ಮೈಸೂರಿನಲ್ಲಿ ಪತ್ರ ಬರಹಗಾರರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ
ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟ ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಜಿಲ್ಲಾ ಉಪನೋಂದಣಾಧಿಕಾರಿ
ಹಾಗೂ ಮೈಸೂರು ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಗೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ,ಆದರೆ ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.

ಜತೆಗೆ ಪತ್ರಬರಹಗಾರರಿಗೆ ಸಮರ್ಪಕ ಸೇವೆಯನ್ನು ಜನ ಸಾಮಾನ್ಯರಿಗೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ, ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ ಎಂದು ತಿಳಿಸಿದರು .

ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆ ಅನುಭವಿಸುವಂತಾಗಿದೆ. ಆದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಈ ವಿಚಾರವನ್ನು ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ನಿಸಾರ್ ಅಹಮದ್ ಖಾನ್, ಉಪಾಧ್ಯಕ್ಷ‌ ಎಂ ಎಸ್ ಧನಂಜಯ್,ಕಾರ್ಯದರ್ಶಿ ಕೆ ಆರ್ ಉದಯ್ ಕುಮಾರ್, ಖಜಾಂಜಿ ಎಂ ಎಸ್ ನರಸಿಂಹಮೂರ್ತಿ, ಸಂಚಾಲಕ ಎಂ ಗಣೇಶ್, ನಿರ್ದೇಶಕರುಗಳಾದ ಕೆ ಆರ್ ಸತ್ಯನಾರಾಯಣ್, ಎಂ ಎನ್. ದೇವರಾಜು, ನಾಗಭೂಷಣ ಆರಾಧ್ಯ, ಮಹಾದೇವ್, ಕುಮಾರ್, ಪಣಿರಾಜ್ ಎಸ್, ಚಂದ್ರಶೇಖರ್ ಎಸ್, ಎನ್ ದಿನೇಶ್ ಕುಮಾರ್, ಎಸ್ ಎಸ್ ವೇಣು, ಜಯಲಕ್ಷ್ಮಿ ಹಾಗೂ ಇನ್ನಿತರ ಪತ್ರ ಬರಹಗಾರರು ಪಾಲ್ಗೊಂಡಿದ್ದರು.

