ಡಾ. ಬಿ ಆರ್ ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ-ಸೇವಾಕಾರ್ಯ

ಮೈಸೂರು: .ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನದ ಪ್ರಯುಕ್ತ‌ ಸೇವಾಕಾರ್ಯ ಹಮ್ಮಿಕೊಳ್ಳಲಾಯಿತು.

ನಗರದ ಸರಸ್ವತಿಪುರಂನಲ್ಲಿರುವ ಸಾನಿಧ್ಯ ವೃದ್ಧಾಶ್ರಮದ ಹಿರಿಯ ನಾಗರಿಕ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು ಹಂಪಲು ವಿತರಿಸುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಗೌರವ ನಮನ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಕ್ರೀಡಾಪಟು ಮಹದೇವ್, ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ 69ನೇ ಮಹಾಪರಿ ನಿಬ್ಬಣ ದಿನವನ್ನು ಇಂದಿನ ಯುವಪೀಳಿಗೆ ಸ್ಮರಿಸಬೇಕು ಎಂದು ಹೇಳಿದರು.
ಅಂಬೇಡ್ಕರ್ ಅವರ ಆದರ್ಶ, ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಅವರು ನೀಡಿರುವ ಸಂವಿಧಾನ ಅಡಿಯಲ್ಲಿ ಎಲ್ಲರೂ ಶಾಂತಿಯುತವಾಗಿ ಸಹ ಬಾಳ್ವೆಯೊಂದಿಗೆ ಬಾಳಬೇಕು ಎಂದು ತಿಳಿಸಿದರು.

ಸ್ನೇಹ ಬಳಗವು ಸೇವಾ ಕಾರ್ಯದೊಂದಿಗೆ ಗೌರವ ನಮನ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷಕರ ಸಂಗತಿ ಎಂದು ಹೇಳಿದರು.
ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಮಾತನಾಡಿ,ಡಾ. ಬಿ. ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಅಳವಡಿಸಿಕೊಂಡು ಬದುಕುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಮತದಾನದ ಹಕ್ಕನ್ನು ನೀಡಿರುವ ಈ ಆದರ್ಶ ಪುರುಷ ಭೌತಿಕವಾಗಿ ನಮ್ಮ ಜೊತೆ ಇಲ್ಲದೆ ಇರಬಹುದು ಆದರೆ ಅವರ ನಡೆದು ಬಂದ ಹಾದಿ ಅವರ ಆದರ್ಶ ವ್ಯಕ್ತಿತ್ವ ನಮಗೆಲ್ಲರಿಗೂ ಸದಾ ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮ ದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್,ಸಿಂಚನಗೌಡ (ಮಂಗಳಮುಖಿ), ವಿದ್ಯಾ, ಛಾಯಾ,ಗಾಯಕ ಯಶವಂತ್ ಕುಮಾರ್, ರಾಜೇಶ್ ಕುಮಾರ್, ಮಹೇಶ, ನಿರೀಕ್ಷಿತ್,ದತ್ತ ಮತ್ತಿತರರು ಹಾಜರಿದ್ದರು.

ಡಾ. ಬಿ ಆರ್ ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ-ಸೇವಾಕಾರ್ಯ Read More

ಸ್ಕಂದ ಪರ್ವತ ಪಾರ್ವತಿ ಬೆಟ್ಟಕ್ಕೆ ನಾಳೆ ಗಣಪತಿ ಶ್ರೀ‌ ಭೇಟಿ

ಮೈಸೂರು: ಮೈಸೂರಿ ಅವಧೂತ ದತ್ತಪೀಠದ‌ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಸ್ಕಂದ ಪರ್ವತ ಪಾರ್ವತಿ ಬೆಟ್ಟಕ್ಕೆ ನಾಳೆ ಬೆಳಿಗ್ಗೆ 9.30 ಕ್ಕೆ ತೆರಳಲಿದ್ದಾರೆ.

ಗುಂಡ್ಲುಪೇಟೆ ತಾಲೂಕಿನಲ್ಲಿರುವ ಕಂದೇಗಾಲ ಸ್ಕಂದ ಪರ್ವತ ಪಾರ್ವತಿ ಬೆಟ್ಟಕ್ಕೆ
50 ವರ್ಷಗಳ ನಂತರ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳು ಹಾಗೂ ಆಶ್ರಮದ ಕಿರಿಯ ಸ್ವಾಮೀಜಿ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.

ಭಕ್ತಾದಿಗಳು ಆಗಮಿಸಿ ಶ್ರೀಗಳ ಆಶೀರ್ವಾದಕ್ಕೆ ಪಾತ್ರರಾಗಬಹುದಾಗಿದೆ.

ಸ್ಕಂದ ಪರ್ವತ ಪಾರ್ವತಿ ಬೆಟ್ಟಕ್ಕೆ ನಾಳೆ ಗಣಪತಿ ಶ್ರೀ‌ ಭೇಟಿ Read More

ಹೊದಿಕೆ ವಿತರಣಾ ಅಭಿಯಾನ 6ನೇದಿನಕ್ಕೆ

ಮೈಸೂರು: ಮೈಸೂರಿನ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ
ಚಳಿಗಾಲದ ಹೊದಿಕೆ ವಿತರಣಾ ಅಭಿಯಾನವು 6ನೇದಿನ ಕೂಡಾ ಮುಂದುವರೆಯಿತು.

