್ಯಾಂಕಿನ ಅಭಿವೃದ್ಧಿಗೆ ನಮ್ಮ ಆಡಳಿತ ಮಂಡಳಿಯ ಎಲ್ಲರ ಸಹಕಾರವಿದೆ. ಮುಂದಿನ ದಿನಗಳಲ್ಲಿ ಹೊಸ ಹೊಸ ಶಾಖೆಗಳನ್ನು ತೆರೆಯುವ ಆಲೋಚನೆ ಇದೆ. ಬ್ಯಾಂಕಿನ ಎಲ್ಲ ಸದಸ್ಯರಿಗೆ ಕ್ಯಾಲೆಂಡರ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕರಾದ ನಂ.ಸಿದ್ದಪ್ಪ, ಹೆಚ್. ವಾಸು, ಪ್ರತಿದ್ವನಿ ಪ್ರಸಾದ್, ನಾಗಜ್ಯೋತಿ, ಪಂಚಾಕ್ಷರಿ, ಗಣೇಶ ಮೂರ್ತಿ, ಶಿವಪ್ರಕಾಶ್, ಅಧಿಕಾರಿಗಳಾದ ಸಹಾಯಕ ನಿರೀಕ್ಷಕ ಕೆ.ರಾಜು, ಕೆಆರ್ ಬ್ಯಾಂಕಿನ ಮ್ಯಾನೇಜರ್ ಅನಂತ ವೀರಪ್ಪ ಮತ್ತಿತರರು ಹಾಜರಿದ್ದರು.

ಕೆ ಆರ್ ಬ್ಯಾಂಕಿನ ನೂತನ ದಿನದರ್ಶಿಕೆ ಬಿಡುಗಡೆ Read More

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಗುಂಡಿನ ದಾಳಿ, 10 ಮಂದಿ ಬಲಿ

ಸಿಡ್ನಿ: ಆಸ್ಟ್ರೇಲಿಯದ ಸಿಡ್ನಿಯ ಬೊಂಡಿ ಬೀಚ್​ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಬಲಿಯಾಗಿದ್ದಾರೆ.

ದಾಳಿ ವೇಳೆ ಪೊಲೀಸರು ಹಾಗೂ ಇಬ್ಬರು ಗನ್ ಮೆನ್ ಗಳು ಕೂಡಾ ಮೃತಪಟ್ಟಿದ್ದಾರೆ.ಒಬ್ಬ ಗನ್ ಮ್ಯಾನ್ ಸ್ಥಿತಿ ಚಿಂತಾಜನಕವಾಗಿದೆ.15 ಮಂದಿ ಗಾಯಗೊಂಡಿದ್ದಾರೆ.

ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಆಂತೋನಿ ಆಲಬೆನಸ್ ದುಃಖ ವ್ಯಕ್ತಪಡಿಸಿದ್ದು,ಇದು ಆಘಾತಕಾರಿ ಘಟನೆ ಎಂದು ತಿಳಿಸಿದ್ದಾರೆ.

ರಕ್ಷಣಾ ಕಾರ್ಯ ಮುಂದುವರಿದಿದೆ,ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಗುಂಡಿನ ದಾಳಿ, 10 ಮಂದಿ ಬಲಿ Read More

ಫುಟ್‌ಬಾಲ್‌ ಆಟಗಾರ ಮೆಸ್ಸಿ ನೋಡಲಾಗದೆ ಅಭಿಮಾನಿಗಳ ದಾಂಧಲೆ!

ಕೋಲ್ಕತಾ: ಖ್ಯಾತ ಫುಟ್‌ಬಾಲ್‌ ಆಟಗಾರ ಲಿಯೋನೆಲ್ ಮೆಸ್ಸಿ 3 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು,ಕೋಲ್ಕತ್ತಾ‌ ಕ್ರೀಡಾಂಗಣದಲ್ಲಿ ಅಭಿಮಾನಿಗಳು ದಾಂಧಲೆ ನಡೆಸಿದರು.