ಮೈಸೂರಿನಲ್ಲಿ ಪತ್ರ ಬರಹಗಾರರ ಪ್ರತಿಭಟನೆ Read More

ಪ್ರಜಾಪ್ರಭುತ್ವದ ಮೌಲ್ಯ ತಿಳಿಸಲುವಿದ್ಯಾರ್ಥಿಗಳಿಗೆ ತಾ.ಮಟ್ಟದ ಪ್ರಬಂಧ ಸ್ಪರ್ಧೆ

ನಂಜನಗೂಡು: ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ
“ಮತದಾರರಿಗೆ ಶಿಕ್ಷಣ ನೀಡುವಲ್ಲಿ ಹಾಗೂ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಪಾತ್ರ” ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಚುನಾವಣಾ ಜಾಗೃತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೇರೂರಿಸುವ ಉದ್ದೇಶದಿಂದ ನಂಜನಗೂಡಿನ ನೋಡಲ್ ಕೇಂದ್ರವೂ ಆದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್.ದಿನೇಶ್ ಅವರು ಮಾತನಾಡಿ,ಮತದಾರರ ಪಟ್ಟಿ ನಿಖರವಾಗಿರುವುದು ಪ್ರಜಾಪ್ರಭುತ್ವದ ಶುದ್ಧತೆಯನ್ನು ಕಾಪಾಡುವ ಪ್ರಮುಖ ಹಂತ. ಈ ಕಾರ್ಯದಲ್ಲಿ ಬಿಎಲ್ಒ ಗಳು ನಿಷ್ಠೆಯಿಂದ ಮತ್ತು ತಳಮಟ್ಟದಲ್ಲಿ ದುಡಿಯುತ್ತಾರೆ,ವಿದ್ಯಾರ್ಥಿಗಳು ಇವರ ಕಾರ್ಯವನ್ನು ಅರ್ಥಮಾಡಿಕೊಳ್ಳುವುದ
ರಿಂದ ಮುಂದಿನ ದಿನಗಳಲ್ಲಿ ಜವಾಬ್ದಾರಿಯುತ ಮತದಾರರಾಗಿ ರೂಪಗೊಳ್ಳಬಹುದು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಅವರು ಮಾತನಾಡಿ, “ಮತದಾನ ಪಟ್ಟಿ ಶುದ್ಧೀಕರಣ, ಮನೆಮನೆಗೆ ಸರ್ವೇ, ಹೊಸ ಮತದಾರ ನೋಂದಣಿ, ನಕಲು ಹೆಸರುಗಳು ಮತ್ತು ಮೃತರ ಹೆಸರುಗಳ ತಿದ್ದುಪಡಿ,ಇವುಗಳೆಲ್ಲವು ಚುನಾವಣೆ ಸುಗಮವಾಗಿ ನಡೆಯಲು ಅಗತ್ಯವಾದ ಮೂಲಭೂತ ಕಾರ್ಯಗಳು. ಜನರಿಗೆ ಚುನಾವಣೆ ಜಾಗೃತಿ ನೀಡುವುದು ಸಹ ಬಿಎಲ್ಒ ಗಳ ಮಹತ್ವದ ಹೊಣೆಗಾರಿಕೆ ಎಂದು ಹೇಳಿದರು.

ಪ್ರಬಂಧ ಸ್ಪರ್ಧೆಯ ವಿಷಯವನ್ನು ವಿದ್ಯಾರ್ಥಿಗಳಿಗೆ ಇನ್ನಷ್ಟು ಮನಮುಟ್ಟುವಂತೆ ಮಾಡುವ ವಿಧಾನವನ್ನು ಕಾರ್ಯಕ್ರಮದ ಸಂಯೋಜಕರಾದ ಹೆಚ್.ಕೆ.ಸ್ವಾಮಿ ಗೌಡ ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗಣ್ಣ ಸ್ವಾಮಿ ಹೇಮಕುಮಾರ್,ಡಾ. ಬಿ.ಜೆ ಗೋಪಾಲಕೃಷ್ಣ, ಶ್ರೀಧರ್ ,ಸೌಮ್ಯ ಉಪಸ್ಥಿತರಿದ್ದರು.

ಮೊದಲ ಮೂರು ಸ್ಥಾನ ಗಳಿಸಿದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡ ಮಾದ್ಯಮ:
ಪ್ರಥಮ ಸ್ಥಾನ ಸೌಮ್ಯ. ಕಾರ್ಮಲ್ ಪಿಯು ಕಾಲೇಜ್ ನಂಜನಗೂಡು.
ದ್ವಿತೀಯ ಸ್ಥಾನ ಆರತಿ. ಬಾಲಕಿಯರ ಸ.ಪ.ಪೂ.ಕಾಲೇಜು ನಂಜನಗೂಡು,
ತೃತೀಯ ಸ್ಥಾನ ಶಾಲಿನಿ. ಜೆಎಸ್ಎಸ್ ಪ ಪೂ ಕಾ ನಂಜನಗೂಡು.

ಆಂಗ್ಲ ಮಾಧ್ಯಮ:
ಪ್ರಥಮ ಸ್ಥಾನ ಮರಿಯಾ ಸರ್ವತ್ ಪಿ.ಎನ್ ಬಾಲಕರ ಸರ್ಕಾರಿ ಪ ಪೂ. ಕಾಲೇಜು ನಂಜನಗೂಡು ,
ದ್ವಿತೀಯ ಸ್ಥಾನ ಐಶ್ವರ್ಯ ಎಂ, ಕಾರ್ಮಲ್ ಪ.ಪೂ. ಕಾಲೇಜು ನಂಜನಗೂಡು ,
ತೃತೀಯ ಸ್ಥಾನ ಪೂರ್ಣಿಮಾ ಡಿ.ಬಾಲಕರ ಸರ್ಕಾರಿ ಪ.ಪೂ. ಕಾಲೇಜು ನಂಜನಗೂಡು.