ಚಾಮರಾಜ ಜೋಡಿ ರಸ್ತೆ, ಅಗ್ರಹಾರ ರಸ್ತೆಯಲ್ಲಿ ರಸ್ತೆ ಬದಿ ಮಲಗಿರುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಯಿತು.
ಹೊದಿಕೆ ವಿತರಣೆ ಕೈಜೋಡಿಸಿದ
ಯುವ ಭಾರತ್ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು,ಬೆಳಕು ಸಂಸ್ಥೆಯ ಅಧ್ಯಕ್ಷರಾದ ಕೆಎಂ ನಿಶಾಂತ್ ಅವರಿಗೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಹೊದಿಕೆ ವಿತರಣಾ ಅಭಿಯಾನ 6ನೇದಿನಕ್ಕೆ Read More

ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ

ಮೈಸೂರು: ಕರ್ನಾಟಕ ರಾಜ್ಯದ ನಾಡ ದೇವತೆಯಾಗಿ ಕನ್ನಡ ತಾಯಿ ಭುವನೇಶ್ವರಿ ದೇವಿ ಯನ್ನು ಅಧಿಕೃತವಾಗಿ ಘೋಷಣೆ ಮಾಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಕೋರಿದ್ದಾರೆ.

ಪ್ರಸ್ತುತ ಚಾಮುಂಡೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಕರೆಯಲಾಗುತ್ತಿದೆ ಆದರೆ ಚಾಮುಂಡೇಶ್ವರಿ ದೇವಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ( ಬೀದರ್ ಇಂದ ಚಾಮರಾಜನಗರ ) ವರೆಗೂ ಹೆಚ್ಚಾಗಿ ಪೂಜಿಸುವುದು ಕಡಿಮೆ ಸುಮಾರು ನಾಲ್ಕು, ಐದು, ಜಿಲ್ಲೆಗಳಲ್ಲಿ ಹೆಚ್ಚಾಗಿ ಪೂಜಿಸುತ್ತಾರೆ.
ಅಖಂಡ ಕರ್ನಾಟಕದಾದ್ಯಂತ ಕನ್ನಡಿಗರು ಕನ್ನಡ ತಾಯಿ ಭುವನೇಶ್ವರಿ ದೇವಿ ಯನ್ನು ಪೂಜಿಸಿ ಆರಾಧಿಸುತ್ತಿದ್ದಾರೆ,ರಾಜ್ಯ ಸರ್ಕಾರ ವಿಧಾನ ಸೌಧದಲ್ಲಿ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭವ್ಯ ಪ್ರತಿಮೆ ಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನಾಗಿ ವಿಶ್ವ ಗುರು ಬಸವಣ್ಣ ನವರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ
ಆದ ಕಾರಣ ರಾಜ್ಯ ಸರ್ಕಾರ ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಕೂಡಲೇ ನಾಡ ದೇವತೆಯಾಗಿ ಭುವನೇಶ್ವರಿ ದೇವಿಯನ್ನು ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ Read More

ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ಕಾರಂಜಿ ಸಹಕಾರಿ:ಎ.ಆರ್. ಕೃಷ್ಣಮೂರ್ತಿ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮದೇ ಆದ ಪ್ರತಿಭೆಗಳನ್ನು ಹೊಂದಿರುತ್ತಾರೆ. ಪ್ರತಿಭೆಗಳನ್ನು ಹೊರ ತರುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು
ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತೆ ಶಾಸಕರು ಕರೆ ನೀಡಿದರು.

ಪಟ್ಟಣದ ಆರ್.ಮಿಷನ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಕರ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಕಾರ್ಯಕ್ರಮವನ್ನು ಅವರು ಉದ್ಘಾಟಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪತ್ಯೇತರ ಚಟುವಟಿಕೆಗೂ ಒತ್ತು ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತಮ್ಮದೇ ಆದ ಪ್ರತಿಭೆಗಳನ್ನು ಹೊಂದಿರುತ್ತಾರೆ,ಅದನ್ನು ಗುರುತಿಸಿ ಪ್ರೊತ್ಸಾಹಿಸಬೇಕು ಎಂದು ದಲಹೆ ನೀಡಿದರು.
ಚಾಮರಾಜನಗರ ಜಿಲ್ಲೆಯು ಜಾನಪದ ಕಲೆಗಳ ತವರೂರಾಗಿದೆ. ವಿದ್ಯಾರ್ಥಿಗಳು ತಮ್ಮ ಸ್ಥಳೀಯ ಜಾನಪದ ಕಲೆಗಳಿಗೆ ಒತ್ತು ನೀಡಬೇಕು. ಆ ಮೂಲಕ ಜಿಲ್ಲೆಯ ಸಂಸ್ಕೃತಿಯನ್ನು ದೇಶಾದ್ಯಂತ ಪಸರಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇತ್ತೀಚಿಗೆ ಯಳಂದೂರಿನಲ್ಲಿ ಆದರ್ಶ ಶಾಲೆಯ ವಿದ್ಯಾರ್ಥಿನಿಯರು ಕಂಸಾಳೆ ನೃತ್ಯದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಅವರಂತೆ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು ಎಂದು ಕೃಷ್ಣಮೂರ್ತಿ ಯವರು ಕರೆ ನೀಡಿದರು.

ರಾಜ್ಯದಲ್ಲಿ 200 ಕೆಪಿಎಸ್ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಮುಂದಾಗಿದ್ದು 3 ಶಾಲೆಗಳನ್ನು ಕೊಳ್ಳೇಗಾಲ ಕ್ಷೇತ್ರಕ್ಕೆ ಮಂಜೂರು ಮಾಡಿದ್ದು ಮತ್ತೆ ಮೂರು ಶಾಲೆಗಳ ಮಂಜೂರಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ 6 ಶಾಲೆಗಳನ್ನು ಮಂಜೂರು ಮಾಡಿದ್ದಾರೆ.

