ಮೈಸೂರು: ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸಂತಸ ತಂದಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ
ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ
ಬೆಂಗಳೂರಿನ ನಮ್ಮ ಮೇಟ್ರೋ ಗೆ ಬಸವ ಮೇಟ್ರೋ ಎಂದು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,ಇದು ಸ್ವಾಗತಾರ್ಹ ಬಸವಣ್ಣನವರ ಅಭಿಮಾನಿಗಳಲ್ಲಿ ಅತ್ಯಂತ ಸಂತಸ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸಮ ಸಮಾಜದ ನಿರ್ಮಾಣಕ್ಕೆ ಮತ್ತು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಸಾರುತ್ತ ಜಾತಿ ಪದ್ಧತಿ ನಿರ್ಮೂಲನೆಗೆ ಪಣ ತೊಟ್ಟು ೧೨ ನೇ ಶತಮಾನದಲ್ಲಿ ವಿಶ್ವಕ್ಕೆ ಸಂದೇಶ ಸಾರಿದ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಹೆಸರನ್ನು ಕರ್ನಾಟಕದ ರಾಜಧಾನಿಯ ಲಕ್ಷಾಂತರ ಜನ ಪ್ರಯಾಣಿಸುವ ನಮ್ಮ ಮೆಟ್ರೋ ಸ್ಟೇಷನ್ ಗೆ ಇಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೃದಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತೇಜಸ್ವಿ ಹೇಳಿದ್ದಾರೆ.