ಪ್ರಜಾಪ್ರಭುತ್ವದ ಮೌಲ್ಯ ತಿಳಿಸಲುವಿದ್ಯಾರ್ಥಿಗಳಿಗೆ ತಾ.ಮಟ್ಟದ ಪ್ರಬಂಧ ಸ್ಪರ್ಧೆ Read More

ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್‌ ಹುಸೇನ್‌ ಬಾಂಬ್

ಬೆಳಗಾವಿ: ಚಳಿಗಾಲದ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರದ ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಬಾಂಬ್ ಸಿಡಿಸಿದ್ದು,

ಸಂಚಲನವನ್ನೇ ಸೃಷ್ಟಿಸಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಾನೇ ಶುಭ ಸುದ್ದಿ ನೀಡಿದ್ದೇನೆ. ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜ್ಯಕೀಯದಲ್ಲಿ ದೊಡ್ಡ ಬದಲಾವಣೆ ಯಾಗಲಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗುದು ಖಚಿತ!,ಈ ಬಗ್ಗೆ ಹೈಕಮಾಂಡ್ ದೊಡ್ಡ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಡಿ.ಕೆ.ಶಿವಕುಮಾರ್ ಅವರು ಕಳೆದ ಹಲವು ದಶಕಗಳಿಂದ ಪಕ್ಷವನ್ನು ಸಂಘಟಿಸಿದ್ದಾರೆ. ಈಗ ಅವರಿಗೊಂದು ಅವಕಾಶ ಬಂದಿದೆ, ಹಾಗಾಗಿ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಇಕ್ಬಾಲ್‌ ಹುಸೇನ್‌ ಸ್ಪಷ್ಟವಾಗಿ ನುಡಿದರು.

ಇಕ್ಬಾಲ್‌ ಹುಸೇನ್‌ ಅವರ ಈ ಹೇಳಿಕೆ ನಿಜಕ್ಕೂ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.ಜತೆಗೆ ಚರ್ಚೆಗೆ‌ ಗ್ರಾಸ ಒದಗಿಸಿದೆ.

ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್‌ ಹುಸೇನ್‌ ಬಾಂಬ್ Read More

ಮಹಾಜನ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ

ಮೈಸೂರು: ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ವತಿಯಿಂದ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ
ಅಪರಾಧ ತಡೆ ಮಾಸಾಚಾರಣೆ ಹಮ್ಮಿಕೊಳ್ಳಲಾಯಿತು.

ಈ ವೇಳೆ ಜಯಲಕ್ಷ್ಮಿ ಪುರಂ ಠಾಣೆಯ ಸಬ್ ಇನ್ಸ್ಪೆಕ್ಟರ್ ನಾರಾಯಣ್ ಅವರು ಮಾತನಾಡಿ ಸೈಬರ್ ವಂಚನೆ, ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ದುರ್ಬಳಕೆ ಮತ್ತು ಆನ್ಲೈನ್ ಗೇಮಿಂಗ್ ಚಟಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇಂತಹ ಚಟುವಟಿಕೆಗಳು ಎಲ್ಲಾದರೂ ಕಂಡುಬಂದರೆ ಯಾವುದೇ ಸಂಧರ್ಬದಲ್ಲಿ ಪೋಷಕರ ಸಹಾಯದಿಂದ ಪೊಲೀಸರಿಗೆ ದೂರು ನೀಡಿ ನಿಮ್ಮ ಜವಾಬ್ದಾರಿ ಮೆರೆಯಬೇಕು ಎಂದು ನಾರಾಯಣ್ ಸಲಹೆ ನೀಡಿದರು.