ಅಲ್ಲದೇ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಾಲೂಕಿನ ಕುರುಬನ ಕಟ್ಟಿ ಗುಡ್ಡಗಾಡು ಪ್ರದೇಶದಲ್ಲಿ 5 ಎಕರೆ ಜಾಗದಲ್ಲಿ ಮುರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ಶಾಲೆ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿದ್ದು, ಶೀಘ್ರವೇ ವಸತಿ ಶಾಲೆಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ಬಿ.ಆರ್.ಸಿ ಮಹದೇವ ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್, ಪ್ರೌಢಶಾಲಾ ಸಹಶಿಕ್ಷಕರ ಸಂಘ ಅಧ್ಯಕ್ಷ ಅಕ್ಬರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್, ಕಾರ್ಯಕ್ರಮ ನೂಡಲ್ ಅಧಿಕಾರಿ ವಿಜಯ್ ಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷರಾದ ಬುಕಾನಿ, ಸಂಸ್ಥೆಯ ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕಿ ಸಿಸ್ಟರ್ ಲೆತಿಷಿಯ ಹಾಗೂ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಅನ್ನಮ್ಮ ದೈಹಿಕ ಶಿಕ್ಷಕ ಪೀಟರ್ ಮತ್ತಿರರು ಹಾಜರಿದ್ದರು.

ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ಕಾರಂಜಿ ಸಹಕಾರಿ:ಎ.ಆರ್. ಕೃಷ್ಣಮೂರ್ತಿ Read More

ಮುನೇಶ್ವರ ಕಾವಲ್ ಮೈದಾನದಲ್ಲಿ ವಿ.ಐ.ಪಿ ರಸ್ತೆ:ಚೆಲುವರಾಜು ವಿರೋಧ

ಹುಣಸೂರು: ಹುಣಸೂರು ನಗರಾದ್ಯಂತ ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸದೇ ಮುನೇಶ್ವರ ಕಾವಲ್ ಮೈದಾನದಲ್ಲಿ ವಿ.ಐ.ಪಿ ರಸ್ತೆ ಮಾಡ ಹೊರಟಿರುವುದು ಸರಿಯಲ್ಲ, ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕೆಂದು ಕರ್ನಾಟಕ ಪ್ರಜಾ ಪಾರ್ಟಿ ರೈತಪರ್ವ ತಾ.ಅಧ್ಯಕ್ಷ ಚೆಲುವರಾಜು ಮನವಿ ಮಾಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಹುಣಸೂರು‌ ನಗರಸಭಾ ಆಯುಕ್ತರಿಗೆ ಚೆಲುವರಾಜು ಪತ್ರ ಬರೆದಿದ್ದಾರೆ.
ಹುಣಸೂರು ನಗರದ ಮುನೇಶ್ವರ ಕಾವಲ್ ಮೈದಾನದಲ್ಲಿ ವಿ.ಐ.ಪಿ. ರಸ್ತೆ ನಿರ್ಮಾಣ ಮಾಡಲು ಟೆಂಡರ್ ಆಗಿರುವುದು ಸರಿಯಷ್ಟೆ ಆದರೆ ನಗರಸಭಾ ಮೈದಾನದಲ್ಲಿ ವಿ.ಐ.ಪಿ. ರಸ್ತೆ ಮಾಡುವಂತಿಲ್ಲ, ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಕ್ರೀಡಾ ಮತ್ತಿತರ ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸಲು ಮೀಸಲಾಗಿರುವ ಈ ಆಟದ ಮೈದಾನದಲ್ಲಿ ವಿ.ಐ.ಪಿ ರಸ್ತೆ ನಿರ್ಮಾಣ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಕಾಮಗಾರಿಗಳನ್ನು ಕೈಗೆತ್ತಿಕೊಂಡು ಬಿಲ್ ಮಾಡಿಸುವುದು ನಗರಸಭಾ ಅಧಿಕಾರಿಗಳ ದುರುದ್ದೇಶವಾಗಿದೆ, ನಗರಾದ್ಯಂತ ಗುಂಡಿ ಬಿದ್ದಿರುವ ರಸ್ತೆಗಳನ್ನು ಮುಚ್ಚಿಸದೇ ಇರುವುದರಿಂದ ಹುಣಸೂರಿನ ಜನತೆ ಪ್ರಾಣ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಸ್ಥಿತಿ ಇದೆ.

ಇದನ್ನು ಸರಿಪಡಿಸಲು ಮೊದಲ ಆದ್ಯತೆ ನೀಡಬೇಕಾದ ನಗರಸಭೆ ಅಧಿಕಾರಿಗಳು ಅನಾವಶ್ಯಕವಾಗಿ ಮುನೇಶ್ವರ ಕಾವಲ್ ಆಟದ ಮೈದಾನದಲ್ಲಿ ವಿ.ಐ.ಪಿ. ರಸ್ತೆ ಮಾಡಲು ಹೊರಟಿರುವುದು ಸರಿಯಲ್ಲ.
ನಗರಸಭಾ ಮೈದಾನವನ್ನು ಆಟದ ಮೈದಾನವಾಗಿ ಅಭಿವೃದ್ಧಿಪಡಿಸಬೇಕಾದ ಅಧಿಕಾರಿಗಳು ವಿ.ಐ.ಪಿ. ರಸ್ತೆ ಮಾಡಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ.
ಆದ್ದರಿಂದ ಕೂಡಲೇ ವಿ.ಐ.ಪಿ. ರಸ್ತೆಗೆ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆ ಆದೇಶದ ಕಾಪಿ, ಕಾಮಗಾರಿಗಾಗಿ ಮಾಡಲಾಗಿರುವ ಅಗ್ರಿಮೆಂಟ್ ಪ್ರತಿ ಹಾಗೂ ಕಾಮಗಾರಿಯ ಅಂದಾಜು ಪಟ್ಟಿಯ ಸಂಪೂರ್ಣ ಮಾಹಿತಿ ದಾಖಲೆಗಳನ್ನು ನೀಡಬೇಕೆಂದು ಚೆಲುವರಾಜು ಕೋರಿದ್ದಾರೆ.

ಮಾಹಿತಿಗಳನ್ನು ಕೊಡಲು ತಪ್ಪಿದರೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಟೆಂಡರ್ ಪಡೆದಿರುವ ಗುತ್ತಿಗೆದಾರನಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಯಾವುದೇ ಬಿಲ್ ಪಾಸ್ ಮಾಡಬಾರದು ಎಂದು ಪರಿಸರ ಇಂಜಿನಿಯರ್ ಗೂ ಅವರು ಮನವಿ ಮಾಡಿದ್ದಾರೆ.

