ಮೈಸೂರು: ಮೈಸೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸಂಸದ ಪ್ರತಾಪ ಸಿಂಹ ಅವರನ್ನು ಪಕ್ಚದಿಂದ ಉಚ್ಚಾಟನೆ ಮಾಡಬೆಕೆಂದು ಬಿಜೆಪಿ ಎಸ್ ಟಿ ಮೋರ್ಚಾ ವತಿಯಿಂದ ಮನವಿ ಸಲ್ಲಿಸಲಾಯಿತು.
ಸುಮಾರು ಮೂವತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ನಾವುಗಳು ಹಿಂದೂ ಸಂಘಟನೆ ಸೇರಿದಂತೆ ಭಾರತೀಯ ಜನತಾ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಮತ್ತು ಬ್ಲಾಕ್ ಮಟ್ಟ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇವೆ.ಆದರೆ ಇತ್ತೀಚಿನ ದಿನಗಳಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ಪಕ್ಷಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ಮುಜುಗರ ನಮಗೆ ತೀವ್ರ ಬೇಸರವನ್ನು ಉಂಟುಮಾಡಿವೆ ಎಂದು ಮನವಿಯಲ್ಲಿ ಮನದಟ್ಟು ಮಾಡಲಾಯಿತು.
ಪ್ರತಾಪ್ ಸಿಂಹ ಅವರು ಪ್ರಜಾಪ್ರಭುತ್ವದ ದೇಗುಲವೆಂದೇ ಕರೆಯಲ್ಪಡುವ ದೇಶದ ಸಂಸತ್ ಭವನದ ಒಳಗೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಪೂರ್ವಾಪರ ಪರಿಶೀಲಿಸದೆ ಒಳಗೆ ಪ್ರವೇಶಿಸಲು ಪಾಸ್ ನೀಡಿರುವುದು ದೇಶದ ಭದ್ರತಾ ವ್ಯವಸ್ಥೆಯನ್ನೇ ಆಣಕಿಸಿದೆ.
ಅಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಸಮಸ್ತ ಕರ್ನಾಟಕದ ಜನತೆ ತಲೆ ಎತ್ತಿ ನಡೆಯಲು ಸಾಧ್ಯವಾಗದಷ್ಟು ಮುಜುಗರವನ್ನು ಸೃಷ್ಟಿಸಿತ್ತು.
ಸಂಸತ್ತಿನಲ್ಲಿ ಭಯೋತ್ಪಾದಕರಿಗೆ ಸಂಸದ ಪ್ರತಾಪ ಸಿಂಹ ಮೂರ್ನಾಲ್ಕು ಬಾರಿ ಪಾಸ್ ನೀಡಿದ್ದಾರೆಂದರೆ ಆ ಇಬ್ಬರು ಯುವಕರು ಪರಿಚಯಸ್ತರು ಎಂಬುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
ಸಂಸತ್ ಭವನದ ದಾಳಿಯ ತನಿಖೆ ಮುಗಿಯುವ ವರೆವಿಗೂ ಪ್ರತಾಪ ಸಿಂಹ ಅವರಿಗೆ ಪಕ್ಷದ ಯವುದೇ ಉನ್ನತ ಉದ್ದೆ ನೀಡಬಾರದು,ಒಟ್ಟಾರೆ ಪ್ರತಾಪ ಸಿಂಹ ಅವರನ್ನ ಉಚ್ಚಾಟನೆ ಮಾಡಬೇಕೆಂದು ಕೇಂದ್ರ ಭಾರತೀಯ ಜನತಾ ಪಾರ್ಟಿಗೆ ಶಿಫಾರಸು ಮಾಡಬೇಕೆಂದು
ಎಸ್ ಟಿ ಮೊರ್ಚ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್ ಕುಮಾರ್ ಮತ್ತು
ಚಾಮರಾಜ ಕ್ಷೇತ್ರ ನಿಕಟಪೂರ್ವ
ಉಪಾಧ್ಯಕ್ಷ ಕುಮಾರ್ ಗೌಡ ಅವರ ನೇತೃತ್ವದಲ್ಲಿ ವಿಜಯೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.