ಕಾಲೇಜು ಪ್ರಾಂಶುಪಾಲ ವಿಶಕಂಠಮೂರ್ತಿ ಅವರು ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ದುಷ್ಟ ಚಟಗಳಿಗೆ ಬಲಿಯಾಗುವುದಿಲ್ಲ ಎಂದು ಸಾಕ್ಷಿಕರಿಸಲು ನಾನು ಪ್ರತಿಯೊಂದು ದಿನವೂ ಖುದ್ದಾಗಿ ವೀಕ್ಷಿಸುತ್ತೇನೆ ನಮ್ಮ ವಿದ್ಯಾರ್ಥಿ ಗಳು ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಆಟೋಟಗಳಲ್ಲಿ ಬಹಳ ಚಟುವಟಿಕೆಯಿಂದ ಇದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆದರೂ ನಾವು ಮುಂದಿನದಿನಗಳಲ್ಲಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಸಮಿತಿ ರಚಿಸಿ ತಕ್ಷಣ ಕಾರ್ಯರಂಭ ಮಾಡುತ್ತೇವೆ ಮತ್ತು ಪೋಷಕರ ಜೊತೆ ಈ ಸಂಬಂಧ ಸಭೆ ಮಾಡಿ ಅವರ ಸಹಾಯವನ್ನು ಪಡೆದು ಉತ್ತಮ ವಾತಾವರಣ ನಿರ್ಮಿಸುತ್ತೇವೆ ಇದಕ್ಕೆ ನಮ್ಮ ಆಡಳಿತ ಮಂಡಳಿಯವರು ಸಹಾ ಬಹಳ ಸಹಕಾರಿ ಯಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಸ್ವಾಮಿ ಗೌಡ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ ಆರ್. ರಾಘವೇಂದ್ರ ಮತ್ತು ಎಲ್ಲ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.

ಮಹಾಜನ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ Read More

ಮರುಕಳಿಸಿದ ಮರಳು ಮಾಫಿಯಾ:೪ ಕೋಟಿ ಮೌಲ್ಯದ ಮರಳು ಸೀಸ್

ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ವಿಶಾಲವಾಗಿ ಹರಿಯುವ ಕೃಷ್ಣಾನದಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆ ಮರಳು ಮಾಫಿಯಾ ಗರಿಗೆದರಿದೆ.

ಕೃಷ್ಣಾನದಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದ್ದಂತೆ
ಅನಧಿಕೃತ ಮರಳು ಗಣಿಗಾರಿಕೆ ಅವ್ಯಾಹತವಾಗಿ ಎಗ್ಗಿಲ್ಲದೆ ನಡೆಯುತ್ತಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿರೇಶ ಶಾಂತಪ್ಪ ಅವರು ನೀಡಿದ ದೂರಿನ ಅನ್ವಯ ವಿವಿದ ಇಲಾಖೆಗಳ ಅಧಿಕಾರಿಗಳ ತಂಡ, ಪೊಲೀಸರು ದಿಢೀರ್ ದಾಳಿ ಮಾಡಿ 4 ಕೋಟಿ ರೂ. ಮೌಲ್ಯದ ಮರಳು ಸೀಸ್ ಮಾಡಿದ್ದಾರೆ.

