ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

(ವರದಿ:ಸಿಬಿಎಸ್‌)

ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದ ಕೂಡಲೇ ಕೆಲಕಾಲ ಆತಂಕದ ವಾತಾವರಣ‌ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಪೊಲೀಸರು‌ ಸ್ಥಳಕ್ಜೆ ಧಾವಿಸಿ ದರು.

ಬೆದರಿಕೆ ಮೇಲ್‌ನ ಸಾರಾಂಶದ ಪ್ರಿಂಟೌಟ್ ತೆಗೆದು ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ಹೊರಡಿಸಿದ್ದರು.

ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ ನಡುವೆಯೂ ಜಿಲ್ಲಾಧಿಕಾರಿಗಳು ಸಭೆ ಮುಂದುವರೆಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ Read More

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ

ಮೈಸೂರು: ಶಾಸಕರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ಸೋಮವಾರ ಭಾವಪೂರ್ಣ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್. ಎಸ್, ಉಪಾಧ್ಯಕ್ಷರುಗಳಾದ ರಂಗಸ್ವಾಮಿ ಪಾಪು, ರಾಜೇಶ್ ಸಿ ಗೌಡ, ಶಿವಲಿಂಗಯ್ಯ, ರೇಷ್ಮಾ, ನಾಸೀರ್ ಖಾನ್, ನಿರೂಪಕ ಅಜಯ್ ಶಾಸ್ತ್ರಿ, ಶುಭಪಲ್ಲವಿ, ಗುರುರಾಜ್, ಸದಸ್ಯರುಗಳಾದ ಶ್ರೀಕಾಂತ, ಮೊಹಮ್ಮದ್ ಸಿದ್ದಿಖ್, ಚಿಕ್ಕಣ್ಣ ಶಿವರುದ್ರ, ರಾಜಶೇಖರ್ ಕಾರ್ತಿಕ್ ಲೋಕೇಶ್ ಮತ್ತಿತರರು ಹಾಜರಿದ್ದರು

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ Read More

ಲಯನ್ಸ್ ಪ್ರಾಂತೀಯ ಸಮ್ಮೇಳನ:’ಬದುಕಿ ಬದುಕಲು ಬಿಡಿ’ ಸಂದೇಶಕ್ಕೆ ಆದ್ಯತೆ

ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು.

ಬದುಕಿ ಬದುಕಲು ಬಿಡಿ ಎಂಬ ಮಾನವೀಯ ಸಂದೇಶವನ್ನು ಕೇಂದ್ರವಾಗಿಟ್ಟುಕೊಂಡು ಆಯೋಜಿಸಲಾಗಿದ್ದ ಈ ಸಮ್ಮೇಳನವು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮಹತ್ವವನ್ನು ಸಾರಿತು.

ಸಮ್ಮೇಳನವನ್ನು ಉದ್ಘಾಟಿಸಿದ ಗ್ರೀನ್ ಆಸ್ಕರ್ ಪ್ರಶಸ್ತಿ ವಿಜೇತರಾದ ಕೃಪಾಕರ ಮತ್ತು ಸೇನಾನಿ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ಬದುಕುವುದು ಅಗತ್ಯವಿದೆ. ಪ್ರತಿಯೊಬ್ಬರೂ ತಮ್ಮ ಬದುಕಿನ ಜೊತೆಗೆ ಇತರರ ಬದುಕಿನ ಹಕ್ಕನ್ನು ಗೌರವಿಸಿದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಮೈಸೂರು ರಂಗನಾಥ್ ಅವರನ್ನು ಗೌರವಿಸಲಾಯಿತು.

ಈ ವೇಳೆ ಪ್ರಾಂತೀಯ ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜು ಅವರು ಮಾತನಾಡಿ, “ಬದುಕಿ ಬದುಕಲು ಬಿಡಿ” ಎಂಬುದು ಕೇವಲ ನುಡಿ ಮಾತ್ರವಲ್ಲ, ಅದು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಮೌಲ್ಯವಾಗಿದೆ ಎಂದು ತಿಳಿಸಿದರು.