ಮೆಸ್ಸಿ ಬೆಳಿಗ್ಗೆ ಕೋಲ್ಕತ್ತಾಗೆ ಆಗಮಿಸಿ ಸಾಲ್ಟ್ ಲೇಕ್ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. ಆದರೆ ಮೆಸ್ಸಿ ಕೇವಲ 10 ನಿಮಿಷ ಕ್ರೀಡಾಂಗಣದಲಿದ್ದು, ಅಲ್ಲಿಂದ ಹೊರಟುಬಿಟ್ಟರು.

ಮೆಸ್ಸಿ ನೋಡಲೆಂದೆ ಅಭಿಮಾನುಗಳು 5000 ದಿಂದ 50000 ಸಾವಿರದವರೆಗೆ ಟಿಕೆಟ್ ಕೊಟ್ಟು ಸ್ಟೇಡಿಯಂಗೆ ಬಂದಿದ್ದರು.ಆದರೆ ಮೆಸ್ಸಿಯನ್ನ ನೋಡಲಾಗದೇ ಹತಾಶೆಯಿಂದ ಸ್ಟೇಡಿಯಂನ ವಿಐಪಿ ಗೇಟ್​​​ನಿಂದ ಮೈದಾನಕ್ಕೆ ನುಗ್ಗಲು ಯತ್ನಿಸಿದರು.

ಈ ವೇಳೆ ಅಭಿಮಾನಿಗಳು ತೀವ್ರ ಆಕ್ರೋಶಗೊಂಡು ಆಸನಗಳನ್ನ ಮೈದಾನಕ್ಕೆ ಎಸೆದಿದ್ದಾರೆ. ಅಭಿಮಾನಿಗಳನ್ನ ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಅಭಿಮಾನಿಗಳು ಕೈಗೆ ಸಿಕ್ಕಿದ್ದನ ಭದ್ರತಾಪಡೆಗಳ ಮೇಲೂ ಎಸೆದಿದ್ದರೆ,ಒಂದು ಹಂತದಲ್ಲಿ ಅಭಿಮಾನಿಗಳ ದಾಂಧಲೆಯಿಂದ ತಪ್ಪಿಸಿಕೊಳ್ಳಲು ಪೊಲೀಸರು ಮೈದಾನಕ್ಕೆ ಓಡಿದರು.ಈ‌ ಸಂದರ್ಭದಲ್ಲಿ
ಕೆಲ ಸಿಬ್ಬಂದಿ ಗಾಯಗೊಂಡಿದ್ದಾರೆ.

ಫುಟ್‌ಬಾಲ್‌ ಆಟಗಾರ ಮೆಸ್ಸಿ ನೋಡಲಾಗದೆ ಅಭಿಮಾನಿಗಳ ದಾಂಧಲೆ! Read More

H-1B ವೀಸಾ ಅರ್ಜಿಗಳಿಗೆ 100,000 ಡಾಲರ್​ ಶುಲ್ಕ: ಟ್ರಂಪ್‌ ವಿರುದ್ಧ ಮೊಕದ್ದಮೆ

ವಾಶಿಂಗ್ಟನ್:‌ H-1B ವೀಸಾ ಅರ್ಜಿಗಳಿಗೆ ಅಗತ್ಯವಿರುವ ಹೊಸ ಶುಲ್ಕ 100,000 ಡಾಲರ್​ ಶುಲ್ಕ ವಿಧಿಸಿರುವ ಟ್ರಂಪ್​ ಆದೇಶವನ್ನು ಪ್ರಶ್ನಿಸಿ ಅಮೆರಿಕದ ಇಪ್ಪತ್ತು ರಾಜ್ಯಗಳು ಮೊಕದ್ದಮೆ ಹೂಡಿವೆ.