ತಾಲ್ಲೂಕಿನ ಮುಷ್ಟಳ್ಳಿ, ಚೌಡೇಶ್ವರಿಹಾಳ ಮತ್ತಿತರ ನದಿ ತೀರದ ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಸಂಗ್ರಹಿಸಿದ ಮರಳನ್ನು ವಶಪಡಿಸಿಕೊಂಡು, ಆ ಜಮೀನಿನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಜತೆಗೆ 7 ಹಿಟಾಚಿ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಚಾಲಕ ಹಾಗೂ ಮಾಲಿಕರ ವಿರುದ್ಧ ಸುರಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹಲವಾರು ವರ್ಷಗಳಿಂದ ಹಿಂಗಾರು ಸಮಯದಲ್ಲಿ ನೈಸರ್ಗಿಕವಾಗಿ ಅಪಾರ ಪ್ರಮಾಣದ ಮರಳು ಕೃಷ್ಣಾ ನದಿಯ ೨ ದಂಡೆಗಳಲ್ಲಿ ಸಂಗ್ರಹವಾಗಿರುತ್ತದೆ, ಅದನ್ನು ತೆಗೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ಜಾರಿಗೆ ತಂದರೂ ಸ್ಥಳೀಯ ಶಾಸಕ ಮತ್ತು ಅವರ ಸಹೋದರರು, ಹಿಂಬಾಲಕರು ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಮರಳು ಸಾಗಾಣಿಕೆ ಮಾಡಿ, ಸರ್ಕಾರಕ್ಕೆ ಕೊಟ್ಯಾಂತರ ರೂ. ಹಣ ವಂಚಿಸಿದ್ದಾರೆ.

ಇಂತವರ ಬಗ್ಗೆ ಕ್ರಮ ಯಾವಾಗ ಎಂದು ಜನತೆ ಪ್ರಶ್ನಿಸಿದ್ದಾರೆ.

ಮರುಕಳಿಸಿದ ಮರಳು ಮಾಫಿಯಾ:೪ ಕೋಟಿ ಮೌಲ್ಯದ ಮರಳು ಸೀಸ್ Read More

ದರ್ಶನ್ ನಟನೆಯ ಡೆವಿಲ್ ಚಿತ್ರ ಬಿಡುಗಡೆ-ಭರ್ಜರಿ ರೆಸ್ಪಾನ್ಸ್

ಬೆಂಗಳೂರು: ನಟ ದರ್ಶನ್ ತೂಗುದೀಪ ಅಭಿನಯದ ದಿ ಡೆವಿಲ್ ಚಿತ್ರ ಗುರುವಾರ ತೆರೆ ಕಂಡಿದ್ದು,ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಅಭಿಮಾನಿಗಳು ಚಿತ್ರಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ದಿ ಡೆವಿಲ್’ ನ ರೇಟಿಂಗ್ ಮತ್ತು ವಿಮರ್ಶೆಗಳನ್ನು ಬುಕ್ ಮೈ ಶೊ ನಂತಹ ಕೆಲ ವೇದಿಕೆಗಳಲ್ಲಿ ತಿಳಿಸುವಂತಿಲ್ಲ.
ಅಭಿಮಾನಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಕುರಿತು ಚಿತ್ರ ವೀಕ್ಷಿಸಿದ ಬಳಿಕ ದರ್ಶನ್ ಸಹೋದರ, ನಿರ್ದೇಶಕ ದಿನಕರ್ ತೂಗುದೀಪ ಮಾತನಾಡಿ, ನೆಗೆಟಿವ್ ವಿಮರ್ಶೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಅದನ್ನು ಆಫ್ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.

ದುಡ್ಡು ಕೊಟ್ಟು ರೇಟಿಂಗ್ ಮಾಡಿಸೋ ಕೆಲಸ ಆಗುತ್ತಿದೆ. ಈ ಮೂಲಕ ಸಿನಿಮಾ ಸಂಸ್ಕೃತಿಯನ್ನು ಹಾಳು ಮಾಡುವ ಕೆಲಸ ಮಾಡಲಾಗುತ್ತಿದೆ ನನ್ನ ರಾಯಲ್ ಸಿನಿಮಾಗೂ ಇದೇ ಅನುಭವ ಆಗಿದೆ ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ದರ್ಶನ್ ನಟನೆಯ ಡೆವಿಲ್ ಚಿತ್ರ ಬಿಡುಗಡೆ-ಭರ್ಜರಿ ರೆಸ್ಪಾನ್ಸ್ Read More