ಈ ಕಾಮಗಾರಿಯಲ್ಲಿ ಜಲ್ಲಿ ಹಾಕದೆ ಕಾಂಕ್ರಿಟ್ ಹಾಕುತ್ತಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಿಂದ ಕೂಡಿದೆ. ಇಡೀ ಹುಣಸೂರಿನ ಜನ ವಿರೋಧಿಸಿದ್ದಾರೆ, ಇದನ್ನು ವಿಚಾರಿಸಲು ಹೋದ ನಮ್ಮ ಮೇಲೆಯೇ ಗುತ್ತಿಗೆದಾರ ಬೆದರಿಕೆ ಹಾಕಿ ತಳ್ಳಾಡಿದ್ದಾರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು
ಚೆಲುವರಾಜು ತಿಳಿಸಿದ್ದಾರೆ

ಮುನೇಶ್ವರ ಕಾವಲ್ ಮೈದಾನದಲ್ಲಿ ವಿ.ಐ.ಪಿ ರಸ್ತೆ:ಚೆಲುವರಾಜು ವಿರೋಧ Read More

ರಾ. ಹೆದ್ದಾರಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ಸಿದ್ಧ: ಮಂಜುನಾಥ್

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಬೆಂಗಳೂರು-ದಿಂಡಿಗಲ್ (ಕೊಳ್ಳೇಗಾಲ) ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಲು ಡಿಪಿಆರ್ ಸಿದ್ದವಾಗಿದೆ. ಅಂಡರ್ ಪಾಸ್ ಕಾಮಗಾರಿ ಕೂಡಾ ಡಿಪಿಆರ್‌ನಲ್ಲಿ ಸೇರಿದೆ
ಎಂದು ‌ಹನೂರು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಮೇಲ್ಸೇತುವೆ ಕಾರ್ಯವನ್ನು ಡಿಪಿಆರ್‌ನಲ್ಲಿ ಸೇರಿಸಿಕೊಳ್ಳುವಂತೆ ಸಲಹೆ ಮಾಡಿದ್ದೇನೆ, ನಾಲ್ಕು ಜಂಕ್ಷನ್ ಗಳಿದ್ದು ಸತ್ತೇಗಾಲ ಜಂಕ್ಷನ್ ಕೊಳ್ಳೇಗಾಲದಿಂದ ಬರುವ ಸತ್ತೇಗಾಲ ಪ್ರವೇಶದ್ವಾರ ಹೆದ್ದಾರಿಯ ಬೈಪಾಸ್ ತಿರುವಿನಿಂದ ಉಗನಿಯ ರಸ್ತೆವರೆಗೆ ಫ್ಲೈ ಓವರ್ ಆಗಿ ಅಲ್ಲಿ 2 ಅಂಡರ್ ಪಾಸ್ ಆದಾಗ ಸಮಸ್ಯೆ ಬಗೆಹರಿದು ಅಪಘಾತಗಳಾಗುವುದು ತಪ್ಪಲಿದೆ ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಜೊತೆ ತಾಲ್ಲೂಕಿನ ನರೀಪುರ ಹಾಗೂ ಸತ್ತೇಗಾಲದ ಬಳಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿ ಶಾಸಕರು ಮಾತನಾಡಿದರು.

ಈ ವೇಳೆ ಸತ್ತೇಗಾಲ ಗ್ರಾಮಸ್ಥರು ನಾವು ಜೂನ್ ತಿಂಗಳಲ್ಲಿ ಶಾಸಕರು, ಜಿಲ್ಲಾಧಿ ಕಾರಿಗಳು ಹಾಗೂ ಎನ್‌ಹೆಚ್ ಅಧಿಕಾರಿಗಳಿಗೆ ಸತ್ತೇಗಾಲ ರಸ್ತೆಯಲ್ಲಿ ಹಿಂದೆ ಅಪಘಾತಗೊಂಡು ಹತ್ತಾರು ಮಂದಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಇಲ್ಲಿಯವರೆಗೂ ಎರಡು ಕಡೆ ಹಂಪ್ಸ್ ಬಿಟ್ಟರೆ ಯಾವುದೇ ಸಮಸ್ಯೆ ಬಗೆ ಹರಿದಿಲ್ಲ. ನಾವು ಹೆದ್ದಾರಿಗೆ ಭೂಮಿ ಕೊಟ್ಟಿದ್ದೇವೆ, ಆದರೆ ಇಂದು ನಮ್ಮ ಜಮೀನಿಗೆ ನಾವು ಇಳಿಯಲು ಆಗುತ್ತಿಲ್ಲ, ಸಮಸ್ಯೆ ಬಗೆ ಹರಿಯುವವರೆಗೂ ನಾವು ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳಬೇಕೆಂದು ಆಗ್ರಹಿಸಿದರು.

