ಪಿ ಜಿ ಆರ್ ಎಸ್ ಎಸ್ ಬೃಂದಾವನದಲ್ಲಿ ನೀಮಾ ಲೋಬೋ ಹುಟ್ಟುಹಬ್ಬ ಆಚರಣೆ

ಮೈಸೂರು: ಸರ್ವಕಲ ಸೇವಾ ಟ್ರಸ್ಟ್ ಅಧ್ಯಕ್ಷರು, ಸಮಾಜ ಸೇವಕರು, ಚಿತ್ರನಟಿ, ಗಾಯಕರೂ ಆದ ರಕ್ತದಾನಿ ನೀಮಾ ಲೋಬೋ ಅವರ ಹುಟ್ಟುಹಬ್ಬವನ್ನು ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದಲ್ಲಿ ಆಚರಿಸಲಾಯಿತು.

ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೂಡಿ ಎಲ್ಲಾ ಹಿರಿಯ ತಾಯಂದಿರ ಸಮ್ಮುಖದಲ್ಲಿ ನೀಮಾ ಲೋಬೋ ಅವರ ಹುಟ್ಟು ಹಬ್ಬ ಆಚರಿಸಿ ಶುಭ ಕೋರಲಾಯಿತು.

ಬೃಂದಾವನದ ಅಧ್ಯಕ್ಷರಾದ ಯಾದವ್ ಹರೀಶ್, ಖಜಾಂಚಿ ಮಂಜುಳಾ, ರಾಜ್ಯ ಸಂಚಾಲಕರಾದ ರಕ್ತದಾನಿ ಮಂಜು, ಕಂಪ್ಯೂಟರ್ ಆಪರೇಟರ್ ಹರಿಣಿ ಮತ್ತು ಎಲ್ಲಾ ತಾಯಂದಿರು ಶುಭ ಕೋರಿದರು.

ಪಿ ಜಿ ಆರ್ ಎಸ್ ಎಸ್ ಬೃಂದಾವನದಲ್ಲಿ ನೀಮಾ ಲೋಬೋ ಹುಟ್ಟುಹಬ್ಬ ಆಚರಣೆ Read More

ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥ: ನ್ಯಾ.ಜಿ. ಪ್ರಭಾವತಿ

ಚಾಮರಾಜನಗರ: ಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ವಾಜ್ಯಪೂರ್ವ ಪರಿಹಾರ ಕೇಂದ್ರದಲ್ಲಿ ಈ ವಿಷಯ ತಿಳಿಸಿದ ಅವರು ಕಳೆದ ಬಾರಿಯ ಲೋಕ್ ಅದಾಲತ್‍ನಲ್ಲಿ 1,04,649 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿತ್ತು. ಇತ್ತೀಚೆಗೆ ಅಂದರೆ ಡಿ.13ರಂದು ನಡೆದ ಅದಾಲತ್‍ನಲ್ಲಿ 2642 ನ್ಯಾಯಾಲಯ ಪ್ರಕರಣಗಳು ಹಾಗೂ 1,17,403 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 1,20,045 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಹೇಳಿದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ‘ಸರ್ವರಿಗೂ ನ್ಯಾಯ’ ಪರಿಕಲ್ಪನೆಯಡಿ ಜನಸಾಮಾನ್ಯರ ಅನುಕೂಲಕ್ಕಾಗಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಜಿಲ್ಲೆಯ ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಎಲ್ಲಾ ರೀತಿಯ ಸಿವಿಲ್, ರಾಜಿಯೋಗ್ಯ ಕ್ರಿಮಿನಲ್ ಪ್ರಕರಣಗಳು, ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಲು ಮೆಗಾ-ಲೋಕ್ ಅದಾಲತ್ ಏರ್ಪಡಿಸಲಾಗಿತ್ತು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಚಾಮರಾಜನಗರದ 665, ಯಳಂದೂರು 230, ಕೊಳ್ಳೇಗಾಲ 1089 ಹಾಗೂ ಗುಂಡ್ಲುಪೇಟೆಯ 658 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದ ಒಟ್ಟು 1,17,403 ಸೇರಿದಂತೆ 1,20,045 ಪ್ರಕರಣಗಳು ಇತ್ಯರ್ಥಗೊಂಡಿದೆ ಎಂದರು.ಒಟ್ಟು 2642 ಪ್ರಕರಣಗಳಲ್ಲಿ 10,89,73,167 ರೂ.ಗಳು ಹಾಗೂ 1,17,403 ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 4,91,38,228 ರೂಪಾಯಿ ಒಟ್ಟು 15,81,11,395 ಮೊತ್ತವನ್ನ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೌಟುಂಬಿಕವಾಗಿ ವಿವಾಹ ವಿಚ್ಛೇಧನ, ಪತಿ ಅಥವಾ ಪತ್ನಿಯಿಂದ ಜೀವನಾಂಶ ಕೋರಿಕೆ ಹಾಗೂ ವಿಚ್ಚೇಧನಾ ಪ್ರಕರಣ ದಾಖಲಾಗುವ ದೂರುಗಳು ಸೇರಿದಂತೆ ಒಟ್ಟು ೧೧ ಪ್ರಕರಣಗಳನ್ನು ಇತ್ಯರ್ಥಪಡಿಸಿ ಪತಿ-ಪತ್ನಿಯರನ್ನು ಒಂದುಗೂಡಿಸಲಾಗಿದೆ ಎಂದು ಹೇಳಿದರು.

