ಬಿಜೆಪಿಗೆ ಭ್ರಷ್ಟ ಲೇಬಲ್ ಬರಲುವಿಜಯೇಂದ್ರ ಕಾರಣ:ರಮೇಶ್ ಜಾರಕಿಹೊಳಿ

Spread the love

ಚಿಕ್ಕೋಡಿ: ಬಿಜೆಪಿಗೆ ಭ್ರಷ್ಟ ಲೇಬಲ್ ಬರಲು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಣ ಅವರ ನಾಯಕತ್ವವವನ್ನು ನಾನು ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಕಾರವಾಗಿ ಹೇಳಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಸ್ಥಾನವನ್ನು ನಾನು ಎಂದಿಗೂ ಒಪ್ಪುವುದಿಲ್ಲ ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯೇಂದ್ರ ಪಕ್ಷದಲ್ಲಿ ಜೂನಿಯರ್, ಯಾವುದೇ ಸಿದ್ಧಾಂತ ಇಲ್ಲ. ಭಾರತಿಯ ಜನತಾ ಪಕ್ಷದ ಭ್ರಷ್ಟ ಅಂತ ಲೇಬಲ್ ಕೊಟ್ಟಿದ್ದು ವಿಜಯೇಂದ್ರ, ನಾನು ಯಡಿಯೂರಪ್ಪನವರನ್ನು ಯಾವತ್ತೂ ವಿರೋಧ ಮಾಡುವುದಿಲ್ಲ, ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕರು ಅವರ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು.

ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ನಾಯಕತ್ವ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ವರಿಷ್ಠರು 15 ರಿಂದ 20 ಜನರ ನಾಯಕತ್ವದಲ್ಲಿ ಲೀಡರ್‌ಶಿಪ್‌ ಕೊಡಿ. 120 ರಿಂದ 130 ಸ್ಥಾನಗಳನ್ನು ಗೆಲ್ಲಿಸಿ ಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ಕೊಟ್ಟಂತಹ ಟಾಸ್ಕ್‌ನಲ್ಲಿ ಫೇಲಾದರೆ ನಮ್ಮನ್ನು ಒದ್ದು ಹೊರಗೆ ಹಾಕಿ,ಯಡಿಯೂರಪ್ಪನವರಿಗೆ ವಯಸ್ಸಾಗಿದ್ದು ಅವರಿಗೆ ವಿಶ್ರಾಂತಿ ಅಗತ್ಯವಿದೆ. ಅವರ ಸಲಹೆ ಬೇಕಾದರೆ ಅವರ ಮನೆಗೆ ನಾವು ಹೋಗುತ್ತೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.