ಈ ನೀತಿ ಕಾನೂನುಬಾಹಿರವಾಗಿದ್ದು, ಪ್ರಮುಖ ಸಾರ್ವಜನಿಕ ಸೇವೆಗಳಿಗೆ ಗಂಭೀರ ಬೆದರಿಕೆಯನ್ನು ಒಡ್ಡಿದೆ ಎಂದು ಪ್ರತಿಪಾದಿಸಲಾಗಿದೆ.

ಈ ವೀಸಾ ಯೋಜನೆಯನ್ನು ಆಸ್ಪತ್ರೆಗಳು, ವಿಶ್ವವಿದ್ಯಾಲಯಗಳು ಮತ್ತು ಸಾರ್ವಜನಿಕ ಶಾಲೆಗಳು ವ್ಯಾಪಕವಾಗಿ ಬಳಸುತ್ತಿವೆ. ಈ ಶುಲ್ಕ ಹೆಚ್ಚಳವು ಹೆಚ್ಚು ಕೌಶಲ್ಯಪೂರ್ಣ ವಿದೇಶಿ ಕೆಲಸಗಾರರನ್ನು ನೇಮಿಸಿಕೊಳ್ಳಲು ಬಯಸುವ ಉದ್ಯೋಗದಾತರ ಮೇಲೆ ಭಾರೀ ಹೊರೆಯಾಗುತ್ತದೆ ಎಂದು ಅರ್ಜಿಯಲ್ಲಿ
ತಿಳಿಸಲಾಗಿದೆ.

ಟ್ರಂಪ್ ಆಡಳಿತವು ಶುಲ್ಕ ವಿಧಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ರಾಬ್ ಬೊಂಟಾ ಹೇಳಿದ್ದಾರೆ.

ಪ್ರಪಂಚದಾದ್ಯಂತದ ಕೌಶಲ್ಯಪೂರ್ಣ ಪ್ರತಿಭೆಗಳು ನಮ್ಮ ಕಾರ್ಯಪಡೆಗೆ ಸೇರಿದಾಗ ಅವರು ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ.

ಅಧ್ಯಕ್ಷ ಟ್ರಂಪ್ ವಿಧಿಸಿರುವ ಈ ಅಕ್ರಮ 100,000 ಡಾಲರ್​ ಶುಲ್ಕವು ಕ್ಯಾಲಿಫೋರ್ನಿಯಾದ ಸಾರ್ವಜನಿಕ ಸಂಸ್ಥೆಗಳ ಮೇಲೆ ಅನಗತ್ಯ ಹೊರೆಯನ್ನು ಹೆಚ್ಚುವಂತೆ ಮಾಡುತ್ತಿದೆ. ಇದು ಪ್ರಮುಖ ವಲಯಗಳಲ್ಲಿ ಕಾರ್ಮಿಕರ ಕೊರತೆಯನ್ನು ಉಲ್ಬಣಗೊಳಿಸುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ರಾಬ್ ಬಂಟಾ ಮತ್ತು ಮ್ಯಾಸಚೂಸೆಟ್ಸ್ ಅಟಾರ್ನಿ ಜನರಲ್ ಆಂಡ್ರಿಯಾ ಜಾಯ್ ಕ್ಯಾಂಪ್ಬೆಲ್ ಅವರು ಈ ಮೊಕದ್ದಮೆ ಹೂಡಿದ್ದಾರೆ.

ಜೊತೆಗೆ ಅರಿಜೋನಾ, ಕೊಲೊರಾಡೋ, ಕನೆಕ್ಟಿಕಟ್, ಡೆಲವೇರ್, ಹವಾಯಿ, ಇಲಿನಾಯ್ಸ್, ಮೇರಿಲ್ಯಾಂಡ್, ಮಿಚಿಗನ್, ಮಿನ್ನೇಸೋಟ, ನೆವಾಡಾ, ನಾರ್ತ್ ಕೆರೊಲಿನಾ, ನ್ಯೂಜೆರ್ಸಿ, ನ್ಯೂಯಾರ್ಕ್, ಒರೆಗಾನ್, ರೆಡ್​ ಐಲ್ಯಾಂಡ್,ವರ್ಮೊಂಟ್, ವಾಷಿಂಗ್ಟನ್ ಮತ್ತು ವಿಸ್ಕಾನ್ಸಿನ್ ರಾಜ್ಯಗಳ ಅಟಾರ್ನಿ ಜನರಲ್‌ಗಳು ಸಹ ಮೊಕದ್ದಮೆ ದಾಖಲಿಸಿವೆ.

