ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕಿತ್ತು, ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ.ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ವ್ಯಂಗ್ಯ ವಾಡಿದರು ಅಶೋಕ್.

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕಿತ್ತು, ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ.ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ವ್ಯಂಗ್ಯ ವಾಡಿದರು ಅಶೋಕ್.

ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ‌ ಸರ್ಕಾರ-ಅಶೋಕ್ ಟೀಕೆ Read More

ರೇಣುಕಾಸ್ವಾಮಿ ಕೊಲೆ ಪ್ರಕರಣ:2 ದಿನದಲ್ಲಿ ಚಾರ್ಜ್‌ ಶೀಟ್‌‌ ಸಲ್ಲಿಕೆ-ದಯಾನಂದ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ,ಇನ್ನೂ ಕೆಲವು ಎಫ್ ಎಸ್ ಎಲ್ ವರದಿಗಳು ಬರಬೇಕಿದೆ ಎಂದು ಹೇಳಿದರು.

ರಾಜ್ಯ ಎಫ್ ಎಸ್ ಎಲ್ ನಿಂದ ವರದಿಗಳು ಬಂದಿವೆ. ಎಲ್ಲಾ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಿದ್ಧವಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಚಾರ್ಜ್‌ಶೀಟ್ ನೀಡಿ ಅವರಿಂದ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್ ನೋಡಿರುವ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಹೈದರಾಬಾದ್​ನ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಹಲವು ವರದಿಗಳು ಇನ್ನೂ ಬರಬೇಕಿದೆ,ಹಾಗಾಗಿ ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ
ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು ಎಂದು ದಯಾನಂದ್ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ:2 ದಿನದಲ್ಲಿ ಚಾರ್ಜ್‌ ಶೀಟ್‌‌ ಸಲ್ಲಿಕೆ-ದಯಾನಂದ್ Read More

ನಂಬಿಕೆ ನಕ್ಷೆ ಯೋಜನೆ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯ ಎಂಬುದು ಬೆಂಗಳೂರಿಗರ ನಂಬಿಕೆಯಾಗಿದೆ ಎಂದು ಆರ್.ಅಶೋಕ್ ಛೇಡಿಸಿದ್ದಾರೆ.

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆ ಇಲ್ಲದಂತಾಗಿದೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ,ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ,ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ,ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ,ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ,ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.

ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ನಂಬಿಕೆ ನಕ್ಷೆ ಯೋಜನೆ ಬಗ್ಗೆ ಅಶೋಕ್ ವ್ಯಂಗ್ಯ Read More

ಕೋವಿಡ್ ಹಗರಣದ ತನಿಖಾ ವರದಿ ಕ್ಯಾಬಿನೆಟ್‌ ನಲ್ಲಿ ಚರ್ಚಿಸಿ ತೀರ್ಮಾನ:ಸಿಎಂ

ಮೈಸೂರು: ಕೋವಿಡ್ ಹಗರಣದ ತನಿಖಾ ವರದಿಯನ್ನು ಬುಧವಾರ ಸಚಿವ ಸಂಪುಟದ
ಮುಂದೆ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,
ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ ಎಂದು ತಿಳಿಸಿದರು.

ವರದಿಯಲ್ಲಿ ಏನಿದೆ ಎಂಬುದನ್ನ ನಾನು ನೋಡಿಲ್ಲ,ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಇನ್ನು ಗಮನಕ್ಕೆ ಬಂದಿಲ್ಲ,
ನನ್ನ ಗಮನಕ್ಕೆ ಬರದೆ ಡಿ.ಸುಧಾಕರ್ ಗೆ ಈ ಬಗ್ಗೆ ಯಾರು ಮಾಹಿತಿ ಕೊಟ್ಟರು ಎಂದು ಪ್ರಶ್ನಿಸಿದ ಮುಖ್ಯ ಮಂತ್ರಿಗಳು, ಕುಂಬಳಕಾಯಿ ಕಳ್ಳ ಅಂದ್ರೆ ಆತ ಯಾಕೆ ಹೆಗಲು ಮುಟ್ಟಿ ನೋಡಿ ಕೊಳ್ಳಬೇಕು ಎಂದು ಕೇಳಿದರು.

ಅವರಿಗೆ ಇದು ಸುಳ್ಳು ವರದಿ ಎಂದು ಹೇಗೆ ಗೊತ್ತಾಗುತ್ತೆ ಎಂದ ಸಿಎಂ, ಸುಧಾಕರ್ ತಪ್ಪು ಮಾಡಿರುವುದು ಆತನಿಗೆ ಮಾನಸಿಕವಾಗಿ ಗೊತ್ತಿದೆ, ಹಾಗಾಗಿ ಆ ರೀತಿ ಮಾತನಾಡುತ್ತಿದ್ದಾನೆ ಎಂದು ಟಾಂಗ್ ನೀಡಿದರು.

ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ‌ ಎಂದು ಇದೇ‌ ವೇಳೆ ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2009ರ ಹಿಂದಿನ ಬಡವಾಣೆಗೆ 50:50 ಅನ್ವಯ ಆಗುವುದಿಲ್ಲ ಎಂಬ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ, ಮೊದಲು ಆದೇಶ ನೋಡುತ್ತೇನೆ ಎಂದರು.

ಮಂಗಳವಾರ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿದ್ದೀರ ಏನಾದರೂ ವಿಶೇಷವೆ ಎಂಬ ಪ್ರಶ್ನೆಗೆ,ಬೆಟ್ಟಕ್ಕೆ ಹೋದ ಮೇಲೆ ಚಾಮುಂಡಿ ದೇವಿಯ ದರ್ಶನ ಮಾಡಬೇಕು, ಇದರಲ್ಲಿ ಏನು ವಿಶೇಷ ಎಂದು ಸಭೆಗೆ ಹೋಗುತ್ತಿದ್ದೇನೆ ಹಾಗಾಗಿ ದರ್ಶನ ಮಾಡಿದ್ದೇನೆ‌ ಅಷ್ಟೇ ಎಂದು ಹೇಳಿದರು.

ನನಗೆ ಯಾವ ಟೆಂಕ್ಷನ್ ಇಲ್ಲಾ,ಆತಂಕಾನೂ ಇಲ್ಲ,ನನ್ನ ನೋಡಿದರೆ ಟೆಂಕ್ಷನ್ ಇರೋ ರೀತಿ ಕಾಣುತ್ತೀನಾ ಎಂದು ಮಾಧ್ಯಮದವರಿಗೆ ಪ್ರಶ್ನೆ ಹಾಕಿ,ನಾನು ಯಾವಾಗಲೂ ಹೀಗೆ ಇರುತ್ತೇನೆ, ಇವತ್ತು ಏನು ಸ್ಪೆಷಲ್ ಇಲ್ಲ ಎಂದು ಹೇಳಿದರು.

ಬಿಜೆಪಿಯವರು ಹೇಳಬಾರದಷ್ಟು ಸುಳ್ಳನ್ನ ನನ್ನ ಮೇಲೆ ಹೇಳಿದ್ದಾರೆ.
ಹೀಗಾಗಿ ನಾನು ಟೆಂಕ್ಷನ್ ನಲ್ಲಿದ್ದೇನೆ ಎಂದು ಹೇಳುತ್ತಿದ್ದಾರೆ ಅಷ್ಟೇ ಎಂದು ಮುಕ್ಯಮಂತ್ರಿಗಳು ತಿಳಿಸಿದರು.

ಸಿದ್ದರಾಮಯ್ಯ ಅನುಮತಿ ಕೊಟ್ರೆ ಸಿಎಂ ಆಗುತ್ತೇನೆ ಎಂಬ ದೇಶಪಾಂಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿಎಂ ಮಾಡುವುದು ಶಾಸಕರು ಹಾಗೂ ಹೈ ಕಮಾಂಡ್. ಅವರೇ ಅದನ್ನ ತೀರ್ಮಾನ ಮಾಡುತ್ತಾರೆ,ನಾನು ಹೇಗೆ ಮಾಡಲಿ ಎಂದು ಹೇಳಿದರು.

ಕೋವಿಡ್ ಹಗರಣದ ತನಿಖಾ ವರದಿ ಕ್ಯಾಬಿನೆಟ್‌ ನಲ್ಲಿ ಚರ್ಚಿಸಿ ತೀರ್ಮಾನ:ಸಿಎಂ Read More

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ‌ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದೆ.

ಮುಡಾ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ.

ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ. ಆದರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ.

ಅಲ್ಲದೇ ದಿನೇಶ್‌ ಕುಮಾರ್‌ ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು‌ ಮನವರಿಕೆಯಾಗಿದ್ದು,ಅವರು
ಅಧಿಕಾರದಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಸರ್ಕಾರ ತಿಳಿಸಿದೆ.

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು Read More

ಕೆಪಿಎಸ್ ಸಿ ಮರು ಪರೀಕ್ಷೆ: ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಿದೆ-ಅಶೋಕ್

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸರ್ಕಾರದ ಈ ನಿರ್ಧಾರ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಮತ್ತು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ,
ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಸರ್ಕಾರ ಎಚ್ಚೆತ್ತುಕೊಂಡು ಮರು ಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ತಪ್ಪುಗಳು,ಲೋಪದೋಷಗಳು ಮರುಕಳಿಸದಂತೆ ಜಾಗರೂಕತೆಯಿಂದ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆಯಾಗಿದೆ,ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು, ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆ
ಯಾಗದಂತೆ ಬ್ಲಾಕ್ ಲಿಸ್ಟ್ ಗೆ ಸೇರಿಸಬೇಕು ಮರು ಪರೀಕ್ಷೆ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಿ ಎಂದು ಅಶೋಕ್ ಹೇಳಿದ್ದಾರೆ.

