ಮೈಸೂರು: ಮೈಸೂರಿನ ಕಡಕೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಂಡಿಪಾಳ್ಯ ಗ್ರಾಮದ ಎಪಿಎಂಸಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ರೈಡ್ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ರೈಡ್ ಹಮ್ಮಿಕೊಂಡು 960 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡರು.

ಇದೇ ವೇಳೆ ನಿಷೇಧಿತ ಪ್ಲಾಸ್ಟಿಕ್ ಗಳನ್ನು ಇಟ್ಟುಕೊಂಡಿದ್ದ ಅಂಗಡಿಗಳಿಗೆ
ದಂಡ ವಿಧಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಂತ್ರಣ ಅಧಿಕಾರಿ ಹಾಗೂ ಪರಿಸರ ಅಧಿಕಾರಿ ಅರ್ಪಿತಾ, ಪಟ್ಟಣ ಪಂಚಾಯತಿ ಆರೋಗ್ಯ ನಿರೀಕ್ಷಕರಾದ ಮಂಜುನಾಥ್, ಲೆಕ್ಕಿಗರಾದ ಸತೀಶ್, ಸಮುದಾಯ ಸಂಘಟನೆ ಅಧಿಕಾರಿ ಶಂಕರ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.