ಅಮೆರಿಕದಲ್ಲಿ ಓದಿದ ವಿದ್ಯಾರ್ಥಿಗಳು ತವರಿಗೆ ಹೋಗುವುದು ನಾಚಿಕೆಗೇಡು: ಟ್ರಂಪ್​

ವಾಷಿಂಗ್ಟನ್: ನಮ್ಮಲ್ಲಿನ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಿ, ಪ್ರತಿಭೆ ಸಂಪಾದಿಸಿದ ವಿದೇಶಿ ವಿದ್ಯಾರ್ಥಿಗಳು ತವರೂರಿಗೆ ತೆರಳುವುದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​ ಚಾಟಿ ಬೀಸಿದ್ದಾರೆ.

ಹೊಸ ವಲಸೆ ನೀತಿ ಟ್ರಂಪ್​ ಗೋಲ್ಡ್​ ಕಾರ್ಡ್​ ಜಾರಿ ಅನುಷ್ಠಾನ ಮಾಡಿದ ನಂತರ ಮಾತನಾಡಿದ ಟ್ರಂಪ್, ಭಾರತ ಮತ್ತು ಚೀನಾದ ವಿದ್ಯಾರ್ಥಿಗಳು ಅಮೆರಿಕದ ಉನ್ನತ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದು ನಂತರ ತಾಯ್ನಾಡಿಗೆ ಹಿಂತಿರುಗುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮಲ್ಲಿನ ಕಂಪನಿಗಳು ಅಂತಹ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ಟ್ರಂಪ್ ಗೋಲ್ಡ್ ಕಾರ್ಡ್ ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಅಮೆರಿಕಕ್ಕೆ ಶ್ರೀಮಂತ ವ್ಯಕ್ತಿಗಳು ಬರುವಂತೆ ಮಾಡುವುದು ಗೋಲ್ಡ್ ಕಾರ್ಡ್​ ಹಿಂದಿನ ಉದ್ದೇಶ. ಜೊತೆಗೆ, ಇಲ್ಲಿ ವ್ಯಾಸಂಗ ಮಾಡಿ ಪ್ರತಿಭೆಯನ್ನು ಹೊತ್ತೊಯ್ಯಬಾರದು ಎಂಬುದು ನನ್ನ ಉದ್ದೇಶ. ಅಂಥವರನ್ನು ಇಲ್ಲಿಯೇ ಉಳಿಸಿಕೊಳ್ಳಲು ಸರ್ಕಾರ ಹೊಸ ವಲಸೆ ನೀತಿ ರೂಪಿಸಿದೆ. ಈ ಮೂಲಕ ಅಮೆರಿಕನ್ನರಿಗೂ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಕಂಪನಿಗಳು ಉನ್ನತ ವಿಶ್ವವಿದ್ಯಾಲಯಗಳಾದ ವಾರ್ಟನ್, ಹಾರ್ವರ್ಡ್ ಮತ್ತು ಎಂಐಟಿಯಿಂದ ನೇಮಕ ಮಾಡಿಕೊಳ್ಳುವ ವಿದ್ಯಾರ್ಥಿಗಳನ್ನು ಉಳಿಸಿಕೊಳ್ಳಲು ಗೋಲ್ಡ್ ಕಾರ್ಡ್ ಖರೀದಿಸಬಹುದು ಎಂದು ಟ್ರಂಪ್ ಕರೆ ನೀಡಿದರು.

ಹೊಸ ಗೋಲ್ಡ್ ಕಾರ್ಡ್ ಯೋಜನೆ ಬುಧವಾರದಿಂಸ ಆರಂಭವಾಗಿದ್ದು,
ನಿನ್ನೆಯಿಂದಲೇ ಅರ್ಜಿಗಳನ್ನು ಆಹ್ವಾನಿಸಿದೆ.

