ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮುರ್ಮು

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿದ್ದು,ಇತಿಹಾಸ‌ ಬರೆದಿದ್ದಾರೆ.

ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಮೊದಲ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ.

ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.

ಶಬರಿಮಲೆಗೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮುರ್ಮು Read More

ಮೈಸೂರಿಂದ ಜೈಪುರಕ್ಕೆ ಹೆಚ್ಚುವರಿ ರೈಲು:ಯದುವೀರ್ ಮನವಿಗೆ‌ ಇಲಾಖೆ ಸ್ಪಂದನೆ

ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ರೈಲ್ವೆ ಇಲಾಖೆ
ಸ್ಪಂದಿಸಿದೆ

ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ಸಂಸದ ಯದುವೀರ್, ಮೈಸೂರಿನಿಂದ ರಾಜಸ್ತಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ರಾಜಸ್ತಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಯದುವೀರ್‌ ಒಡೆಯರ್‌ ಮನವಿ ಮಾಡಿದ್ದಾರೆ.

ಮೈಸೂರಿಂದ ಜೈಪುರಕ್ಕೆ ಹೆಚ್ಚುವರಿ ರೈಲು:ಯದುವೀರ್ ಮನವಿಗೆ‌ ಇಲಾಖೆ ಸ್ಪಂದನೆ Read More

ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ

ನವದೆಹಲಿ: ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ಹೈಕೋರ್ಟ್​ ಮರುಮತ ಎಣಿಕೆಗೆ ಸೂಚನೆ ನೀಡಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿರುವ ಕೆಲವು ತಪ್ಪುಗಳನ್ನು ಗಮನಿಸಿ, ರಾಜ್ಯ ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿತ್ತು.

ಆದರೆ, ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಲಾಗಿತ್ತು, ಇದೀಗ ಸುಪ್ರೀಂ ಕೋರ್ಟ್ ಕೂಡ ರಾಜ್ಯ ಹೈಕೋರ್ಟ್​ ಆದೇಶವನ್ನು ಎತ್ತಿಹಿಡಿದಿದೆ. ಮರು ಮತ ಎಣಿಕೆ ಬಗ್ಗೆ ಕಠಿಣ ಸೂಚನೆ ಹೊರಡಿಸಿದೆ.

ಶಾಸಕ ಕೆ.ವೈ‌ ನಂಜೇಗೌಡ ಮತ್ತು ಮಾಜಿ ಶಾಸಕ ಮಂಜುನಾಥಗೌಡ ಮಧ್ಯೆ ಚುನಾವಣೆ ಪ್ರಾರಂಭವಾದಾಗಿನಿಂದಲೂ ಇರಿಸುಮುರಿಸು ಇತ್ತು,ಫಲಿತಾಂಶ ಬಂದಾಗ ಕೇವಲ 248 ಮತಗಳಿಂದ ಗೆದ್ದಿರುವುದಕ್ಕೆ ಭಾರೀ ಆಕ್ಷೇಪಗಳು ಕೇಳಿಬಂದಿದ್ದವು. ಮರು ಮತಎಣಿಕೆ ಬಗ್ಗೆ ಭಾರೀ ಚರ್ಚೆ ನಡೆದಿತ್ತು, ಇದೀಗ ಸುಪ್ರೀಂ ಕೋರ್ಡ್​ ಕೂಡ ಇದನ್ನೇ ಹೇಳಿದೆ.

ಇಂದಿನಿಂದ ನಾಲ್ಕು ವಾರಗಳ ಒಳಗೆ ಮರು ಎಣಿಕೆ ನಡೆಸುವಂತೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಈ ನಿರ್ಧಾರವು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡರ ಭವಿಷ್ಯ ಅಡಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ, ಬಿಜೆಪಿಯ ಮಾಜಿ ಶಾಸಕ ಮಂಜುನಾಥಗೌಡ ಬಣ ಗೆಲುವಿನ ನಿರೀಕ್ಷೆಯಲ್ಲಿದೆ.