ಕೆಪಿಎಸ್ ಸಿ ಮರು ಪರೀಕ್ಷೆ: ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಿದೆ-ಅಶೋಕ್ Read More

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಂತಾಗಿದೆ.

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು ಸೋಮವಾರ ಕೂಡಾ ಎರಡು ಗಂಟೆಗಳ ಕಾಲ ಧೀರ್ಘ ವಿಚಾರಣೆ ನಡೆಸಲಾಯಿತು.

ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಸುದೀರ್ಘ ವಾದ ಮಂಡಿಸಿದ ಬಳಿಕ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್ ವಾದಮಂಡಿಸಿದರು.

ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲೇಖಿಸಿ, ಕಾನೂನು ಬಾಹಿರವಾಗಿಲ್ಲದಿದ್ದರೂ ಪ್ರಭಾವ ಬಳಸಿ ಲಾಭ ಪಡೆದರೆ ಅದು ಅಪರಾಧ. ಅನುಕೂಲ ಪಡೆಯಲು ಅಧಿಕಾರಿ ಮೇಲೆ ಪ್ರಭಾವ ಬಳಸಿದರೂ ಅಪರಾಧ.

ವೈಯಕ್ತಿಕ ಪ್ರಭಾವ ಬಳಸಿದರೂ ಅದು ಸೆಕ್ಷನ್ 7 ಅಡಿ ಅಪರಾಧ. ಒಬ್ಬ ಸಚಿವ ಇಲಾಖೆಯಲ್ಲದೇ ಬೇರೆಡೆ ಪ್ರಭಾವ ಬೀರಿದರೂ ಅಪರಾಧ. ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರ್ಯತೆ ತರಲು ಸೆಕ್ಷನ್ 7ಸಿ ಜಾರಿಗೆ ತರಲಾಗಿದೆ ಎಂದು ವಾದಿಸಿದರು.

ಮುಡಾ ಪ್ರಕರಣದ ಬಗ್ಗೆ ಸರ್ಕಾರವೇ ತನಿಖೆ ಅಗತ್ಯವಿದೆ ಎಂದು ಭಾವಿಸಿ ಆಯೋಗ ರಚಿಸಿದೆ. ಹೀಗಾಗಿ ರಾಜ್ಯಪಾಲರು 17ಎ ಅಡಿ ಅನುಮತಿ ನೀಡಿರುವುದು ಸರಿಯಾಗಿದೆ. ಈ ಹಂತದಲ್ಲಿ ತನಿಖೆಯನ್ನು ತಡೆಹಿಡಿಯಬಾರದು. ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ಎಂದು ರಾಘವನ್ ಮನವಿ ಮಾಡಿದರು.

ರಾಘವನ್ ಅವರು ಸುದೀರ್ಘ ವಾದ ಮಂಡಿಸಿದ ಬಳಿಕ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಸಚಿವ ಸಂಪುಟದ ನಿರ್ಣಯದ ಬಗ್ಗೆ ವಾದ ಮಂಡಿಸಬೇಕಿದೆ, ಆದರೆ ಈ ವಾರಾಂತ್ಯ ಹಬ್ಬದ ರಜೆಗಳಿವೆ, ಆದ್ದರಿಂದ ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್​ಗೆ ಮನವಿ ಮಾಡಿದರು.

ಎಜಿ ಶಶಿಕಿರಣ್ ಶೆಟ್ಟಿ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಹಬ್ಬಕ್ಕೂ ಮೊದಲೇ ವಾದಮಂಡನೆ ಮುಗಿಸಿಬಿಡಿ ಎಂದು ಹೇಳಿದರು.

ಆದರೆ ಅಡ್ವೊಕೆಟ್ ಜನರಲ್ ವಾದಿಸಿದ ಮೇಲೆ ನಾನು ವಾದಿಸುತ್ತೇನೆ. ಸೆಪ್ಟೆಂಬರ್ 9 ಅಥವಾ 21 ರಂದು ನಾನು ವಾದಿಸುತ್ತೇನೆ ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದರು.

