ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಮಕೃಷ್ಣನಗರದ ಯೋಗ ಉದ್ಯಾನವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲುಸಿ ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು.
ನಂತರ ಮಹಿಳೆಯರಿಗಾಗಿ ಗಾಯನ ಮತ್ತು ಅಭಿನಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.
ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ನಗರ ಮಂಡಲದ ಅಧ್ಯಕ್ಷ ರಾಕೇಶ್ ಭಟ್, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ರೇಣುಕಾ ರಾಜು, ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಕಾರ್ಯದರ್ಶಿ ವಿಜಯಾ ಮಂಜುನಾಥ್, ಮಂಡಲದ ಅಧ್ಯಕ್ಷೆ ಲಕ್ಷ್ಮಿ ಜಿ, ಪ್ರಧಾನ ಕಾರ್ಯದರ್ಶಿಗಳಾದ ಮಂಜುಳಾ, ಪುಟ್ಟಾಮ್ಮಣ್ಣಿ, 58ನೇ ವಾರ್ಡ್ ಅಧ್ಯಕ್ಷ ಸುಬ್ರಹ್ಮಣ್ಯ ರಾಜು, ಮುಖಂಡರಾದ ಸುಜಾತ, ಬಿ. ಸಿ. ಶಶಿಕಾಂತ್, ಹಿರಿಯಣ್ಣ, ಮಧು ಸೋಮಶೇಖರ್, ರಾಘವೇಂದ್ರ, ಚಂದನ್ ಗೌಡ, ಕಾಂತರಾಜ ಅರಸ್, ನಾಗರಾಜ್ ಜನ್ನು, ದೇವರಾಜು ಮತ್ತಿತರರು ಹಾಜರಿದ್ದರು.
