ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲಗಳ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳವರು ಕೃಷಿ ಉತ್ಪನ್ನ ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿ ರೈತರಿಗೆ ಅಪಾರ ನಷ್ಟವಾಗಿದೆ,ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಖುರ್ಚಿ ಕಿತ್ತಾಟದಲ್ಲಿ ನಿರತವಾಗಿದೆ, ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲು ವಿಳಂಬ ನೀತಿ ತೋರಿದ್ದು ಉತ್ಪನ್ನಗಳಿಗೆ ಮಾರುಕಟ್ಟೆ ಹಾಗೂ ದರ ದೊರಕುತ್ತಿಲ್ಲ, ರಾಗಿ ಹಾಗೂ ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಪೈ. ಟಿ. ರವಿ ಲಕ್ಷ್ಮೀಪುರ, ನಗರ ಮಂಡಲ ಅಧ್ಯಕ್ಷರಾದ ರಾಕೇಶ್ ಭಟ್, ರೈತ ಮೋರ್ಚಾ ನಗರಾಧ್ಯಕ್ಷ ದೇವರಾಜ್, ಪ್ರಧಾನ ಕಾರ್ಯದರ್ಶಿ ಈರಪ್ಪ, ಉಪಾಧ್ಯಕ್ಷ ನಾಣಿಗೌಡ, ಹಿರಿಯ ಮುಖಂಡರಾದ ಎಸ್ ಡಿ ಮಹೇಂದ್ರ, ಹಿನಕಲ್ ಶ್ರೀನಿವಾಸ್, ಚಾಮುಂಡೇಶ್ವರಿ ಕ್ಷೇತ್ರದ ರೈತ ಮೋರ್ಚಾ ಅಧ್ಯಕ್ಷರಾದ ಚಂದ್ರಶೇಖರ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ. ರಾಘವೇಂದ್ರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಹೇಮಂತ್ ಅಪ್ಪಾಜಿಗೌಡ, ಶಿವಕುಮಾರ್ ಚಿಕ್ಕಕಾನ್ಯ, ಈರೇಗೌಡ, ಉಪಾಧ್ಯಕ್ಷರಾದ ಶ್ರೀಕಂಠಸ್ವಾಮಿ, ಬಿ.ಸಿ.ಶಶಿಕಾಂತ್, ಸುನಿಲ್ ದಾರಿಪುರ, ಮುಖಂಡರಾದ ಮೋನಿಕಾ, ನಾರಾಯಣ, ಮಧು ಬ್ಯಾತಹಳ್ಳಿ, ಚೇತನ್, ರೈತ ಮೋರ್ಚಾ ಪದಾಧಿಕಾರಿಗಳಾದ ದೇವರಾಜ್, ಮಂಜುನಾಥ್ ಅರಸ್, ಗೋಪಾಲ್ ಅಯ್ಯಂಗಾರ್,
ವಿವಿಧ ಮೋರ್ಚಾಗಳ ಪದಾಧಿಕಾರಿಗಳಾದ ಎಸ್ ಮಹೇಶ್ ಕುಮಾರ್, ಪುಟ್ಟಮ್ಮಣ್ಣಿ, ವಸುಮತಿ, ರಾಧಾ, ಉಮೇಶ್, ಪ್ರದೀಪ್, ಸಂಪ್ರೀತ್, ಸದಾಶಿವರಾವ್, ಶ್ರೀರಂಗ, ಕೃಷ್ಣಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.