ಅಷ್ಟು ದೂರದ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಎಂದ ನ್ಯಾಯಮೂರ್ತಿಗಳು, ನೀವು ಬೇಗ ವಾದಮಂಡನೆ ಮುಗಿಸಬೇಕು. ವಿಚಾರಣಾ ನ್ಯಾಯಾಲಯದ ಕಲಾಪ ಬಹಳ ಕಾಲ ಮುಂದೂಡುವುದು ಸೂಕ್ತವಲ್ಲ ಎಂದು ಹೇಳಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದರು.

ನಂತರ ಸೆಪ್ಟೆಂಬರ್ 12ರಂದು ತಾವು ವಾದಿಸುವುದಾಗಿ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ತಿಳಿಸಿದರು.

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More

2 ತಿಂಗಳೊಳಗೆ ಕೆಪಿಎಸ್‌ಸಿ ಮರು ಪರೀಕ್ಷೆ: ಸಿದ್ದರಾಮಯ್ಯ

ಬೆಂಗಳೂರು: ಇನ್ನು ಎರಡು ತಿಂಗಳೊಳಗೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮರು ಪರೀಕ್ಷೆಯ ನಿರ್ಧಾರವನ್ನು ಸಿಎಂ ಪ್ರಕಟಿಸಿದ್ದಾರೆ.

ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟಿಸಿದ್ದರು.

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ, ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕೆ ಅರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2 ತಿಂಗಳೊಳಗೆ ಕೆಪಿಎಸ್‌ಸಿ ಮರು ಪರೀಕ್ಷೆ: ಸಿದ್ದರಾಮಯ್ಯ Read More

ಸರ್ಕಾರ ರಾಜ್ಯಪಾಲರ ಮೇಲೆ ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿದೆ:ಅಶೋಕ್

ಬೆಂಗಳೂರು:ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ರಾಜ್ಯ ಸರ್ಕಾರ ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಲು ಹೊರಟಿದೆ ಇದು ಖಂಡನೀಯ ಮತ್ತು ಅಕ್ಷಮ್ಯ ಅಪರಾಧ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸರ್ಕಾರದ ಸರಣಿ ಭ್ರಷ್ಟಾಚಾರ ಬಯಲಾದಾಗಿನಿಂದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಹಲವಾರು ಕಾಂಗ್ರೆಸ್ ನಾಯಕರು ಸಂವಿಧಾನಿಕ ಹುದ್ದೆ ಎಂಬುದನ್ನೂ ಮರೆತು ರಾಜ್ಯಪಾಲರನ್ನ ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಬಾಂಗ್ಲಾದೇಶದ ರೀತಿ ದಾಳಿ ಮಾಡುವ ಬೆದರಿಕೆ ಒಡ್ಡುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶೋಕ್, ರಾಜ್ಯಪಾಲರ ವಿರುದ್ಧ ನ್ಯಾಯಾಲಯದಲ್ಲಿ ಆರೋಪ ಹೊರಿಸುವುದು, ಬಿಜೆಪಿ ಏಜೆಂಟ್ ಎಂದು ಛೇಡಿಸುವುದು, ಹೀಗೆ ಸರ್ಕಾರ ರಾಜ್ಯಪಾಲರಿಗೆ ಅಗೌರವ ತೋರುತಲೇ ಬಂದಿದೆ ಎಂದು ಆರೋಪಿಸಿದ್ದಾರೆ.

ರಾಜಭವನದಲ್ಲಿ ಯಾವುದೇ ಪ್ರಾಸಿಕ್ಯೂಷನ್ ಅನುಮತಿ ಮನವಿ ಬಾಕಿ ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದಾರೆ,ಆದರೆ ಮುಖ್ಯಮಂತ್ರಿಗಳ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಅನುಮತಿ ನೀಡಿ ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪ ಹಸಿ ಸುಳ್ಳು ಎಂಬುದು ಸಾಬೀತಾಗಿದೆ ಎಂದು ಅಶೋಕ್‌ ತಿಳಿಸಿದ್ದಾರೆ.

ಸರ್ಕಾರ ರಾಜ್ಯಪಾಲರ ಮೇಲೆ ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿದೆ:ಅಶೋಕ್ Read More

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಆತಂಕ ಇಲ್ಲ:ಪರಮೇಶ್ವರ್

ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ, ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ ಎಂದು ತಿಳಿಸಿದರು.

ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪು ಏನೂ ಇಲ್ಲ, ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ, ತಾವು ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತಾನೇ ಇದ್ದಾರೆ ಎಂದು ಪರಂ ಸಿದ್ದು ಪರ ಬ್ಯಾಟಿಂಗ್ ಮಾಡಿದರು.

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಇತ್ತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಆತಂಕ ಇಲ್ಲ:ಪರಮೇಶ್ವರ್ Read More