H-1B ವೀಸಾ ಅರ್ಜಿಗಳಿಗೆ 100,000 ಡಾಲರ್​ ಶುಲ್ಕ: ಟ್ರಂಪ್‌ ವಿರುದ್ಧ ಮೊಕದ್ದಮೆ Read More

ಎಚ್ ಕೆ ರಾಮು ಜನುಮ ದಿನ:ವಿಶೇಷ ಮಕ್ಕಳಿಗೆ ಹಣ್ಣು ವಿತರಣೆ

ಮೈಸೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಾವೇರಿ ರಕ್ಷಣಾ ಸಮಿತಿ ಬೆಂಗಳೂರು ಅಧ್ಯಕ್ಷರಾದ
ಎಚ್ ಕೆ ರಾಮು ಅವರ ಜನುಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮೈಸೂರಿನ ಶ್ರೀ ರಾಪುರ ದಲ್ಲಿರುವ ಶ್ರೀ ಬಸವೇಶ್ವರ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ದೇವರ ಮಕ್ಕಳ ಸನ್ನಿಧಿಯಲ್ಲಿ ಶನಿವಾರ ಎಚ್ ಕೆ ರಾಮು ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಮಕ್ಕಳಿಗೆ ಹಣ್ಣು ಹಂಪಲು ನೀಡಿ ಆ ಮಕ್ಕಳಿಗೆ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಹಾರಿಸಲಾಯಿತು.

ಮಕ್ಕಳಿಗೆ ಹಿತನುಡಿಯನ್ನು ಹೇಳಿ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಪ್ರದೀಪ್ ಕೃಷ್ಣೆಗೌಡ, ಮಹೇಶ್, ದತ್ತ, ಅನಿಲ್ ಕುಮಾರ್, ಲಕ್ಷಿಕಾಂತ್, ಆನಂದ ಡಿ, ಅರುಣ್ ಕುಮಾರ್, ರಾಮಚಂದ್ರ, ಶ್ರೀ ನವಚೇತನ ಬಸವೇಶ್ವರ ವಿಶೇಷ ಶಾಲೆಯ ಅಧ್ಯಕ್ಷ ಮರಿಗೌಡರು ಮುಂತಾದವರು ಹಾಜರಿದ್ದರು .

ಎಚ್ ಕೆ ರಾಮು ಜನುಮ ದಿನ:ವಿಶೇಷ ಮಕ್ಕಳಿಗೆ ಹಣ್ಣು ವಿತರಣೆ Read More

ಯೂನಿಟಿ ಮಾಲ್ ನಿರ್ಮಾಣಕ್ಕೆ ವಿರೋಧಇಲ್ಲ: ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಸರಿಯಲ್ಲ-ಪ್ರಮೋದಾದೇವಿ

ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ, ಆದರೆ ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.

ಮೈಸೂರು ಯೂನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ ವಿಚಾರ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಪ್ರಮೋದದೇವಿ ಒಡೆಯರ್, ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣವಿದೆ,ಮೈಸೂರು ಕಸಬಾ ಹೋಬಳಿಯ ಸ. ನಂ.1 ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿ. ಇಲ್ಲಿ ನಿರ್ಮಿಸಲು ಉದ್ದೇಶಿಸಲಾದ ಯೂನಿಟಿ ಮಾಲ್‌ ವಿಚಾರಕ್ಕೆ ಕರ್ನಾಟಕದ ಹೈಕೋರ್ಟ್‌ ಯಥಾಸ್ಥಿತಿ ಆದೇಶದ ನೀಡಿದೆ ಎಂದು ತಿಳಿಸಿದ್ದಾರೆ‌.