ನ್ಯಾಯಾಲಯದಲ್ಲಿದ್ದ ಬಾಕಿ ರಾಜಿಯೋಗ್ಯ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳ ಕಕ್ಷಿದಾರರು ನ್ಯಾಯಾಧೀಶರು, ವಕೀಲರು, ಸಂಧಾನಕಾರರಿಂದ ಲೋಕ್ ಅದಾಲತ್ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ 10-15 ವರ್ಷಗಳಿಂದ ಬಾಕಿ ಇದ್ದ 7 ಪ್ರಕರಣಗಳನ್ನು ರಾಜಿ ಮೂಲಕ ಹಾಗೂ ಅಪಘಾತ ವಿಮಾ ಪರಿಹಾರ ಸೇರಿದಂತೆ ಪ್ರಕರಣ ಇತ್ಯರ್ಥಪಡಿಸಲಾಗಿದೆ.
ಅಲ್ಲದೆ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಾಗುವ ಮೊದಲೆ ಸಾಕಷ್ಟು ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿರುವುದು ಹರ್ಷದಾಯವಾಗಿದೆ. ಇದರಿಂದ ಕಕ್ಷಿದಾರರ ಸಮಯ, ಹಣ, ಉಳಿತಾಯವಾಗಿದೆ. ನ್ಯಾಯಾಲಯದ ಹೊರೆಯೂ ತಗ್ಗಿದೆ. ಅದಾಲತ್ ಯಶಸ್ಸಿಗೆ ಕಾರಣರಾದ ಜಿಲ್ಲಾಡಳಿತ, ವಿವಿಧ ಇಲಾಖೆಗಳು, ಬ್ಯಾಂಕ್‍ಗಳಿಗೆ ಅಭಿನಂದನೆಗಳನ್ನು ಜಿ. ಪ್ರಭಾವತಿ ಅವರು ತಿಳಿಸಿದರು.

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಸಕ್ತ (2025) ವರ್ಷದಲ್ಲಿ ನಾಲ್ಕು ಲೋಕಾ ಅದಾಲತ್ ನಡೆದಿತ್ತು ನ್ಯಾಯಾಲಯದ ಒಟ್ಟು ಪ್ರಕರಣ10,183, ಪೂರ್ವ ವ್ಯಾಜ್ಯದ 3,90,249 ಒಟ್ಟು 400432 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಇದೇ ‌ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ. ಪ್ರಭಾವತಿ ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಡಿ. ಪ್ರಕಾಶ್ ಹಾಜರಿದ್ದರು.

ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥ: ನ್ಯಾ.ಜಿ. ಪ್ರಭಾವತಿ Read More

ಕೆ.ಆರ್.ನಗರದಲ್ಲಿ ಹಸುವಿಗೂ ಸೀಮಂತ ಮಾಡಿ ಸಂಭ್ರಮಿಸಿದ ಕುಟುಂಬ!