ಅಮೆರಿಕದಲ್ಲಿ ಓದಿದ ವಿದ್ಯಾರ್ಥಿಗಳು ತವರಿಗೆ ಹೋಗುವುದು ನಾಚಿಕೆಗೇಡು: ಟ್ರಂಪ್​ Read More

ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2. 53 ಕೋಟಿ ಸಂಗ್ರಹ

ಹನೂರು: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2 ಕೋಟಿ 53 ಲಕ್ಷ ರೂ ಸಂಗ್ರಹವಾಗಿದೆ.

ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಕಾರ್ಯದರ್ಶಿ ರಘು, ಎ. ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

28 ದಿನಗಳಲ್ಲಿ ಒಟ್ಟು ಮೊತ್ತ ರೂ.2,53,98,859.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 25 ಗ್ರಾಂ, ಬೆಳ್ಳಿ 01 ಕೆ.ಜಿ 253 ಗ್ರಾಂ ಹುಂಡಿಯಲ್ಲಿ ದೊರೆತಿದೆ.
ಕಾರ್ತಿಕ ಮಾಸ, ಭಾನುವಾರ, ರಜಾ ದಿನಗಳು ಸೇರಿದಂತೆ ವಿಶೇಷ ದಿನಗಳಲ್ಲಿ ಕೂಡ ಭಕ್ತರ ಸಂಖ್ಯೆ ಗಣನೀಯವಾಗಿತ್ತು.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಭಾಗ್ಯಮ್ಮ, ಕುಪ್ಯಾ , ಮರಿಸ್ವಾಮಿ, ಕಾಗಲವಾಡಿ, ಮಹದೇವಪ್ಪ ಕೀಳನಪುರ, ಕುಮಾರ ವಿಜಯ, ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಭಾರತಿ, ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2. 53 ಕೋಟಿ ಸಂಗ್ರಹ Read More

ಸಿಸಿಬಿ ಪೊಲೀಸರ ದಾಳಿ;ಆರೋಪಿ ಅರೆಸ್ಟ್30 ಕೆಜಿ ಶ್ರೀಗಂಧದ ಮರ ವಶ

ಮೈಸೂರು: ಸಿಸಿಬಿ ಅಧಿಕಾರಿಗಳು ದಾಳಿ
ಕೇಸರೆಯಲ್ಲಿ ದಿಢೀರ್ ದಾಳಿ ನಡೆಸಿ,
30 ಕೆಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ನವಾಜ್ ಶರೀಫ್ (32)
ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕ ಅರಣ್ಯ ಕಾಯ್ದೆ 1963 ರ ಅಡಿಯಲ್ಲಿ ನಗರದ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸಿಸಿಬಿ ಪೊಲೀಸರ ದಾಳಿ;ಆರೋಪಿ ಅರೆಸ್ಟ್30 ಕೆಜಿ ಶ್ರೀಗಂಧದ ಮರ ವಶ Read More