ಮಾಜಿ ಶಾಸಕರಾಗಿದ್ದ ಮಂಜುನಾಥ್ ಗೌಡರು, ಚುನಾವಣೆಯ ನಂತರ ಮೂರು ದಿನಗಳಲ್ಲಿ ರಾಜ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು,ಮತ ಎಣಿಕೆಯ ಸಮಯದಲ್ಲಿ ದಾಖಲೆಯ ದೋಷಗಳು, ತಪ್ಪು ಎಣಿಕೆ, ಮತ್ತು ಅನಧಿಕೃತ ವ್ಯಕ್ತಿಗಳ ಪ್ರವೇಶ ಇದೆ ಎಂದು ಆರೋಪ ಮಾಡಿದ್ದರು.

ಜೊತೆಗೆ, ಎಣಿಕೆಯ ವೀಡಿಯೋ ದಾಖಲೆಗಳನ್ನು ಚುನಾವಣಾ ಅಧಿಕಾರಿಗಳು ಒದಗಿಸಲಾಗಲಿಲ್ಲ ಎಂದು ಆರೋಪಿಸಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ಪರಿಗಣಿಸಿ, ಚುನಾವಣೆಯನ್ನು ರದ್ದುಗೊಳಿಸಿ ಮರು ಎಣಿಕೆಗೆ ಆದೇಶಿಸಿತು. ಜೊತೆಗೆ, ನಂಜೇಗೌಡರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ, ನಾಲ್ಕು ವಾರಗಳ ತಡೆಯಾಜ್ಞೆ ನೀಡಿತು.

ಹೈಕೋರ್ಟ್‌ನ ನ್ಯಾಯಾಧೀಶ ಆರ್. ದೇವದಾಸ್ ಅವರ ನೇತೃತ್ವದ ತೀರ್ಪು ವಿಭಾಗವು, ಚುನಾವಣಾ ಸಂಬಂಧಿತ ಕಾನೂನುಗಳನ್ನು ಉಲ್ಲಂಘಿಸಲಾಗಿದೆ ಎಂದು ತೀರ್ಪು ನೀಡಿತು.

ಚುನಾವಣಾ ಆಯುಕ್ತರಿಗೆ ಮತಗಳನ್ನು ಮರು ಎಣಿಕೆ ಮಾಡಿ, ಹೊಸ ಫಲಿತಾಂಶವನ್ನು ಘೋಷಿಸುವಂತೆ ಸೂಚಿಸಿತು. ಆದರೆ, ನಂಜೇಗೌಡರ ವಾದವನ್ನು ಗಮನಿಸಿ, ಈ ಆದೇಶವನ್ನು 30 ದಿನಗಳ ಕಾಲ ನಿಲ್ಲಿಸಿತು. ಈ ಸಮಯದಲ್ಲಿ ನಂಜೇಗೌಡರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಅವಕಾಶ ನೀಡಿತು. ಇದರಿಂದ,ಅವರಿಗೆ ಶಾಸಕ ಸ್ಥಾನವು ತಾತ್ಕಾಲಿಕವಾಗಿ ಉಳಿಸಿಕೊಳ್ಳಲು ಸಾಧ್ಯವಾಗಿತ್ತು.

ಸುಪ್ರೀಂ ಕೋರ್ಟ್ ಇದೀಗ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇಂದಿನಿಂದ ನಾಲ್ಕು ವಾರಗಳ ಒಳಗೆ ಮರು ಮತ ಎಣಿಕೆ ನಡೆಸುವಂತೆ ಚುನಾವಣಾ ಆಯುಕ್ತರಿಗೆ ಸೂಚನೆ ನೀಡಿದೆ. ಜೊತೆಗೆ, ಹೈಕೋರ್ಟ್‌ನ ಅಸಿಂಧು ಆದೇಶದ ತಡೆಯಾಜ್ಞೆಯನ್ನು ಮುಂದುವರೆಸಿದೆ. ಮರು ಎಣಿಕೆಯ ನಂತರ ಮಾತ್ರ ಶಾಸಕ ಸ್ಥಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದೂ ಆದೇಶಿಸಿದೆ.

ಎಣಿಕೆಯ ವೀಡಿಯೋ ದಾಖಲೆಗಳ ಕೊರತೆಯಿಂದಾಗಿ ಉಂಟಾದ ಗೊಂದಲವನ್ನು ತಪ್ಪಿಸಲು, ಭವಿಷ್ಯದಲ್ಲಿ ಇಂತಹ ದೋಷಗಳನ್ನು ತಡೆಯುವಂತೆಯೂ ಸೂಚಿಸಿದೆ.

ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ Read More

ಮೀರಜ್ ಜಂಕ್ಷನ್-ಬೆಳಗಾವಿ ನಡುವೆಖಾಯಂ ರೈಲು:ಶೆಟ್ಟರ್

ಬೆಳಗಾವಿ: ಮಹಾರಾಷ್ಟ್ರದ ಮೀರಜ್ ಜಂಕ್ಷನ್ ಮತ್ತು ಬೆಳಗಾವಿ ನಡುವೆ ಸಂಚರಿಸುತ್ತಿದ್ದ ತಾತ್ಕಾಲಿಕ ರೈಲನ್ನು ಖಾಯಂಗೊಳಿಸಿದ್ದು ಜನತೆ ಇದರ ಉಪಯೋಗ ಪಡೆಯಬೇಕೆಂದು ಸಂಸದ ಜಗದೀಶ ಶೆಟ್ಟರ್ ಕರೆ ನೀಡಿದ್ದಾರೆ.

ಬೆಳಗಾವಿ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ – ಮಿರಜ್ ಬೆಳಗಾವಿ ನಡುವೆ ತಾತ್ಕಾಲಿಕವಾಗಿ ಸಂಚರಿಸುತ್ತಿದ್ದು ರೈಲು ಸೇವೆಯನ್ನು ಹುಬ್ಬಳ್ಳಿ ನೈರುತ್ಯ ರೇಲ್ವೆ ವಲಯವು ಇದೆ 15 ರಿಂದ ಖಾಯಂ ಆಗಿ ಸಂಚರಿಸುವಂತೆ ಸೇವೆಯನ್ನು ಒದಗಿಸಲಾಗಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಬೆಳಗಾವಿ – ಮಿರಜ್ – ಬೆಳಗಾವಿ ನಡುವೆ ಈ ರೈಲು ಬೆಳಗಾವಿ ( ರೈಲು ಸಂಖ್ಯೆ: 51461) ಯನ್ನು ಬೆಳಿಗ್ಗೆ 5.45ಕ್ಕೆ ಬಿಟ್ಟು ಮಿರಜನ್ನು ಬೆಳ್ಳಗ್ಗೆ 9 ಗಂಟೆಗೆ ತಲುಪಿ ಪುನಃ ಮಿರಜ್ ನಿಂದ ( ರೈಲು ಸಂಖ್ಯೆ: 51462 ) ಬೆಳಿಗ್ಗೆ 9.55ಕ್ಕೆ ಹೊರಟು ಮಧ್ಯಾಹ್ನ 1.10 ಕ್ಕೆ ಬೆಳಗಾವಿಯನ್ನು ತಲುಪಲಿದೆ.

ಅದರಂತೆ ಇದೆ ರೈಲು ಬೆಳಗಾವಿ ( ರೈಲು ಸಂಖ್ಯೆ: 51463) ಯನ್ನು ಮಧ್ಯಾಹ್ನ 13.30ಕ್ಕೆ ಬಿಟ್ಟು ಮಿರಜ ನ್ನು ಸಂಜೆ 16.30 ಕ್ಕೆ ತಲುಪಿ ಪುನಃ ಮಿರಜ್ ನಿಂದ ( ರೈಲು ಸಂಖ್ಯೆ: 51441) ಸಂಜೆ 19.10 ಕ್ಕೆ ಬಿಟ್ಟು ಬೆಳಗಾವಿಯನ್ನು ರಾತ್ರಿ 22.25 ಕ್ಕೆ ತಲುಪಲಿದೆ.