ಕೆ.ಆರ್.ನಗರ: ಮನೆಯ ಮಗಳು ಚೊಚ್ಚಲ ಗರ್ಭಿಣಿಯಾದರೆ ಇಡೀ ಕುಟುಂಬ ಸಂಭ್ರಮ ಪಡುವುದು ಸಾಮಾನ್ಯ,ಆದರೆ ಕೆ.ಆರ್.ನಗರದಲ್ಲಿ ಹಸುವಿಗೂ ಸೀಮಂತ ಮಾಡುವ ಮೂಲಕ ಮನೆಯವರು ಸಂಭ್ರಮಿಸಿದ್ದಾರೆ.!

ಕೆ.ಆರ್.ನಗರ ಹೊರವಲಯದ ಕೆಂಪನಕೊಪ್ಪಲು ಗ್ರಾಮದ ರೈತ ಮಹಿಳೆ ರೇಣುಕಾ ಕೃಷ್ಣೇಗೌಡ ಅವರ ಮನೆಯಲ್ಲಿ ಹೀಗೆ‌ ಖುಷಿ,ಸಂಭ್ರಮ ಎದ್ದು ಕಾಣುತ್ತಿತ್ತು.
ರೇಣುಕಾ ಅವರು ತಮ್ಮ ಚೊಚ್ಚಲು ತುಂಬಿದ ಗರ್ಭಿಣಿ ಹಸುವಿನ ಸೀಮಂತವನ್ನು ಶಾಸ್ತ್ರೋಕ್ತವಾಗಿ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರೇಣುಕಾ ಕೃಷ್ಣೇಗೌಡ ಅವರು ತಮ್ಮ ಮನೆಯಲ್ಲಿಯೇ ಹುಟ್ಟಿದ ಕರುವನ್ನು ಬಹಳ ಪ್ರೀತಿಯಿಂದ ಸಾಕಿದ್ದಾರೆ, ಅದು ದೊಡ್ಡದಾಗಿ ಬೆಳೆದು ಚೊಚ್ಚಲ ಗರ್ಭಿಣಿ.
ಹಾಗಾಗಿ ಅವರು ಗ್ರಾಮದ ಮುತ್ತೈದೆಯರನ್ನು ಕರೆಸಿ ಪ್ರೀತಿಯ ಹಸುವಿನ ಸೀಮಂತ ಶಾಸ್ತ್ರ ಮಾಡಿ ಸಂಭ್ರಮಾಚರಣೆ ಮಾಡಿದ್ದು ಎಲ್ಲರ ಮನೆಯಲ್ಲೂ ಇದೇ ಮಾತಾಗಿದೆ.

ರೇಣುಕಾ ಕೃಷ್ಣೇಗೌಡ ಅವರು ತಮ್ಮ ಪ್ರೀತಿಯ ಹಸುವಿಗೆ ಒಂಬತ್ತು ತಿಂಗಳು ತುಂಬಿದ ಕೂಡಲೇ ಸೀಮಂತ ಮಾಡಲು ನಿರ್ಧರಿಸಿ, ಅಕ್ಕಪಕ್ಕದ ಮನೆಯವರಿಗೆ ಹಾಗೂ ಗ್ರಾಮಸ್ಥರಿಗೆ ವುಷಯ ತಿಳಿಸಿ ಸೀಮಂತ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಮನೆಯ ಮುಂದೆ ಶಾಮಿಯಾನ ಹಾಕಿಸಿ ಎಲ್ಲರೂ ಮನೆಯ ಮಗಳು ಗರ್ಭಿಣಿಯಾದಾಗ ನಡೆಸುವ ಸೀಮಂತ ಕಾರ್ಯದಂತೆಯೇ ಹಸುವಿಗೆ ರೇಷ್ಮೆ ಸೀರೆ, ಹಸಿರುಬಳೆ ತೊಡಿಸಿ,ಕೊರಳಿಗೆ ಹೂ ಮಾಲೆ ಹಾಕಿ, ಕಾಲಿಗೆ ಗೆಜ್ಜೆ ಕಟ್ಟಿ ಶೃಂಗಾರ ಮಾಡಿ, ಐದು ಬಗೆಯ ಸಿಹಿ ತಿಂಡಿಗಳು, ಐದು ಬಗೆಯ ಹಣ್ಣುಗಳನ್ನು ನೀಡಿ, ಆರತಿ ಬೆಳಗಿದರು.