ಆಗ ಶಾಸಕರು, ತಕ್ಷಣಕ್ಕೆ ಮೇಲ್ಲೇತುವೆ ನಿರ್ಮಿಸಲು ಸಾಧ್ಯವಿಲ್ಲ. ಜಿಲ್ಲಾಧಿಕಾರಿಗಳು ಡಿಪಿಆರ್ ತಯಾರು ಮಾಡಿ ಸರ್ಕಾರದ ಅನುಮೋದನೆ ಪಡೆಯಬೇಕಾಗಿದೆ. ಕನಿಷ್ಠ ಆರು ತಿಂಗಳಾದರೂ ಕಾಲಾವಕಾಶ ಬೇಕು. ಅಲ್ಲಿಯವರೆಗೆ ಸುರಕ್ಷಿತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಶಾಸಕ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಎನ್‌,ಹೆಚ್ ಅಧಿಕಾರಿಗಳಿಗೆ ನಿಮಗೆ ನಾವು ಇದಕ್ಕಿಂತ ಹೆಚ್ಚು ಸಹಾಯ ಮಾಡಲು ಆಗುವುದಿಲ್ಲ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಸಮಸ್ಯೆ ಬಗ್ಗೆ ಹರಿಸಿ ಶಾಶ್ವತ ಪರಿಹಾರಕ್ಕಾಗಿ ಹೆದ್ದಾರಿಗೆ ಮೇಲ್ಲೇತುವೆ ನಿರ್ಮಿಸಬೇಕು, ಗ್ರಾಮಕ್ಕೆ ಸಂಪರ್ಕ ಕಲಿಸಲು ಅಂಡರ್ ಪಾಸ್ ರಸ್ತೆ ಕಲ್ಪಿಸಬೇಕೆಂದು ಸೂಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ  ಎಂ.ಆರ್.ಮಂಜುನಾಥ್ ಅವರು ಈ ಹೆದ್ದಾರಿ 2012-13ರಲ್ಲಿ ವಿನ್ಯಾಸವಾಗಿ ಕಾಮಗಾರಿ ಪ್ರಾರಂಭಿಸಿ ಅರ್ಧಕ್ಕೆ ಬಿಟ್ಟು ಹೋಗಿದ್ದರಿಂದ ಇಷ್ಟೆಲ್ಲ ಸಮಸ್ಯೆ ಅವಘಡಕ್ಕೆ ಕಾರಣವಾಗಿದೆ ಕಳೆದ ಹತ್ತು ವರ್ಷಗಳಿಂದ ದಟ್ಟಣೆ ವೇಗವಾಗಿ ಬೆಳೆಯುತ್ತಿರುವುದರಿಂದ ನಾಲ್ಕು ಪಥದ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ವಿಸ್ತೃತ ವರದಿ ಸಿದ್ಧವಾಗುತ್ತಿದೆ ಎಲ್ಲಾ ಘಟನೆಗಳಾಗಿರುವು ದರಿಂದ ಸೂಕ್ಷ್ಮವಾಗಿ ಗಮನಿಸಿ ಈ ”ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಲು ಡಿಪಿಆರ್ ಸಿದ್ದವಾಗಿದೆ, ನಾಲ್ಕು ಜಂಕ್ಷನ್ ಗಳಿದ್ದು ಸತ್ತೇಗಾಲ ಜಂಕ್ಷನ್ ಕೊಳ್ಳೇಗಾಲದಿಂದ ಬರುವ ಸತ್ತೇಗಾಲ ಪ್ರವೇಶದ್ವಾರ ಹೆದ್ದಾರಿಯ ಬೈಪಾಸ್ ತಿರುವಿನಿಂದ ಉಗನಿಯ ರಸ್ತೆವರೆಗೆ ಫ್ಲೈ ಓವರ್ ಆಗಿ ಅಲ್ಲಿ 2 ಅಂಡರ್ ಪಾಸ್ (ಕೆಳಸೇತುವೆ) ಆದಾಗ ಈ ಸಮಸ್ಯೆ   ಬಗೆಹರಿದು ಅಪಘಾತಗಳಾಗುವುದು ತಪ್ಪಲಿದೆ. ಹಾಗೆಯೇ ಉಪ್ಪಾರರ ಬೀದಿಯ ರಸ್ತೆ, ಅವರು ಈ ಅಂಡರ್ ಪಾಸ್ ನಲ್ಲೇ ಓಡಾಡಿಕೊಂಡರೆ ಸಮಸ್ಯೆ ಬರುವುದಿಲ್ಲ ಆಗ ಯಾವುದೇ ಅಪಘಾತಗಳು ಸಂಭವಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

10 ದಿನದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದ್ದೇವೆ. ಏನಾಗಬೇಕು ಎಂಬುದನ್ನು ಲಿಸ್ಟ್ ಮಾಡಿ ಸ್ಪೀಡ್ ಬ್ರೇಕರ್ ಹಾಕಿದ್ದಾರೆ, ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯ ಬಾಕಿ ಇದ್ದು ಅದನ್ನು ಮಾಡಿಕೊಡುವಂತೆ ಒತ್ತಾಯ ಮಾಡಿದ್ದೇನೆ. ಬಾಕಿ ಇರುವುದನ್ನು ಮುಗಿಸಬೇಕು ಎಂದು ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಮಾಡುತ್ತಾರೆ ಮಾಡದೇ ಹೋದರೆ ಇದೇ 14ರಂದು ಡಿಸಿ ವರ್ಚುಯಲ್ ಸಭೆ ತೆಗೆದುಕೊಳ್ಳಲು ಸೂಚಿಸಿದ್ದೇನೆ ಅಲ್ಲಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಎಂದು ಮಂಜುನಾಥ್ ತಿಳಿಸಿದರು.

ಈ ಸಂದರ್ಭದಲ್ಲಿ ಕೊಳ್ಳೇಗಾಲ ಉಪವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ,ತಹಸೀಲ್ದಾರ್ ಬಸವರಾಜು, ಎನ್‌.ಹೆಚ್ ಅಧಿಕಾರಿಗಳಾದ ಚಾರುಲತಾ ಜೈನ್, ವಿಶ್ವ, ತಾಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸೆಸ್ಕ್ ಎಇಇ ರಾಜು, ಲೋಕೋಪಯೋಗಿ ಎಇಇ ಪುರುಷೋತ್ತಮ್, ನೀರಾವರಿ ಇಲಾಖೆಯ  ಎಇಇ ರಾಮಕೃಷ್ಣ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ರಾ. ಹೆದ್ದಾರಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ಸಿದ್ಧ: ಮಂಜುನಾಥ್ Read More