ಸಾರ್ವಜನಿಕರ ಬೇಡಿಕೆಯಂತೆ ಹಲವಾರು ಸಾರಿ ಕೇಂದ್ರ ರೇಲ್ವೆ ಸಚಿವರಲ್ಲಿಯೂ ಹಾಗೂ ನೈರುತ್ಯ ರೇಲ್ವೆ ವಲಯ ಅಧಿಕಾರಿಗಳಲ್ಲಿ ಪ್ರಸ್ತಾಪಿಸಿದ್ದರ ಹಿನ್ನಲೆಯಲ್ಲಿ ಈ ರೈಲು ಸೇವೆಯನ್ನು ಒದಗಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಮೀರಜ್ ಜಂಕ್ಷನ್-ಬೆಳಗಾವಿ ನಡುವೆಖಾಯಂ ರೈಲು:ಶೆಟ್ಟರ್ Read More

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ-6 ಮಂದಿ ದುರ್ಮರಣ

ಆಂಧ್ರಪ್ರದೇಶ: ಆಂದ್ರ ಪ್ರದೇಶದ ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ.

ರಾಯವರಂ ಮಂಡಲದ ಕೊಮಾರಿಪಲೇಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಲ್ಲಿ ಈ ಘಟನೆ ಸಂಭವಿಸಿದೆ.

ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌

ಪಟಾಕಿ ಉತ್ಪಾದನೆಯಲ್ಲಿ ಬಳಸುವ ಹೆಚ್ಚು ದಹಿಸುವ ರಾಸಾಯನಿಕಗಳಿಂದಾಗಿ ಬೆಂಕಿ ವೇಗವಾಗಿ ಹರಡಿದೆ.

ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.

ಪೊಲೀಸ್, ಕಂದಾಯ ಅಧಿಕಾರಿಗಳು, ತುರ್ತು ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ, ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸುವಂತೆ ಸೂಚಿಸಿದರು.

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ-6 ಮಂದಿ ದುರ್ಮರಣ Read More

ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ:18 ಮಂದಿ‌ ದುರ್ಮರಣ

ಹಿಮಾಚಲ ಪ್ರದೇಶ: ಹಿಮಾಚಲ‌ ಪ್ರದೇಶದ ಬಿಲಾಸ್ಪುರ್ ಜಿಲ್ಲೆಯ ಝಂಡುತಾ ಉಪವಿಭಾಗದ ಬಾಲುಘಾಟ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಖಾಸಗಿ ಬಸ್ ಮೇಲೆ ಬಂಡೆಗಳು ಉರುಳಿ ಹದಿನೆಂಟು ಮಂದಿ ಮೃತಪಟ್ಟಿದ್ದಾರೆ.

ಭೂಕುಸಿತದ ನಂತರ ಖಾಸಗಿ ಬಸ್ ಮೇಲೆ ಬಂಡೆಗಳು ಮತ್ತು ಮಣ್ಣಿನಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಕ್ಷಣಾ ಕಾರ್ಯ‌ ಭರದಿಂದ ಸಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲಾಡಳಿತ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ. ಸಂಪೂರ್ಣ ಯಂತ್ರೋಪಕರಣಗಳನ್ನು ನಿಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯ ರಾಜಧಾನಿ ಶಿಮ್ಲಾದಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ:18 ಮಂದಿ‌ ದುರ್ಮರಣ Read More

ಚೆನ್ನೈನ ವಿದ್ಯುತ್ ಸ್ಥಾವರ ಬಳಿ ನಿರ್ಮಾಣಹಂತದ ಕಟ್ಟಡ ಕುಸಿತ:9 ಮಂದಿ ಸಾ*ವು

ಚೆನ್ನೈ: ಚೆನ್ನೈ ಸಮೀಪದ ಎಣ್ಣೋರ್ ಉಷ್ಣ ವಿದ್ಯುತ್ ಸ್ಥಾವರ ಘಟಕದೊಳಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಹತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತ ಒಂಬತ್ತು ಮಂದಿ ಕಾರ್ಮಿಕರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಲವು ಕಾರ್ಮಿಕರು ಗಾಯಗೊಂಡಿದ್ದು ಸ್ಟಾನ್ಲೀ ಆಸ್ಪತ್ರೆಗೆ ಸಾಗಿಸಲಾಗಿದೆ.