ಊರಿನ ಮುತ್ತೈದೆಯರಾದ ಪವಿತ್ರ, ಮಂಜುಳ, ಮಮತ, ಶಾಲಿನಿ, ರಶ್ಮಿ ಮಹೇಶ್ ಅವರುಗಳನ್ನು ಕರೆಸಿ ಶಾಸ್ತ್ರೋಕ್ತ ವಾಗಿ ಸೀಮಂತ ಮಾಡಿದ್ದಾರೆ.

ಜತೆಗೆ ಗ್ರಾಮಸ್ಥರಿಗೆ ಸಿಹಿ ಊಟ ಹಾಕಿಸುವ ಮೂಲಕ ರೇಣುಕಾ ಕೃಷ್ಣೇಗೌಡ ಮಾದರಿಯಾಗಿದ್ದಾರೆ.

ಗ್ರಾಮದ ಅನೇಕ ಮಹಿಳೆಯರು ಮತ್ತಿತರರು ಭಾಗವಹಿಸಿ ಗರ್ಭಿಣಿ ಹಸುವಿಗೆ ಶುಭ ಹಾರೈಸಿದರು.

ಕೆ.ಆರ್.ನಗರದಲ್ಲಿ ಹಸುವಿಗೂ ಸೀಮಂತ ಮಾಡಿ ಸಂಭ್ರಮಿಸಿದ ಕುಟುಂಬ! Read More

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

(ವರದಿ:ಸಿಬಿಎಸ್‌)

ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದ ಕೂಡಲೇ ಕೆಲಕಾಲ ಆತಂಕದ ವಾತಾವರಣ‌ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಪೊಲೀಸರು‌ ಸ್ಥಳಕ್ಜೆ ಧಾವಿಸಿ ದರು.

ಬೆದರಿಕೆ ಮೇಲ್‌ನ ಸಾರಾಂಶದ ಪ್ರಿಂಟೌಟ್ ತೆಗೆದು ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ಹೊರಡಿಸಿದ್ದರು.

ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ ನಡುವೆಯೂ ಜಿಲ್ಲಾಧಿಕಾರಿಗಳು ಸಭೆ ಮುಂದುವರೆಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ Read More

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ

ಮೈಸೂರು: ಶಾಸಕರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ಸೋಮವಾರ ಭಾವಪೂರ್ಣ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್. ಎಸ್, ಉಪಾಧ್ಯಕ್ಷರುಗಳಾದ ರಂಗಸ್ವಾಮಿ ಪಾಪು, ರಾಜೇಶ್ ಸಿ ಗೌಡ, ಶಿವಲಿಂಗಯ್ಯ, ರೇಷ್ಮಾ, ನಾಸೀರ್ ಖಾನ್, ನಿರೂಪಕ ಅಜಯ್ ಶಾಸ್ತ್ರಿ, ಶುಭಪಲ್ಲವಿ, ಗುರುರಾಜ್, ಸದಸ್ಯರುಗಳಾದ ಶ್ರೀಕಾಂತ, ಮೊಹಮ್ಮದ್ ಸಿದ್ದಿಖ್, ಚಿಕ್ಕಣ್ಣ ಶಿವರುದ್ರ, ರಾಜಶೇಖರ್ ಕಾರ್ತಿಕ್ ಲೋಕೇಶ್ ಮತ್ತಿತರರು ಹಾಜರಿದ್ದರು

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ Read More

ಲಯನ್ಸ್ ಪ್ರಾಂತೀಯ ಸಮ್ಮೇಳನ:’ಬದುಕಿ ಬದುಕಲು ಬಿಡಿ’ ಸಂದೇಶಕ್ಕೆ ಆದ್ಯತೆ

ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು.

ಬದುಕಿ ಬದುಕಲು ಬಿಡಿ ಎಂಬ ಮಾನವೀಯ ಸಂದೇಶವನ್ನು ಕೇಂದ್ರವಾಗಿಟ್ಟುಕೊಂಡು ಆಯೋಜಿಸಲಾಗಿದ್ದ ಈ ಸಮ್ಮೇಳನವು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮಹತ್ವವನ್ನು ಸಾರಿತು.