ಡಿ.7 ರಂದು ಸಾಹಸಸಿಂಹ ನೆನಪಿನಲ್ಲಿ ವಿಷ್ಣು ಸಂಭ್ರಮ- ಚಿತ್ರಗೀತೆಗಳ ಕಾರ್ಯಕ್ರಮ

ಮೈಸೂರು: ಕನ್ನಡಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ನೆನಪಿನಲ್ಲಿ ‘ವಿಷ್ಣು ಸಂಭ್ರಮ’ ಮಧುರ ಸಾಹಿತ್ಯದ ರಸದೌತಣ ಗೀತೆಗಳ ಗಾಯನ ಕಾರ್ಯಕ್ರಮವನ್ನ ಗಾನ ಸಂಗಮ ಕಲಾತಂಡದ ವತಿಯಿಂದ ಡಿ. 7ರಂದು ಭಾನುವಾರ ಬೆಳಗ್ಗೆ 9ರಿಂದ ಸಂಜೆ 6ರವರಗೆ ಉದ್ಬೂರು ಗೇಟ್ ಬಳಿಯಿರುವ ವಿಷ್ಣು ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದೆ.

ವಿಷ್ಣು ಸಂಭ್ರಮ ಕಾರ್ಯಕ್ರಮದ ಮಾಹಿತಿ ಪೋಸ್ಟರ್ ಅನ್ನು ರಂಗಭೂಮಿ ಕಲಾವಿದ ಮೆಲ್ಲಹಳ್ಳಿ ರಾಜೇಶ್ ಸಿ ಗೌಡ ಅವರು ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ಬಿಡುಗಡೆ ಮಾಡಿದರು.

ವಿಷ್ಣು ಸಂಭ್ರಮ ಆಯೋಜಕರು ಕಲಾವಿದರುಗಳಾದ ಮಲ್ಲಿಕಾರ್ಜುನ್ ಮತ್ತು ಅನಿತಾ ನೇತೃತ್ವದಲ್ಲಿ ಪ್ರಕಾಶ್, ಮೋಹನ್ ಕುಮಾರ್, ಕೃಷ್ಣ, ಅಶೋಕ್ ಕುಮಾರ್, ಸಿದ್ದಪ್ಪಾಜಿ ಸೇರಿದಂತೆ 25ಕ್ಕೂ ಹೆಚ್ಚು ಕಲಾವಿದರು ಸಾಹಾಸಿಂಹ ವಿಷಗಣು ಗೀತೆಗಳನ್ನ ಹಾಡಲಿದ್ದಾರೆ.

ಈ ವೇಳೆ ಮೆಲ್ಲಹಳ್ಳಿ ರಾಜೇಶ್ ಸಿ ಗೌಡ ಅವರು ಮಾತನಾಡಿ, ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳು ವಿಷ್ಣುಸಂಭ್ರಮದ ಮೂಲಕ ಬೆಳಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ವಿಷ್ಣು ಸಂಭ್ರಮ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಅವರು ಉದ್ಘಾಟಿಸಲಿದ್ದು, ಮೆಲ್ಲಹಳ್ಳಿ ರಾಜೇಶ್ ಸಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜನಾರ್ಧನ್, ನಗರಪಾಲಿಕೆ ಮಾಜಿ ಸದಸ್ಯ ರಘುರಾಜೇ ಅರಸ್, ಕೆ.ವಿ ಮಲ್ಲೇಶ್, ಮಾರ್ಕೆಟ್ ಶ್ರೀನಿವಾಸ್, ಕರವೇ ಅಧ್ಯಕ್ಷ ಲಿಂಗರಾಜು, ಪ್ರಕಾಶ್, ನಿರೂಪಕ ಅಜಯ್ ಶಾಸ್ತ್ರಿ, ಒಕ್ಕಲಿಗರ ಸಂಘದ ನಿರ್ದೇಶಕ ಗುರುರಾಜ್, ರಂಗಸ್ವಾಮಿ ಪಾಪು, ಮಹೇಂದ್ರ ಕಾಗಿನೆಲೆ, ಪ್ರದೀಪ್, ರಾಕೇಶ್ ಕುಮಾರ್, ಜಯಲಕ್ಷ್ಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಷ್ಣು ಸಂಭ್ರಮ ಪೋಸ್ಟರ್ ಬಿಡುಗಡೆ ವೇಳೆ ಮೆಲ್ಲಹಳ್ಳಿ ರಾಜೇಶ್ ಸಿ ಗೌಡ, ಅಯೋಜಕರಾದ ಮಲ್ಲಿಕಾರ್ಜುನ್ ಮತ್ತು ಅನಿತಾ, ಪ್ರಕಾಶ್, ಶಿವಲಿಂಗಯ್ಯ, ನಿರೂಪಕ ಅಜಯ್ ಶಾಸ್ತ್ರಿ, ಅಶೋಕ್ ಕೃಷ್ಣ, ಮೋಹನ್ ಮತ್ತಿತರರು ಹಾಜರಿದ್ದರು.