ಎಣ್ಣಾರ್ ಥರ್ಮಲ್ ಪವರ್ ಸ್ಟೇಷನ್ ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಮೀಂಜೂರು ಬಳಿಯ ಊರನಂಪೆಡು ಗ್ರಾಮದಲ್ಲಿದೆ. ಈ ವಿದ್ಯುತ್ ಸ್ಥಾವರದ ನಾಲ್ಕನೇ ಹಂತದ ವಿಸ್ತರಣಾ ಕಾಮಗಾರಿ ಕೆಲವು ವರ್ಷಗಳಿಂದಲೂ ನಡೆಯುತ್ತಿದೆ. ಉತ್ತರ ಭಾರತ ಮೂಲದ ಬಹಳಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಇಂದು ಮಂಗಳವಾರ ಬಾಯ್ಲರ್ ವಿಭಾಗದಲ್ಲಿ ಬೃಹತ್ ಕಮಾನು ನಿರ್ಮಾಣ ಕಾರ್ಯದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ನಿರತರಾಗಿದ್ದರು. ಮುಂಗಾಗದಲ್ಲಿ ನಿರ್ಮಿಸಲಾಗಿದ್ದ ಸ್ಕಫೋಲ್ಡ್ ಕಳಚಿ ಬಿದ್ದು ಈ ಅವಘಡ ಸಂಭವಿಸಿದೆ.

ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ‌ ವ್ಯಕ್ತಪಡಿಸಿದ್ದಾರೆ.ಮೃತರ ಕುಟುಂಬಗಳಿಗೆ ತಲಾ‌ 2‌ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ಘೋಷಿಸಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡಿನಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು ಇಂದು ಕಟ್ಟಡ‌ ಕುಸಿತವಾಗಿದೆ

ಚೆನ್ನೈನ ವಿದ್ಯುತ್ ಸ್ಥಾವರ ಬಳಿ ನಿರ್ಮಾಣಹಂತದ ಕಟ್ಟಡ ಕುಸಿತ:9 ಮಂದಿ ಸಾ*ವು Read More

ಪ್ರೇಕ್ಷಕರ ಮನಸೂರೆಗೊಂಡ ಮುದ್ದು ಶ್ವಾನಗಳು

ಮೈಸೂರು: ದೇಶ, ವಿದೇಶದ ಮುದ್ದು ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಿಂದ ಹೆಜ್ಜೆ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸಿದವು.

ಶ್ವಾನಗಳ ಆಟ-ಪಾಠ, ಬುದ್ಧಿವಂತಿಕೆ, ಜಾಣ್ಮೆ, ಮುಗ್ಧತೆ, ತುಂಟಾಟ, ತಾಳ್ಮೆ ಹಾಗೂ ಅವುಗಳ ಪ್ರೀತಿಯನ್ನು ಪ್ರೇಕ್ಷಕರು ಕಣ್ತುಂಬಿಕೊಂಡರು.

ಪ್ರಾಣಿಪ್ರಿಯರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು,ಮುದ್ದಾದ ಶ್ವಾನಗಳನ್ನು ಕಂಡು ಪ್ರಾಣಿ ಪ್ರಿಯರು ಖುಷಿ ಪಟ್ಟರು.

ಕೆಲವು ಶ್ವಾನಗಳು ಪಿಂಕ್ ಮತ್ತು ಪರ್ಪಲ್ ಕಲರ್ ಬಟ್ಟೆ ಧರಿಸಿ ಪ್ರದರ್ಶನ ನೀಡುವುದರ ಮೂಲಕ ಹೆಚ್ಚು ಆಕರ್ಶಿಸಿದವು,ಅದರಲ್ಲೂ ಮಕ್ಕಳು ಚಪ್ಪಾಳೆ‌ ತಟ್ಟಿ ಸಂತೋಷ ಪಟ್ಟರು.