ಮಕ್ಕಳ ಶೈಕ್ಷಣಿಕ,ಸಾಂಸ್ಕೃತಿಕ ಚಟುವಟಿಕೆಗೆ ಪ್ರೋತ್ಸಾಹ ಅಗತ್ಯ-ಮಲ್ಲಿಕಾರ್ಜುನ ಸ್ವಾಮಿ

ಮೈಸೂರು: ಮಕ್ಕಳು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಅಭಿವೃದ್ಧಿಯಾಗಲು ಪ್ರೋತ್ಸಾಹ ಅಗತ್ಯ
ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎನ್ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ಮಕ್ಕಳ ಮನಸ್ಸು ಸೂಕ್ಷ್ಮವಾಗಿದ್ದು ಮನಸ್ಸು ಸುಂದರ ಹಾಗೂ ಮೃದು ಹಾಗಾಗಿ ಗೆಲುವಿನ ಹಾದಿಯಲ್ಲಿ ಸಾಗುವ ರೀತಿ ಅವರಿಗೆ ಸ್ವತಂತ್ರ್ಯ ನೀಡಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮoದಿರದಲ್ಲಿ ಆಯೋಜಿಸಿದ್ದ, ಕಲಾ ಪ್ರತಿಭೋತ್ಸವ 2025-26 ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರು ತಮ್ಮ ಮಕ್ಕಳ ಬಗ್ಗೆ ಮತ್ತು ಅವರ ಜ್ಞಾನ ತಿಳುವಳಿಕೆ ಮಟ್ಟ ಇವುಗಳ ಬಗ್ಗೆ ಯಾವಾಗಲೂ ಸಕಾರಾತ್ಮಕ ಭಾವನೆ ಹಾಗೂ ಒಳ್ಳೆಯ ದೃಷ್ಟಿಕೋನ ಹೊಂದಿರಬೇಕು ಎಂದು ಸಲಹೆ ನೀಡಿದರು.
ಶಾಲೆ ಹಾಗೂ ಮನೆ ಎರಡರಲ್ಲೂ ಮಗುವನ್ನು ಪ್ರೋತ್ಸಾಹಿಸಿದರೆ ಮಕ್ಕಳು ಸಮರ್ಥ ಪ್ರಜೆಯಾಗಿ ಹೊರಹೊಮ್ಮುತ್ತಾರೆ. ಮಕ್ಕಳು ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲ್ಲುವ ಮನೋಸ್ಥೈರ್ಯ ತುಂಬುವುದು ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.

ಪೋಷಕರು ಮಕ್ಕಳಿಗೆ ಸ್ವಾತಂತ್ರ್ಯ ನೀಡುವುದರ ಜತೆಗೆ ಕೆಲವು ನಿಯಂತ್ರಣವನ್ನೂ ಹಾಕಬೇಕು. ಮಕ್ಕಳು ತಮ್ಮ ವ್ಯಕ್ತಿತ್ವದ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಇದಕ್ಕೆ ಪೂರಕವಾಗಿ ಮಕ್ಕಳೂ ಸಹ ತಮ್ಮ ಓದಿನ ಬಗ್ಗೆ ಗಮನ ನೀಡಬೇಕು. ಉತ್ತಮ ವಿಚಾರಗಳನ್ನು ಆಸಕ್ತಿಯಿಂದ ಕಲಿಯಬೇಕು ಎಂದು ಮಲ್ಲಿಕಾರ್ಜುನ ಸ್ವಾಮಿ ತಿಳಿಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಿ. ಉದಯ್ ಕುಮಾರ್ ಅವರು ಮಾತನಾಡಿ ಮಕ್ಕಳೊಂದಿಗೆ ಸಂವಾದ ನಡೆಸಬೇಕು, ಅವರಲ್ಲಿ ಪಠ್ಯದ ಕುರಿತು ಆಸಕ್ತಿ ಹೆಚ್ಚಿಸಬೇಕು ಅವರ ಮನಸ್ಸನ್ನು ತಮ್ಮ ಬೋಧನೆಯತ್ತ ತಿರುಗಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ ಸುದರ್ಶನ್, ತೀರ್ಪುಗಾರರಾದ ಶ್ರೀವಾಣಿ, ಲಕ್ಷ್ಮಿ, ರಮ್ಯಾ, ಅನಿತಾ, ಆನಂದ್ ಕುಮಾರ್, ರಮೇಶ್ ಚಂದ್ರ, ಎ ಪಿ ಚಂದ್ರಶೇಖರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮಕ್ಕಳ ಶೈಕ್ಷಣಿಕ,ಸಾಂಸ್ಕೃತಿಕ ಚಟುವಟಿಕೆಗೆ ಪ್ರೋತ್ಸಾಹ ಅಗತ್ಯ-ಮಲ್ಲಿಕಾರ್ಜುನ ಸ್ವಾಮಿ Read More