ಡಿ.7 ರಂದು ಸಾಹಸಸಿಂಹ ನೆನಪಿನಲ್ಲಿ ವಿಷ್ಣು ಸಂಭ್ರಮ- ಚಿತ್ರಗೀತೆಗಳ ಕಾರ್ಯಕ್ರಮ Read More

ದರ್ಶನ್ ಅಭಿಮಾನಿಗಳಿಂದ ವೃದ್ಧಾಶ್ರಮದಲ್ಲಿ ಸೇವಾ ಕಾರ್ಯ

ಮೈಸೂರು: ದರ್ಶನ್ ಅಭಿಮಾನಿಗಳು ವೃದ್ಧಾಶ್ರಮದಲ್ಲಿ ಸೇವಾ ಕಾರ್ಯ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ ‘ಡೆವಿಲ್’ ಡಿಸೆಂಬರ್ 11ರಿಂದ ರಾಜ್ಯಾದ್ಯಂತ ತೆರೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ದರ್ಶನ್ ಅಭಿಮಾನಿಗಳ ಸಂಘದವರು ಹೂಟಗಳ್ಳಿಯಲ್ಲಿರುವ ಪಿ.ಜಿ.ಆರ್.ಎಸ್.ಎಸ್. ಆಶ್ರಯ ಕೇಂದ್ರ ಮತ್ತು ವೃದ್ಧರ ಬೃಂದಾವನನಲ್ಲಿ ವೃದ್ಧ ನಾಗರಿಕರಿಗೆ ಹೊದಿಕೆ ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸುವ ಮೂಲಕ ಹೃದಯಸ್ಪರ್ಶಿ ಸೇವಾ ಕಾರ್ಯ ಮಾಡಿದರು.
ಚಿತ್ರ ಯಶಸ್ವಿಯಾಗಲಿ, ತಂಡದ ಮೇಲೆ ಹಿರಿಯ ನಾಗರಿಕರ ಆಶೀರ್ವಾದ ಇರಲಿ ಎಂಬ ಸಂಕಲ್ಪದೊಂದಿಗೆ ಈ ಸೇವಾ ಚಟುವಟಿಕೆಯನ್ನು ಆಯೋಜಿಸಿದ್ದರು.
ಹಿರಿಯ ನಾಗರಿಕರು ಆಶೀರ್ವಾದ ನೀಡಿ,
ಚಿತ್ರ ಹಿಟ್ ಆಗಲಿ, ದರ್ಶನ್ ಉತ್ತಮ ಗೆಲುವು ಕಾಣಲಿ ಎಂದು ಹಾರೈಸಿದರು.
ಬಿಜೆಪಿ ಮುಖಂಡರಾದ ಕೇಬಲ್ ಮಹೇಶ್,ಕಡಕೋಳ ಜಗದೀಶ್,ಬೈರತಿ ಲಿಂಗರಾಜು,ರಕ್ತದಾನಿ ಮಂಜು,ಸಹನಗೌಡ,ಹರೀಶ್ ನಾಯ್ಡು,ಎಸ್ ಎನ್ ರಾಜೇಶ್,ರವಿಚಂದ್ರ,ರಾಕೇಶ್ ಸೇರಿದಂತೆ ಅನೇಕರು ಹಾಜರಿದ್ದರು.