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ. ಕೆ ಮೈದಾನದಲ್ಲಿ ಭಾನುವಾರ ನಡೆದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಸಿಲುಕಿ, ಮುಧೋಳ ಹೌಂಡ್, ಸೈಬೀರಿಯನ್ ಹಸ್ಕಿ, ಗ್ರೇಟ್ ಡೆನ್, ಪೂಡ್ಲೀ, ಡಾಗೂ ಅರ್ಜೆಂಟೀನಾ, ರಾಜ ಪುಲಿಯಂ, ಪಿಟ್ ಬುಲ್, ಕಾಕರ್ ಸ್ಪ್ಯಾನಿಯಲ್, ಬಾಕ್ಸರ್, ಪಗ್, ಕೊಕ್ಕೊಪೋ, ಪ್ರೆಂಚ್ ಬುಲ್ ಡಾಗ್, ಓಲ್ಡ್ ಶೀಪ್ ಡಾಗ್, ಐರಿಷ್ ಸೆಟ್ಟರ್ ಬೀಗಲ್, ಡಚ್ ಶೆಪರ್ಡ್, ಜರ್ಮನ್ ಶೆಪರ್ಡ್, ಚೌ ಚೌ, ಗೋಲ್ಡನ್ ರಿಟ್ರೀವರ್, ಬಾರ್ಡರ್ ಕೋಲಿ, ಬರ್ಮೀಸ್ ಮೌಂಟೇನ್ ಡಾಗ್, ಲಾಸ್ ಅಪ್ಸೋ ಮತ್ತಿತರ ಶ್ವಾನಗಳು ಪ್ರದರ್ಶನ ನೀಡಿದವು.

ಮೈಸೂರಿನ ಡಾಗ್ ಸ್ಕ್ವಾಡ್ ಪೊಲೀಸ್ ಶ್ವಾನಗಳು ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಪ್ರೇಕ್ಷಕರನ್ನು ಗಮನ ಸೆಳೆದು ಚಾಪ್ಪಾಳೆ ಗಿಟ್ಟಿಸಿದವು.

ಕಳೆದ ಬಾರಿ ದಸರಾದಲ್ಲಿ ಸುಮಾರು 45 ತಳಿಗಳ ಶ್ವಾನಗಳು ನೋಂದಣಿಯಾಗಿತ್ತು, ಆದರೆ ಈ ಬಾರಿ 650 ತಳಿಗಳು ಪ್ರದರ್ಶನದಲ್ಲಿ ನೋಂದಣಿಯಾಗಿವೆ. ಅದರಲ್ಲಿ 450 ತಳಿಗಳನ್ನು ಒಳಗೊಂಡಿದ್ದು, ವಿವಿಧ ತಳಿಯ ಶ್ವಾನಗಳು ಪ್ರದರ್ಶನ ನೀಡಿದವು.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ತಳಿಗಳ ಶ್ವಾನಗಳಿಗೆ ಶ್ವಾನ ವೈದ್ಯಾಧಿಕಾರಿಗಳು ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿರುವ ತೀರ್ಪುಗಾರರು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಿದರು.

ಪ್ರೇಕ್ಷಕರ ಮನಸೂರೆಗೊಂಡ ಮುದ್ದು ಶ್ವಾನಗಳು Read More

ಯುವ ಜನತೆಗೆ ಕಿಕ್ಕೇರಿಸಿದ ಸುನಿಧಿ ಚೌಹಾಣ್

ಮೈಸೂರು: ಧೂಮ್ ಮಚಾಲೇ ಧೂಮ್ ಮಚಾಲೇ ಧೂಮ್ ಎಂದು ಹಾಡುತ್ತಾ ಸ್ಟೆಪ್ ಹಾಕುತ್ತಾ ಬಂದ ಖ್ಯತ ಗಾಯಕಿ ಸುನಿಧಿ ಚೌಹಾಣ್ ಅವರನ್ನು ಕಂಡ ಯುವ ಜನತೆ ಕಿಕ್ಕೇರಿದವರಂತೆ ಕುಣಿಯುತ್ತಾ ತೇಲಾಡಿದರು.

ನಗರದ ಹೊರವಲಯದ ಉತ್ತನಹಳ್ಳಿ ಜ್ವಾಲಾಮುಖಿ ದೇವಸ್ಥಾನದ ಬಳಿ ಆಯೋಜಿಸಿರುವ ಯುವ ದಸರಾ ಕಾರ್ಯಕ್ರಮದ ಕೊನೆಯ ದಿನ ಶನಿವಾರ ಬಾಲಿವುಡ್ ಗಾಯಕಿ ಸುನಿಧಿ ಚೌಹಾಣ್ ಗಾಯನಕ್ಕೆ ಸಂಗೀತ ಪ್ರಿಯರು ಫುಲ್ ಫಿದಾ ಆದರು.