ಯುವಜನತೆ ಈ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಹೆಚ್ಚಲಿದೆ ಎಂದು ಹೇಳಿದರು.

ಲಯನ್ಸ್ ಅಂಬಾಸಿಡರ್ ಸಂಸ್ಥೆಯ ಸ್ಥಾಪಕ ಸದಸ್ಯರು ಅತಿಥಿಯ ಸಮಿತಿಯ ಅಧ್ಯಕ್ಷರಾದ ಲಯನ್ ಎಮ್. ಶಿವಕುಮಾರ್ ಅವರು ಪಿರಿಯಾಪಟ್ಟಣದ ಬೇಗೂರು ಗ್ರಾಮದಲ್ಲಿ ಯುವಕ ಯುವತಿಯರಿಗೆ ಸ್ವಉದ್ಯೋಗ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ, ಹೊಲಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಉದ್ದೇಶದಿಂದ ತಮ್ಮ ಎರಡು ಎಕರೆ ಜಾಗವನ್ನು ಲಯನ್ಸ್ ಕ್ಲಬ್ ಮೈಸೂರು ಅಂಬ್ಯಾಸಿಡರ್ ಸೇವಾ ಟ್ರಸ್ಟಿಗೆ ದಾನವಾಗಿ ನೀಡಿದರು.

ಪ್ರಾಂತೀಯ ಸಮ್ಮೇಳದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕ್ಯಾನ್ಸರ್ ಪಿಡೀತ ಎಂಟು ವರ್ಷದ ಮಗುವಿಗೆ 50,000 ಧನ ಸಹಾಯ ,ಹೊಲಿಗೆ ಯಂತ್ರಗಳು, ವಿದ್ಯಾರ್ಥಿಗಳಿಗೆ ಶುಲ್ಕ ವಿತರಿಸಲಾಯಿತು.

ಜಿಲ್ಲಾ ರಾಜ್ಯಪಾಲರಾದ ಲಯನ್ ಕೆ.ಎಲ್.ರಾಜಶೇಖರ ಅವರು ನಮ್ಮ ಜಿಲ್ಲೆಯಲ್ಲಿ ಲಯನ್ ಸಂಸ್ಥೆಗಳಿಂದ ಅತ್ಯಮೂಲ್ಯವಾದ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ಎಲ್ಲಾ ಸದಸ್ಯರಿಗೆ ಅಭಿನಂದನೆಗಳು ಎಂದು ಹೇಳಿದರು.

ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಎನ್ ಕೃಷ್ಣೇಗೌಡ ಅವರು ಮಾತನಾಡಿ ಪ್ರಸ್ತುತ ವಿದ್ಯಮಾನದಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ ಆದ್ದರಿಂದ ಅವುಗಳನ್ನು ನಿಯಂತ್ರಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷರಾದ ಬಾಲು ,ನಾಗರಾಜು, ಮೆಂಟರ್ ಕರಿಯಪ್ಪ, ಡಾ.ಆರ್.ಡಿ.ಕುಮಾರ್ ,ಕೆ.ಟಿ ವಿಷ್ಣು, ರಾಜೇಶ್ ಉಪಸ್ಥಿರಿದರು.

ವಿ.ಶ್ರೀಧರ್ ವಂದಿಸಿದರೆ ಕಾರ್ಯಕ್ರಮದ ನಿರೂಪಣೆಯನ್ನು ಸಿ.ಆರ್.ದಿನೇಶ್ ಮಾಡಿದರು.

ಲಯನ್ಸ್ ಪ್ರಾಂತೀಯ ಸಮ್ಮೇಳನ:’ಬದುಕಿ ಬದುಕಲು ಬಿಡಿ’ ಸಂದೇಶಕ್ಕೆ ಆದ್ಯತೆ Read More

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ

ಮೈಸೂರು: ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.

ಶಾಮನೂರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಅವರು ಶಾಮನೂರು ಶಿವಶಂಕರಪ್ಪ ನವರ ನಿಧನದ ಸುದ್ದಿ ತಿಳಿದು ಆಘಾತವಾಯಿತು ಹಾಗೂ ತೀವ್ರ ದುಃಖವನುಂಟು ಮಾಡಿದೆ ಎಂದು ಹೇಳಿದರು.

ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಮಾರ್ಗದರ್ಶಕರಾಗಿ ಅವರು ಸಲ್ಲಿಸಿದ ಸೇವೆ ಅಮೂಲ್ಯ,ದೀರ್ಘಕಾಲದ ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ಶಿಸ್ತಿನ ರಾಜಕಾರಣ ಮಾಡಿದ್ದರು.
ಅವರ ಅಗಲಿಕೆ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ರಾಜಕೀಯ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ, ಅವರ ಆದರ್ಶಗಳು ಹಾಗೂ ಸೇವಾ ಮನೋಭಾವ ಮುಂದಿನ ತಲೆಮಾರಿಗೆ ಪ್ರೇರಣೆಯಾಗಲಿದೆ ಎಂದು ನಜರ್ಬಾದ್ ನಟರಾಜ್ ತಿಳಿಸಿದರು.

ಎಸ್ ಎನ್ ರಾಜೇಶ್, ಕಡಕೋಳ ಶಿವಲಿಂಗು, ದಿನೇಶ್, ಮೊಹಮ್ಮದ್, ನಂಜುಂಡಸ್ವಾಮಿ,ರವಿಚಂದ್ರ, ದೀಪಕ್, ಹರೀಶ್ ನಾಯ್ಡು, ಲೋಕೇಶ್ ಮತ್ತುತರರು ಹಾಜರಿದ್ದರು.

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ Read More

ಶಾಮನೂರು ಅವರಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ರಾಮಾನುಜ ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅವರ ಸೇವೆಗಳನ್ನು ಸ್ಮರಿಸಲಾಯಿತು.

ಶಾಮನೂರು ಅವರಿಗೆ ಶ್ರದ್ಧಾಂಜಲಿ Read More

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ

ಮೈಸೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರು ಖಡಕ್ ಸೂಚನೆ ನೀಡಿದರು.

ಪೊಲೀಸ್ ಗೃಹ ನಿರ್ಮಾಣ ಸಂಘದ ಅಧ್ಯಕ್ಷ, ನಾಗೇಶ್, ಉಪಾಧ್ಯಕ್ಷ ಮರಿಗೌಡ ಹಾಗೂ ಯುವ ಮುಖಂಡ ಗಗನ್ ಅವರುಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದರು.

ಶಾಸಕರು ಬಡಾವಣೆಗೆ ಸಂಬಂಧಪಟ್ಟ ಅಧಿಕಾರಿಗಳೊಡನೆ ಚರ್ಚಿಸಿದರು,ಮತ್ತು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿ ಬಡಾವಣೆಯಲ್ಲಿರುವ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಡವಣಿಗೆ ಮೂರು ಬೋರ ಗಳನ್ನು ಹಾಕಿಸಬೇಕು ಕಾವೇರಿ ನೀರನ್ನು ಒಂದೂವರೆ ತಿಂಗಳಲ್ಲಿ ಕೊಡಬೇಕು ಮತ್ತು ಎರಡು ರಸ್ತೆಗಳನ್ನು ಮಾಡಿ ಮೂರು ಹೈಮಾಸ್ಟ್ ದೀಪಗಳನ್ನು ಹಾಕುವಂತೆ ಅಧಿಕಾರಿಗಳಿಗೆ ಜಿಟಿಡಿ ಸೂಚಿಸಿದರು.

ಇದೇ ವೇಳೆ ಜಿ ಟಿ ಗೌಡರ 75ನೇ ವರ್ಷದ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಪೆಟಲ್ಸ್ ಶಾಲೆಯ ಮಕ್ಕಳು ಹಾಡು ಹೇಳುವ ಮೂಲಕ ಆಚರಿಸಿ ಶಾಸಕರಿಗೆ ಶುಭ ಕೋರಿದರು.

