ಭಗತ್ ಸಿಂಗ್ 117ನೇ ಜನ್ಮದಿನ ಆಚರಣೆ

Spread the love

ಮೈಸೂರು: ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಯುವ ಭಾರತ್ ಸಂಘಟನೆ ವತಿಯಿಂದ ಕ್ರಾಂತಿಕಾರಿ ಮಹಾನ್ ದೇಶಭಕ್ತ ಭಗತ್ ಸಿಂಗ್ ರವರ 117ನೇ ಜನ್ಮದಿನವನ್ನು ಆಚರಿಸಲಾಯಿತು.

ಈ ವೇಳೆ ಭಗತ್ ಸಿಂಗ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಸಿಹಿ ವಿತರಿಸಿ ಮಾತನಾಡಿದ ಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಯುವಕರಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯದ ಕಿಚ್ಚು ಹಚ್ಚಲು ಕಾರಣಕರ್ತರಾದವರು ಭಗತ್ ಸಿಂಗ್ ಎಂದು ಹೇಳಿದರು.

ಯುವ ಭಾರತ್ ಸಂಘಟನೆ ಅಧ್ಯಕ್ಷ ಜೋಗಿ ಮಂಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸುರೇಶ್, ಅಜಯ್ ಶಾಸ್ತ್ರಿ, ವಿಘ್ನೇಶ್ವರ ಭಟ್, ಶ್ರೀನಿವಾಸ್, ಚರಣ್, ರಾಮು, ಸುಚೇಂದ್ರ, ವಿನೋದ್ ಅರಸ್, ಸುದರ್ಶನ್, ಅಂಜು, ರಕ್ಷಿತ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.