ಯುವ ದಸರಾ ವೇದಿಕೆಗೆ ಆಗಮಿಸುತ್ತಲೇ ಧೂಮ್ ಚಿತ್ರದ ಹಾಡು ಹಾಡುತ್ತಲೇ ಕಿಕ್ ಏರಿಸಿದ ಸುನಿಧಿ ಅವರನ್ನು ನೋಡುತ್ತಾ ತುಂತುರು ಮಳೆಯಲ್ಲೂ ಯುವಕ ಯುವತಿಯರು ಹುಚ್ಚೆದ್ದು ಕುಣಿದರು.

ಬಾಲಿವುಡ್ ಸಿನಿಮಾಗಳ ಮೇ ಇಸ್ಕ್ ಮೇರೆ, ಐಸಾ ಮೇರಿ ಪ್ಯಾರ್ ಹೈ, ಹ್ಯಾನೀ ಹ್ಯಾನಿ ಚುಟ್ಕೆಯ, ಮೈ ಕ್ರೇಜಿ ಗರ್ಲ್ ಮೈ ಕ್ರೇಜಿ ಗರ್ಲ್, ಫನಾ ಚಿತ್ರದ ಮೇರೆ ಹಾತ್ ಮೇ , ತೇರಿ ಮೇರಿ ಇಸ್ಕು ಸೇ, ಮೇರಿ ಕಮಲಿ ಕಮಲಿ, ಪುಷ್ಪ ಚಿತ್ರದ ಸಾಮಿ ಸಾಮಿ ಹಾಡುಗಳನ್ನು ಹಾಡಿ ಯುವ ದಸರಾ ಅದ್ದೂರಿ ಸಂಭ್ರಮಕ್ಕೆ ಸಾಕ್ಷಿಯಾದರು.

ಮುಂಗಾರು ಮಳೆ ಚಿತ್ರದ ಕುಣಿದು ಕುಣಿದು ಬಾರೇ ಹಾಗೂ ಜೋಗಿ ಚಿತ್ರದ ಚಿಕು ಬುಕ್ ರೈಲು ನಿಲ್ಲೋದಿಲ್ಲ ಎಲ್ಲೂ, ರಾ ರಾ ರಾಕಮ್ಮ ಹಾಡು ಹಾಡಿಗೆ ಪ್ರೇಕ್ಷಕರು ಕೂಡಾ ಧ್ವನಿಗೂಡಿಸಿ ಶಿಳ್ಳೆ ಕೇಕೆ ಹಾಕಿ ಕುಣಿದರು.

ಯುವ ಜನತೆಗೆ ಕಿಕ್ಕೇರಿಸಿದ ಸುನಿಧಿ ಚೌಹಾಣ್ Read More

ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 35 ಮಂದಿ ದು*ರ್ಮರಣ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ಅವರ‌ ಚುನಾವಣಾ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿದಲ್ಲಿ 35 ಕ್ಕೂ‌ ಹೆಚ್ಚು ಮಂದಿ ದುರ್ಮರಣ ಹೊಂದಿದ್ದಾರೆ.

ಮೃತಪಟ್ಟವರಲ್ಲಿ ಮೂವರು ಮಕ್ಕಳು ಮತ್ತು ವಯಸ್ಕರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರೇ ಹೆಚ್ಚು,ರ‍್ಯಾಲಿಗಾಗಿ ಆರು ಗಂಟೆಗಳ ಕಾಲ ಕಾದಿದ್ದರು, ರ‍್ಯಾಲಿ ತಡವಾಗಿ ಬಂದಿದೆ ಹಾಗಾಗಿ ಹೆಚ್ಚಿನ ಜನಸಂದಣಿ ಸೇರಿದ್ದರು.ಆಗ ಕಾಲ್ತುಳಿತ ಸಂಭವಿಸಿ ಉಸಿರುಗಟ್ಟಿ‌ ಜನ ಮೃತಪಟ್ಟಿದ್ದಾರೆ.ಇನ್ನೂ 80 ಕ್ಕೂ‌ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖೆ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ತಮಿಳುನಾಡು ರ‍್ಯಾಲಿಯಲ್ಲಿ ನಡೆದ ಘೋರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 35 ಮಂದಿ ದು*ರ್ಮರಣ Read More