ಸಮ್ಮೇಳನವನ್ನು ಉದ್ಘಾಟಿಸಿದ ಗ್ರೀನ್ ಆಸ್ಕರ್ ಪ್ರಶಸ್ತಿ ವಿಜೇತರಾದ ಕೃಪಾಕರ ಮತ್ತು ಸೇನಾನಿ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ಬದುಕುವುದು ಅಗತ್ಯವಿದೆ. ಪ್ರತಿಯೊಬ್ಬರೂ ತಮ್ಮ ಬದುಕಿನ ಜೊತೆಗೆ ಇತರರ ಬದುಕಿನ ಹಕ್ಕನ್ನು ಗೌರವಿಸಿದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಮೈಸೂರು ರಂಗನಾಥ್ ಅವರನ್ನು ಗೌರವಿಸಲಾಯಿತು.

ಈ ವೇಳೆ ಪ್ರಾಂತೀಯ ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜು ಅವರು ಮಾತನಾಡಿ, “ಬದುಕಿ ಬದುಕಲು ಬಿಡಿ” ಎಂಬುದು ಕೇವಲ ನುಡಿ ಮಾತ್ರವಲ್ಲ, ಅದು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಮೌಲ್ಯವಾಗಿದೆ ಎಂದು ತಿಳಿಸಿದರು.

ಯುವಜನತೆ ಈ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಹೆಚ್ಚಲಿದೆ ಎಂದು ಹೇಳಿದರು.

ಲಯನ್ಸ್ ಅಂಬಾಸಿಡರ್ ಸಂಸ್ಥೆಯ ಸ್ಥಾಪಕ ಸದಸ್ಯರು ಅತಿಥಿಯ ಸಮಿತಿಯ ಅಧ್ಯಕ್ಷರಾದ ಲಯನ್ ಎಮ್. ಶಿವಕುಮಾರ್ ಅವರು ಪಿರಿಯಾಪಟ್ಟಣದ ಬೇಗೂರು ಗ್ರಾಮದಲ್ಲಿ ಯುವಕ ಯುವತಿಯರಿಗೆ ಸ್ವಉದ್ಯೋಗ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ, ಹೊಲಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಉದ್ದೇಶದಿಂದ ತಮ್ಮ ಎರಡು ಎಕರೆ ಜಾಗವನ್ನು ಲಯನ್ಸ್ ಕ್ಲಬ್ ಮೈಸೂರು ಅಂಬ್ಯಾಸಿಡರ್ ಸೇವಾ ಟ್ರಸ್ಟಿಗೆ ದಾನವಾಗಿ ನೀಡಿದರು.

ಪ್ರಾಂತೀಯ ಸಮ್ಮೇಳದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕ್ಯಾನ್ಸರ್ ಪಿಡೀತ ಎಂಟು ವರ್ಷದ ಮಗುವಿಗೆ 50,000 ಧನ ಸಹಾಯ ,ಹೊಲಿಗೆ ಯಂತ್ರಗಳು, ವಿದ್ಯಾರ್ಥಿಗಳಿಗೆ ಶುಲ್ಕ ವಿತರಿಸಲಾಯಿತು.

ಜಿಲ್ಲಾ ರಾಜ್ಯಪಾಲರಾದ ಲಯನ್ ಕೆ.ಎಲ್.ರಾಜಶೇಖರ ಅವರು ನಮ್ಮ ಜಿಲ್ಲೆಯಲ್ಲಿ ಲಯನ್ ಸಂಸ್ಥೆಗಳಿಂದ ಅತ್ಯಮೂಲ್ಯವಾದ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ಎಲ್ಲಾ ಸದಸ್ಯರಿಗೆ ಅಭಿನಂದನೆಗಳು ಎಂದು ಹೇಳಿದರು.

ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಎನ್ ಕೃಷ್ಣೇಗೌಡ ಅವರು ಮಾತನಾಡಿ ಪ್ರಸ್ತುತ ವಿದ್ಯಮಾನದಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ ಆದ್ದರಿಂದ ಅವುಗಳನ್ನು ನಿಯಂತ್ರಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷರಾದ ಬಾಲು ,ನಾಗರಾಜು, ಮೆಂಟರ್ ಕರಿಯಪ್ಪ, ಡಾ.ಆರ್.ಡಿ.ಕುಮಾರ್ ,ಕೆ.ಟಿ ವಿಷ್ಣು, ರಾಜೇಶ್ ಉಪಸ್ಥಿರಿದರು.