ಈ ವಿಚಾರವಾಗಿ ಕೆಲ ಪತ್ರಿಕೆ ಮತ್ತು ಕೆಲ ಟಿವಿಗಳಲ್ಲಿ ತಪ್ಪು ವರದಿ ಪ್ರಕಟವಾಗಿದೆ. ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದನ್ನು ನಾನು ವಿರೋಧಿಸುವುದಿಲ್ಲ, ಬಹಿರಂಗ ಮತ್ತು ಅಂತರಂಗ ಜಗಳ ವಿಚಾರ ಸಹ ಇಲ್ಲಿ ಇಲ್ಲ
ಎಂದು ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಈ ನಿರ್ದಿಷ್ಟ ಖಾಸಗಿ ಆಸ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ.

ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ ನಂತರದ ಒಪ್ಪಂದದ ದಿನಾಂಕ 23-01-1950 ರಂದು ಇತ್ಯರ್ಥವಾಗಿದೆ.
ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿ. ಅದೇ ಕೆಲಸವನ್ನು ನಾನು ಮಾಡಿದ್ದೇನೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ ಎಂದು ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.

ಯೂನಿಟಿ ಮಾಲ್ ನಿರ್ಮಾಣಕ್ಕೆ ವಿರೋಧಇಲ್ಲ: ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಸರಿಯಲ್ಲ-ಪ್ರಮೋದಾದೇವಿ Read More

ಮೈಸೂರಲ್ಲಿ ಮೈ ಕೊರೆಯುವ ಚಳಿ!ಬೆಳೆ,ಜಾನುವಾರು ಸಂರಕ್ಷಣೆಗೆ ಸಲಹೆ

ಮೈಸೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ ಚಳಿ ಪ್ರಾರಂಭವಾಗಿದ್ದು, ವಾತಾವರಣದಲ್ಲಿ ದಿಢೀರ್ ಉಷ್ಣಾಂಶ ಕುಸಿತವಾಗಿದೆ.
ಶೀತ ಮಾರುತದಿಂದ ಜನರು ಕಂಗೆಟ್ಟಿದ್ದಾರೆ.

ನವೆಂಬರ್‌ನಲ್ಲಿ ಆಗಿಂದಾಗ್ಗೆ ಮಳೆ ಹಾಗೂ ಮೋಡ ಕವಿದ ವಾತಾವರಣ ಇರುತ್ತಿತ್ತು,ಆದರೆ ಚಳಿ ವಾತಾವರಣ ಕಂಡು ಬರಲಿಲ್ಲ.
ಈಗ ಮಳೆ ಹಾಗೂ ಮೋಡ ಕವಿದ ವಾತಾವರಣ ದೂರವಾಗಿದೆ, ಚಳಿಯು ತೀವ್ರಗುತ್ತಿದೆ.

ಜಿಲ್ಲೆಯಲ್ಲಿ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ತಾಪಮಾನ ದಾಖಲಾಗಿದ್ದು,ಮಧ್ಯಾಹ್ನದ ವೇಳೆಯಲ್ಲೂ ಚಳಿ ಅನುಭವವಾಗುತ್ತಿದೆ.
ಹಾಗಾಗಿ ಜನರು ಬೆಚ್ಚನೆಯ ಉಡುಪು ಧರಿಸಿ ಸಂಚರಿಸುವುದು ಸಾಮಾನ್ಯವಾಗಿ ಬಿಟ್ಟಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜಿಲ್ಲೆಯಲ್ಲಿ ಡಿ. ೧ ರಿಂದ ೩ರವರೆಗೆ ಕನಿಷ್ಠ 16ರಿಂದ 17 ಹಾಗೂ ಗರಿಷ್ಟ 28 ರಿಂದ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗದವರು ಜಾನುವಾರುಗಳ ರಕ್ಷಣೆ ಹಾಗೂ ಬೆಳೆಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಭಾರತೀಯ ಹವಾಮಾನ ಇಲಾಖೆಯ ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಎನ್. ಉಮಾಶಂಕರ್ ಸಲಹೆಗಳನ್ನು ನೀಡಿದ್ದಾರೆ.