ಈ ವೇಳೆ ಮಕ್ಕಳ ಜೊತೆ ಕೇಕ್ ಕತ್ತರಿಸಿ, ಗಿಡಗಳನ್ನು ನೆಡುವ ಮೂಲಕ ಜಿ ಟಿ ದೇವೇಗೌಡರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

ಇದೇ ಸಂದರ್ಭದಲ್ಲಿ ಯುವ ಮುಖಂಡ ಗಗನ್ ಅವರು ಮಾಡುತ್ತಿರುವ‌‌ ಸಮಾಜ ಸೇವೆಯನ್ನು ಗುರುತಿಸಿ ಬಡಾವಣೆ ಜನರು ಹಾಗೂ ಶಾಸಕರು ಸನ್ಮಾನ ಮಾಡಿದರು.

ಪೊಲೀಸ್ ಬಡಾವಣೆಯ ಜನತೆಯ ಕಷ್ಟಗಳಿಗೆ ತಕ್ಷಣ ಪರಿಹಾರ ಮಾಡಿಕೊಟ್ಟ ಶಾಸಕ ಜಿ.ಟಿ.ದೇವೇಗೌಡರಿಗೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ನಾಗರಿಕರು ವಂದನೆಗಳನ್ನು ಸಲ್ಲಿಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ Read More

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ

ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ
ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಮೆತ್ತಲೋಕ ವಿದ್ಯಾರ್ಥಿ ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸಿ ಎಚ್ ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಅವರು, ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ದೇಶದ ಅಭಿವೃದ್ಧಿ ಜೊತೆಗೆ ಹೆಚ್ಚಿನ ಆದ್ಯತೆಯ ಮೇಲೆ ರಾಜ್ಯದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ, ಇವರಿಗೆ ತಾಯಿ ಚಾಮುಂಡೇಶ್ವರಿ ಹೆಚ್ಚಿನ ಆರೋಗ್ಯ ಕರುಣಿಸಲಿ ಎಂದು ಹಾರೈಸಿದರು.

ಈಗಾಗಲೇ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಜನರ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ,
ಲಾಟರಿ ನಿಷೇಧ, ಸಾರಾಯಿ ನಿಷೇಧ, ಗ್ರಾಮ ವಾಸ್ತವ್ಯ, ರೈತರ ಸಾಲ ಮನ್ನಾ ಮತ್ತಿತರ ಒಳ್ಳೆಯ ಕೆಲಸ ಮಾಡಿ ಜನಪರ ಆಡಳಿತ ನೀಡಿದ್ದಾರೆ, ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಅವರು ತಾಯಿ ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ನಂತರ ಸ್ನೇಹ ಬಳಗದ ಸದಸ್ಯರು ವಿದ್ಯಾರ್ಥಿಗಳು ಎಚ್ ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್,ಸಿಂಚನಗೌಡ, ವಿದ್ಯಾ, ನಾಗಶ್ರೀ ಸುಚಿಂದ್ರ, ಛಾಯಾ,ಗಾಯಕ ಯಶವಂತ್ ಕುಮಾರ್, ಜಗದೀಶ್,ರಾಜೇಶ್ ಕುಮಾರ್,ಮಹೇಶ, ಶ್ರೀಧರ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್ ,ದತ್ತ ಮತ್ತಿತರರು ಹಾಜರಿದ್ದರು.

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ Read More

ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರೆ: ಮೂಲ‌ ಸೌಕರ್ಯ ಕಲ್ಪಿಸಲು ಮಂಜುನಾಥ್ ಆದೇಶ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿರುವ ಚಿಕ್ಕಲ್ಲೂರಿನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಭಕ್ತರು ಅದನ್ನು ಲೆಕ್ಕಿಸದೆ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿದ್ದಾರೆ,ಮುಂದಿನ ವರ್ಷ ಅಭಿವೃದ್ಧಿ ಕಾರ್ಯಗಳು ಆಗಲೇಬೇಕು ಎಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.

ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಶ್ರೀ ಕ್ಷೇತ್ರದ ಶಾಶ್ವತ ಅಭಿವೃದ್ಧಿಗೆ ಕ್ರಿಯಾ ಯೋಜನೆ ತಯಾರುಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಶಾಸಕರು ಆದೇಶಿಸಿದರು.

ತಾಲ್ಲೂಕಿನ ಸುಪ್ರಸಿದ್ಧ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ 2026 ರ ಜ. 3 ರಿಂದ 7 ರ ವರೆಗೆ ನಡೆಯಲಿದ್ದು, ಸೌಹಾರ್ದತೆಯ ಪ್ರತೀಕವಾಗಿರುವ ಈ ಪವಾಡ ಪುರುಷನ ಜಾತ್ರೆಗೆ ಲಕ್ಷಾಂತರ ಭಕ್ತರು ಭಾಗವಹಿಸುವುದರಿಂದ ಅಗತ್ಯ ಸಿದ್ದತೆ ಕೈಗೊಳ್ಳಲು ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಶಾಸಕರು ಚಿಕ್ಕಲ್ಲೂರು ಜಾತ್ರೆ ತನ್ನದೆ ಆದ ಪರಂಪರೆ ಹೊಂದಿದೆ ಎಂದು ತಿಳಿಸಿದರು.

ಇಲ್ಲಿಗೆ ಬರುವ ಲಕ್ಷಾಂತರ ಭಕ್ತರಿಗೆ 5 ದಿನಗಳ ಕಾಲ ಯಾವುದೆ ಮೂಲ ಸೌಲಭ್ಯಗಳಿಗೆ ಕೊರತೆಯಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ಮುಂದಾಗಬೇಕು, ಭಕ್ತಾದಿಗಳಿಗೆ ಸರಬರಾಜು ಮಾಡುವ ಉಪಾಹಾರ, ನೀರಿನ ಶುದ್ಧತೆ ಪರೀಕ್ಷಿಸಬೇಕು ಎಂದು ಸೂಚಿಸಿದರು.
ತಾತ್ಕಾಲಿಕವಾಗಿ ಹೋಟೆಲ್‌ಗಳನ್ನು ತೆರೆಯುವವರಿಗೆ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚಿಸಬೇಕು. ಪರಿಕರಗಳು, ಕುಡಿಯುವ ನೀರು, ಶುದ್ಧತೆಯಿಂದ ಇರುವಂತೆ ತಿಳಿಸಬೇಕು. ಆರೋಗ್ಯಕ್ಕೆ ಪೂರಕವಾದ ಕ್ರಮವಹಿಸುವಂತೆ ಪರವಾನಗಿ ನೀಡುವ ಹಂತದಲ್ಲಿಯೇ ಕಟ್ಟು ನಿಟ್ಟಾಗಿ ಹೇಳಬೇಕು, ಸ್ನಾನ ಮತ್ತು ಶೌಚಕ್ಕೆ ಕಡ್ಡಾಯವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕರು ಹೇಳಿದರು.