ವಿ.ಶ್ರೀಧರ್ ವಂದಿಸಿದರೆ ಕಾರ್ಯಕ್ರಮದ ನಿರೂಪಣೆಯನ್ನು ಸಿ.ಆರ್.ದಿನೇಶ್ ಮಾಡಿದರು.

ಲಯನ್ಸ್ ಪ್ರಾಂತೀಯ ಸಮ್ಮೇಳನ:’ಬದುಕಿ ಬದುಕಲು ಬಿಡಿ’ ಸಂದೇಶಕ್ಕೆ ಆದ್ಯತೆ Read More

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ

ಮೈಸೂರು: ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.

ಶಾಮನೂರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಅವರು ಶಾಮನೂರು ಶಿವಶಂಕರಪ್ಪ ನವರ ನಿಧನದ ಸುದ್ದಿ ತಿಳಿದು ಆಘಾತವಾಯಿತು ಹಾಗೂ ತೀವ್ರ ದುಃಖವನುಂಟು ಮಾಡಿದೆ ಎಂದು ಹೇಳಿದರು.

ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಮಾರ್ಗದರ್ಶಕರಾಗಿ ಅವರು ಸಲ್ಲಿಸಿದ ಸೇವೆ ಅಮೂಲ್ಯ,ದೀರ್ಘಕಾಲದ ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ಶಿಸ್ತಿನ ರಾಜಕಾರಣ ಮಾಡಿದ್ದರು.
ಅವರ ಅಗಲಿಕೆ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ರಾಜಕೀಯ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ, ಅವರ ಆದರ್ಶಗಳು ಹಾಗೂ ಸೇವಾ ಮನೋಭಾವ ಮುಂದಿನ ತಲೆಮಾರಿಗೆ ಪ್ರೇರಣೆಯಾಗಲಿದೆ ಎಂದು ನಜರ್ಬಾದ್ ನಟರಾಜ್ ತಿಳಿಸಿದರು.

ಎಸ್ ಎನ್ ರಾಜೇಶ್, ಕಡಕೋಳ ಶಿವಲಿಂಗು, ದಿನೇಶ್, ಮೊಹಮ್ಮದ್, ನಂಜುಂಡಸ್ವಾಮಿ,ರವಿಚಂದ್ರ, ದೀಪಕ್, ಹರೀಶ್ ನಾಯ್ಡು, ಲೋಕೇಶ್ ಮತ್ತುತರರು ಹಾಜರಿದ್ದರು.

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ Read More

ಶಾಮನೂರು ಅವರಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ರಾಮಾನುಜ ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅವರ ಸೇವೆಗಳನ್ನು ಸ್ಮರಿಸಲಾಯಿತು.

ಶಾಮನೂರು ಅವರಿಗೆ ಶ್ರದ್ಧಾಂಜಲಿ Read More

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ

ಮೈಸೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರು ಖಡಕ್ ಸೂಚನೆ ನೀಡಿದರು.

ಪೊಲೀಸ್ ಗೃಹ ನಿರ್ಮಾಣ ಸಂಘದ ಅಧ್ಯಕ್ಷ, ನಾಗೇಶ್, ಉಪಾಧ್ಯಕ್ಷ ಮರಿಗೌಡ ಹಾಗೂ ಯುವ ಮುಖಂಡ ಗಗನ್ ಅವರುಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದರು.

ಶಾಸಕರು ಬಡಾವಣೆಗೆ ಸಂಬಂಧಪಟ್ಟ ಅಧಿಕಾರಿಗಳೊಡನೆ ಚರ್ಚಿಸಿದರು,ಮತ್ತು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿ ಬಡಾವಣೆಯಲ್ಲಿರುವ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಡವಣಿಗೆ ಮೂರು ಬೋರ ಗಳನ್ನು ಹಾಕಿಸಬೇಕು ಕಾವೇರಿ ನೀರನ್ನು ಒಂದೂವರೆ ತಿಂಗಳಲ್ಲಿ ಕೊಡಬೇಕು ಮತ್ತು ಎರಡು ರಸ್ತೆಗಳನ್ನು ಮಾಡಿ ಮೂರು ಹೈಮಾಸ್ಟ್ ದೀಪಗಳನ್ನು ಹಾಕುವಂತೆ ಅಧಿಕಾರಿಗಳಿಗೆ ಜಿಟಿಡಿ ಸೂಚಿಸಿದರು.