ಬೆಳಿಗ್ಗೆ ಕಡಿಮೆ ತಾಪಮಾನ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಳು ಮತ್ತು ಜಾನುವಾರುಗಳಿಗೆ ಶೀತದ ಒತ್ತಡವನ್ನು ಉಂಟು ಮಾಡಬಹುದು. ಹಾಗಾಗಿ ತರಕಾರಿ ಹೊಲಗಳಲ್ಲಿ ಮಣ್ಣಿನ ಉಷ್ಣತೆ ಯನ್ನು ಕಾಪಾಡಿಕೊಳ್ಳಲು ಸಂಜೆ ಲಘು ನೀರಾವರಿ ಒದಗಿಸುವುದು ಉತ್ತಮ.

ರಾತ್ರಿಯಲ್ಲಿ ನರ್ಸರಿಗಳು ಮತ್ತು ಎಳೆಯ ಸಸಿಗಳನ್ನು (ಟೊಮೆಟೊ, ಮೆಣಸಿನಕಾಯಿ, ಎಲೆಕೋಸು) ಒಣ ಹುಲ್ಲು ಅಥವಾ ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಳೆಯ ನಿರೀಕ್ಷೆ ಇಲ್ಲದ ಕಾರಣ ೫ ರಿಂದ ೭ ದಿನಗಳಿಗೊಮ್ಮೆ ಬೆಳೆಗಳಿಗೆ ನೀರು ಹಾಕುವುದು ಉತ್ತಮ. ತೇವಾಂಶ
ಮಧ್ಯಮವಾಗಿರುವುದರಿಂದ ಹೆಚ್ಚುವರಿ ನೀರಾವರಿಯನ್ನು ತಪ್ಪಿಸಬೇಕು.

ಭತ್ತ (ಹಾಲುಕರೆಯುವ ಹಂತ), ರಾಗಿ, ಕೆಂಪು ಬೇಳೆ ಮತ್ತು ತರಕಾರಿ ಬೆಳೆಗಳಿಗೆ ನೀರಾವರಿಗೆ ಆದ್ಯತೆ ನೀಡಬೇಕು. ಕಳೆ ಕೀಳಲು, ಮಣ್ಣು ತೆಗೆಯಲು ಮತ್ತು ಗೊಬ್ಬರ ಅಥವಾ ಕೀಟನಾಶಕ ಅನ್ವಯಿಕೆಗೆ ಅನುಕೂಲಕರ ಹವಾಮಾನ ಹೊಂದಿದೆ.

ಧಾನ್ಯಗಳು, ಅರಿಶಿನ, ಶುಂಠಿ ಮತ್ತು ದ್ವಿದಳ ಧಾನ್ಯಗಳನ್ನು ಕೊಯ್ಲು ಮಾಡಲು ಮತ್ತು ಒಣಗಿಸಲು ಒಣ ಮತ್ತು ಬಿಸಿಲಿನ ವಾತಾವರಣ ಸೂಕ್ತವಾಗಿದೆ.