ದರ್ಶನ್ ಅಭಿಮಾನಿಗಳಿಂದ ವೃದ್ಧಾಶ್ರಮದಲ್ಲಿ ಸೇವಾ ಕಾರ್ಯ Read More

ಮಧ್ಯರಂಗ ದೇವಾಲಯ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದ ಡಿಸಿ,ಶಾಸಕರು

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಶಿವನಸಮುದ್ರದ ಶ್ರೀ ರಂಗನಾಯಕಿ ಸಮೇತ ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ಈ ತಿಂಗಳೇ‌ ಪೂರ್ಣಗೊಳಿಸುವಂತೆ‌ ಹನೂರು ಶಾಸಕ ಎಂ.ಆರ್.ಮಂಜುನಾಥ್ ಖಡಕ್ ಸೂಚನೆ ನೀಡಿದರು.
2026 ರ‌ ಜನವರಿ 25 ಅಥವಾ ಫೆಬ್ರವರಿ ಪ್ರಾರಂಭದಲ್ಲಿ ಜಗನ್ಮೋಹನ ರಂಗನಾಥ ಸ್ವಾಮಿ (ಮಧ್ಯರಂಗ) ದೇವಾಲಯವನ್ನು ಲೋಕಾರ್ಪಣೆ ಮಾಡಿ ಜನರ ದರ್ಶನಕ್ಕೆ ನೀಡಬೇಕಿದೆ ಹಾಗಾಗಿ ನವೆಂಬರ್ ಒಳಗೇನೆ ಕಾಮಗಾರಿ ಪೂರ್ಣಗೊಳಿಸುವಂತೆ 
ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಜೊತೆ ತಾಲ್ಲೂಕಿನ ಪ್ರಸಿದ್ಧ ಶಿವನಸಮುದ್ರದ ಶ್ರೀ ರಂಗನಾಯಕಿ ಸಮೇತ ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಕಳೆದ ಐದಾರು ವರ್ಷಗಳಿಂದ ಪ್ರಾಚ್ಯವಸ್ತು ಇಲಾಖೆ ವತಿಯಿಂದ ಜಗನ್ಮೋಹನ ರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದಾರ ಕಾಮಗಾರಿ ಹಾಗೂ ಆಂಧ್ರ ಮೂಲದ ದಾನಿಗಳಿಂದ ರಂಗನಾಯಕಿ ಅಮ್ಮನವರ ದೇವಾಲಯಗಳ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಇತ್ತೀಚೆಗೆ ವೇಗ ಪಡೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೊಡನೆ ಭೇಟಿ ನೀಡಿ ಬಳಿಕ ಅಧಿಕಾರಿಗಳಿಗೆ ಕೆಲ ಸಲಹೆ ನೀಡಿದರು.
ದೇವಾಲಯದ ಸುತ್ತುಗೋಡೆ ದುರಸ್ತಿ, ರಂಗನಾಥ ಸ್ವಾಮಿ ದೇವಾಲಯದ ಒಳಗಡೆ ಇರುವ ವೀರ ಪಾಲಕರ ಗುಡಿಗಳಿಗೆ ಬಾಗಿಲುಗಳ ಅಳವಡಿಕೆ ಗರ್ಭಗುಡಿ ಚಪ್ಪರ ನಿರ್ಮಾಣ ದರ್ಶನಕ್ಕೆ ನಿಲ್ಲುವ ಭಕ್ತರ ಕ್ಯೂ ಲೈನ್ ನಿರ್ಮಾಣಕ್ಕೆ ಸ್ಟೇನ್ಲೆಸ್ ಸ್ಟೀಲ್ ಅಳವಡಿಕೆ, ನೆಲಹಾಸು, ಕಾಮಗಾರಿಗಳು ಮುಕ್ತಾಯ ಹಂತ ತಲುಪಿದ್ದು ಕಾಮಗಾರಿಗಳು ವೇಗ ಪಡೆದು ಕೊಂಡಿದೆ.
ರಾಜಗೋಪುರ, ವಿಮಾನ ಗೋಪುರ ಹಾಗೂ ಯೋಗ ಶಾಲೆಗೆ ಬಣ್ಣ ಬಳಿಸುವ ವಿಚಾರದ ಬಗ್ಗೆ ಚರ್ಚೆ ಆಯಿತು. ಮಲೆ ಮಹದೇಶ್ವರ ಬೆಟ್ಟದ ವಿಮಾನ ಗೋಪುರ ಹಾಗೂ ರಾಜಗೋಪುರಗಳಿಗೆ ಬಣ್ಣ ಬಳಿದವರು ಚೆನ್ನಾಗಿ ಮಾಡಿದ್ದು, ಅವರಿಂದಲೇ ಇಲ್ಲಿಗೂ ಬಣ್ಣ ಬಳಿಸುವುದು ಎಂದು ತೀರ್ಮಾನಿಸಲಾಯಿತು.
ಅದಕ್ಕಾಗಿ ಮ.ಮ. ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ನಿಮ್ಮ ದೇವಾಲಯಕ್ಕೆ ಬಣ್ಣ ಬಳಿದವರು ಯಾರು ಅವರಿಂದಲೇ ಇಲ್ಲಿಗೆ ಬಣ್ಣ ಬಯಸುವ ಜವಾಬ್ದಾರಿ ನಿಮ್ಮದು ಎಂದು ಶಾಸಕರು ಸೂಚಿಸಿದರು.
ಮುಖ್ಯ ದ್ವಾರಗಳ ಬಾಗಿಲುಗಳು ಚೆನ್ನಾಗಿ ಮೂಡಿಬಂದಿದೆ, ದೇವಾಲಯದಲ್ಲಿ ಅಳವಡಿಸಲಾಗಿರುವ ಕಲ್ಲುಗಳ ಬಣ್ಣ ಮಾಸಿದ್ದು ಕಾಮಗಾರಿಗೆ ಆಧುನಿಕ ಸ್ಪರ್ಶ ನೀಡಬೇಕು ಎಲ್ಲಾ ಕಲ್ಲುಗಳಿಗೂ ಸ್ಯಾನ್ ಬ್ಲಾಸ್ಟ್ ಮಾಡಿಸುವಂತೆ ತಹಸೀಲ್ದಾರ್ ಬಸವರಾಜು ರವರಿಗೆ ಸೂಚಿಸಿದರು
ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿಸಿ ಯಾವುದೇ ಕಾರಣಕ್ಕೂ ಕಳಪೆ ಮಾಡಿಸಬೇಡಿ ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪನಾಗ್ ಸೂಚಿಸಿದಾಗ ಧ್ವನಿಗೂಡಿಸಿದ ಶಾಸಕರು ಕಳಪೆ ಕಾಮಗಾರಿ ಮಾಡಿಸಿದ ವರನ್ನು ಮುಲಾಜಿಲ್ಲದೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಎಲ್ಲಾ ಕಾಮಗಾರಿಗಳು 2026ರ ಜನವರಿ 4ಕ್ಕೆ ಮುಕ್ತಾಯಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಇದೇ ವೇಳೆ ದೇವಾಲಯದ ಮುಂಭಾಗದ ರಾಜಭೀದಿಯಲ್ಲಿ ನಿರ್ಮಾಣವಾಗುತ್ತಿರುವ ಯಾತ್ರಿ ನಿವಾಸ್ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಕಟ್ಟಡಕ್ಕೆ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲದ್ದನ್ನು ಮನಗಂಡ ಜಿಲ್ಲಾಧಿಕಾರಿ ಹಾಗೂ ಶಾಸಕರು ಇಲ್ಲಿ ಸೌಲಭ್ಯ ಕಲ್ಪಿಸಲು ಪ್ರವಾಸೋದ್ಯಮ ಇಲಾಖೆ ಅನುದಾನವನ್ನು ನೀಡಲಾಗುವುದು ಅದಕ್ಕಾಗಿ ಏಜೆನ್ಸಿ ಗುರುತಿಸುವಂತೆ ಶಾಸಕರಿಗೆ ಜಿಲ್ಲಾಧಿಕಾರಿಗಳು ಹೇಳಿದರು.
ಹಳೆ ವೈಭವ ಮರುಕಳಿಸುವಂತಹ ವಾತಾವರಣ ನಿರ್ಮಾಣ ಮಾಡಲು ದೇವಸ್ಥಾನದ ಮುಂಭಾಗ ಇರುವ ರಾಜಭೀದಿಯನ್ನು ಹನ್ನೆರಡು ಕಾಲು ಮಂಟಪದವರೆಗೂ‌ ಪುನರುಜ್ಜೀವನ
ಗೊಳಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ.
ಈ ಸಂದರ್ಭದಲ್ಲಿ ಕೊಳ್ಳೇಗಾಲ ಉಪವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ,ತಹಸೀಲ್ದಾರ್ ಬಸವರಾಜು, ಇಒ ಗುರುಶಾಂತಪ್ಪ, ಲೋಕೋಪಯೋಗಿ ಎಇಇ ಪುರುಷೋತ್ತಮ್, ನೀರಾವರಿ ಇಲಾಖೆಯ  ಎಇಇ ರಾಮಕೃಷ್ಣ,ನಿರ್ಮಿತಿ ಕೇಂದ್ರದ ಇಇ ರವಿಕುಮಾರ್, ಧಾರ್ಮಿಕ ದತ್ತಿ ಇಲಾಖೆಯ ಸುರೇಶ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಮಧ್ಯರಂಗ ದೇವಾಲಯ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದ ಡಿಸಿ,ಶಾಸಕರು Read More