ಇದೇ ವೇಳೆ ಜಿ ಟಿ ಗೌಡರ 75ನೇ ವರ್ಷದ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಪೆಟಲ್ಸ್ ಶಾಲೆಯ ಮಕ್ಕಳು ಹಾಡು ಹೇಳುವ ಮೂಲಕ ಆಚರಿಸಿ ಶಾಸಕರಿಗೆ ಶುಭ ಕೋರಿದರು.

ಈ ವೇಳೆ ಮಕ್ಕಳ ಜೊತೆ ಕೇಕ್ ಕತ್ತರಿಸಿ, ಗಿಡಗಳನ್ನು ನೆಡುವ ಮೂಲಕ ಜಿ ಟಿ ದೇವೇಗೌಡರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

ಇದೇ ಸಂದರ್ಭದಲ್ಲಿ ಯುವ ಮುಖಂಡ ಗಗನ್ ಅವರು ಮಾಡುತ್ತಿರುವ‌‌ ಸಮಾಜ ಸೇವೆಯನ್ನು ಗುರುತಿಸಿ ಬಡಾವಣೆ ಜನರು ಹಾಗೂ ಶಾಸಕರು ಸನ್ಮಾನ ಮಾಡಿದರು.

ಪೊಲೀಸ್ ಬಡಾವಣೆಯ ಜನತೆಯ ಕಷ್ಟಗಳಿಗೆ ತಕ್ಷಣ ಪರಿಹಾರ ಮಾಡಿಕೊಟ್ಟ ಶಾಸಕ ಜಿ.ಟಿ.ದೇವೇಗೌಡರಿಗೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ನಾಗರಿಕರು ವಂದನೆಗಳನ್ನು ಸಲ್ಲಿಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ Read More

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ

ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ
ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಮೆತ್ತಲೋಕ ವಿದ್ಯಾರ್ಥಿ ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸಿ ಎಚ್ ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಅವರು, ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ದೇಶದ ಅಭಿವೃದ್ಧಿ ಜೊತೆಗೆ ಹೆಚ್ಚಿನ ಆದ್ಯತೆಯ ಮೇಲೆ ರಾಜ್ಯದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ, ಇವರಿಗೆ ತಾಯಿ ಚಾಮುಂಡೇಶ್ವರಿ ಹೆಚ್ಚಿನ ಆರೋಗ್ಯ ಕರುಣಿಸಲಿ ಎಂದು ಹಾರೈಸಿದರು.

ಈಗಾಗಲೇ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಜನರ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ,
ಲಾಟರಿ ನಿಷೇಧ, ಸಾರಾಯಿ ನಿಷೇಧ, ಗ್ರಾಮ ವಾಸ್ತವ್ಯ, ರೈತರ ಸಾಲ ಮನ್ನಾ ಮತ್ತಿತರ ಒಳ್ಳೆಯ ಕೆಲಸ ಮಾಡಿ ಜನಪರ ಆಡಳಿತ ನೀಡಿದ್ದಾರೆ, ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಅವರು ತಾಯಿ ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ನಂತರ ಸ್ನೇಹ ಬಳಗದ ಸದಸ್ಯರು ವಿದ್ಯಾರ್ಥಿಗಳು ಎಚ್ ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್,ಸಿಂಚನಗೌಡ, ವಿದ್ಯಾ, ನಾಗಶ್ರೀ ಸುಚಿಂದ್ರ, ಛಾಯಾ,ಗಾಯಕ ಯಶವಂತ್ ಕುಮಾರ್, ಜಗದೀಶ್,ರಾಜೇಶ್ ಕುಮಾರ್,ಮಹೇಶ, ಶ್ರೀಧರ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್ ,ದತ್ತ ಮತ್ತಿತರರು ಹಾಜರಿದ್ದರು.

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ Read More