ಕೊಯ್ಲಿನ ನಂತರದ ನಷ್ಟವನ್ನು ತಪ್ಪಿಸಲು ಉತ್ಪನ್ನಗಳನ್ನು ಸಂಗ್ರಹಿಸಿ ಬಿಸಿಲಿನಲ್ಲಿ ಒಣಗಿಸ ಬೇಕು. ಬಾಳೆ, ತೆಂಗು ಮತ್ತು ಅಡಕೆಯ ಜಲಾನಯನ ಪ್ರದೇಶಗಳ ಸುತ್ತಲೂ ಮಲ್ಚಿಂಗ್ ಮಾಡುವುದರಿಂದ ಮಣ್ಣಿನ ತೇವಾಂಶವನ್ನು ಸಂರಕ್ಷಿಸಲು ಸಹಾಯವಾಗುತ್ತದೆ.

ಬಾಳೆ, ಪಪ್ಪಾಯಿ ಮತ್ತು ಸಪೋಟಾದಂತಹ ಹಣ್ಣಿನ ಬೆಳೆಗಳಿಗೆ ನಿಯಮಿತವಾಗಿ ನೀರು ಒದಗಿಸಬೇಕು. ಗಾಳಿಯ ಪ್ರಸರಣವನ್ನು ಸುಧಾರಿಸಲು ಅನಗತ್ಯ ಚಿಗುರುಗಳನ್ನು ಕತ್ತರಿಸಬೇಕು.

ಚಳಿಯಿಂದ ಜಾನುವಾರುಗಳನ್ನು ರಕ್ಷಿಸಿ ಚಳಿಯ ವಾತಾವರಣ ಇರುವ ಹಿನ್ನೆಲೆಯಲ್ಲಿ ಜಾನುವಾರು ಮತ್ತು ಕೋಳಿಗಳಿಗೆ ರಾತ್ರಿ ಮತ್ತು ಮುಂಜಾನೆ ಬೆಚ್ಚಗಿನ ಮತ್ತು ಒಣ ಆಶ್ರಯಗಳನ್ನು ಒದಗಿಸಬೇಕು ಎಂದು ತಿಳಿಸಿದ್ದಾರೆ.

ಕೊಟ್ಟಿಗೆಗಳಿಗೆ ಶೀತ ಗಾಳಿ ಪ್ರವೇಶಿಸುವುದನ್ನು ತಪ್ಪಿಸಬೇಕು. ರೇಷ್ಮೆ ಹುಳು ಸಾಕುವ ಮನೆಗಳಲ್ಲಿ ಸೂಕ್ತವಾದ ಉಷ್ಣಾಂಶ ಮತ್ತು ತೇವಾಂಶವನ್ನು ಕಾಪಾಡ ಬೇಕು, ರೇಷ್ಮೆ ಹುಳುಗಳು ಬೆಳಗಿನ ತಂಪಾದ ಗಾಳಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಡಾ. ಎನ್. ಉಮಾಶಂಕರ್ ಸೂಚಿಸಿದ್ದಾರೆ.

hi

ಮೈಸೂರಲ್ಲಿ ಮೈ ಕೊರೆಯುವ ಚಳಿ!ಬೆಳೆ,ಜಾನುವಾರು ಸಂರಕ್ಷಣೆಗೆ ಸಲಹೆ Read More

ಸಿಸಿಬಿ ಕಾರ್ಯಾಚರಣೆ:17 ಲಕ್ಷ ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶ

ಮೈಸೂರು: ಮೈಸೂರು ನಗರ ಸಿಸಿಬಿ ತಂಡ ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್ ಡಿ ಪಿ‌ ಎಸ್ ಸಂಬಂಧಿತ ಕಾರ್ಯಾಚರಣೆ ನಡೆಸಿದರು.

ಈ ವೇಳೆ ಸಿಸಿಬಿ ತಂಡವು ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದೆ.

ಪ್ರಕರಣದಲ್ಲಿ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್. ಆರ್ ಪೊಲೀಸ್ ಠಾಣೆಯಲ್ಲಿ ಎನ್‌ ಡಿ ಪಿಎಸ್ ಕಾಯ್ದೆ,1989 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಿಸಿಬಿ ಕಾರ್ಯಾಚರಣೆ:17 ಲಕ್ಷ ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶ Read More