ಚಿಕ್ಕಲ್ಲೂರು ಅಭಿವೃದ್ಧಿ ಪಡಿಸಿ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ಎಂಬ ಕೂಗು ಹಲವಾರು ವರ್ಷಗಳಿಂದಲೂ ಇದೆ. ಇದನ್ನು ಹೋಗಲಾಡಿಸಲು ಶ್ರೀ ಕ್ಷೇತ್ರದ ಶಾಶ್ವತ ಅಭಿವೃದ್ಧಿಗೆ ಕ್ರಿಯಾ ಯೋಜನೆ ತಯಾರು ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಮಂಜುನಾಥ್, ಪಾಳ್ಯ ಗ್ರಾಮದಿಂದ ಚಿಕ್ಕಲ್ಲೂರಿನವರೆಗೂ ನಾಲ್ಕು ಪಥದ ರಸ್ತೆ ಮಾಡಬೇಕೆಂಬುದು ನನ್ನ ಚಿಂತನೆಯಾಗಿದೆ. ಕ್ಷೇತ್ರವನ್ನು ಸಂಪರ್ಕಿಸುವ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಕೆಲವೆಡೆ ಡಾಂಬರೀಕರಣ ಆಗುತ್ತಿದೆ. ಇನ್ನೂ 6 ಕಿ.ಮೀ. ರಸ್ತೆ ಆಗಲಿದೆ. ಆದರೂ ಜಾತ್ರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ರಸ್ತೆ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಲೈಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ಇದ್ದರೂ ಸಾಲೂರು ಮಠದ ಸ್ವಾಮೀಜಿಗಳು ಶ್ರೀ ಮಠದ ಆಚಾರ ವಿಚಾರಗಳನ್ನು ಮುಂದುವರಿಸಿಕೊಂಡು ಬರುತ್ತಿದ್ದು ಅವರ ಪೂಜಾ ಕೈಂಕರ್ಯಗಳು ಎಂದಿನಂತೆ ನಿರಂತರವಾಗಿ ಮುಂದುವರೆಯುತ್ತಿವೆ. ಮಲೈಮಹದೇಶ್ವರ ಬೆಟ್ಟದಲ್ಲಿ ಯಾವುದೇ ಸಮಸ್ಯೆ ಇಲ್ಲಾ. ಹಾಗಾಗಿ ಚಿಕ್ಕಲ್ಲೂರಿನಲ್ಲಿ ಪ್ರಾಧಿಕಾರ ರಚನೆಗೆ ಸಾರ್ವಜನಿಕರ ಸಹಕಾರ ಅತ್ಯಮುಖ್ಯವಾಗಿದೆ. ಮಠದವರು ಎರಡು ಕಡೆಯವರು ಕುಳಿತು ಒಂದು ಒಳ್ಳೆಯ ತೀರ್ಮಾನವನ್ನು ಭಕ್ತರಿಗಾಗಿ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಮಠದ ಪರಂಪರೆ ಮತ್ತು ಆಚಾರ ವಿಚಾರಗಳಿಗೆ ಯಾವುದೇ ಸಮಸ್ಯೆಯಾಗದಂತೆ ಪ್ರಾಧಿಕಾರ ರಚನೆಯಾದರೆ ಲಕ್ಷಾಂತರ ಭಕ್ತರಿಗೆ ಶಾಶ್ವತ ಅಭಿವೃದ್ಧಿ ಕಾರ್ಯಗಳು ಮಾಡಲು ಸಾಧ್ಯವಾಗುತ್ತದೆ ಎಂದು ಎಂ.ಆರ್.ಮಂಜುನಾಥ್ ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಮಾತನಾಡಿ ಜನವರಿ 3 ರಿಂದ 7 ರವರೆಗೂ ನಡೆಯಲಿರುವ ಚಿಕ್ಕಲ್ಲೂರು ಜಾತ್ರೆಗೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ 20 ದಿನಗಳ ಮುನ್ನವೇ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಜಾತ್ರಾ ಸಂದರ್ಭದಲ್ಲಿ ವಿದ್ಯುತ್ ಸೇವೆ ನಿರಂತರವಾಗಿರ ಬೇಕು. ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ವೈದ್ಯರು ಸಿಬ್ಬಂದಿ ಯನ್ನು ನಿಯೋಜಿಸಬೇಕು, ಭಕ್ತಾದಿಗಳ ಸಂಖ್ಯೆಗೆ ಅನುಗುಣವಾಗಿ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚು ಬಸ್‌ಗಳ ನಿಯೋಜನೆ ಮಾಡಬೇಕು, ಭಕ್ತರ ಸುರಕ್ಷತೆ, ಮತ್ತು ಭದ್ರತೆ, ಅಹಿತಕರ ಘಟನೆಗಳನ್ನು ತಡೆಗಟ್ಟಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಬಾರಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಪ್ರಾಣಿಗಳನ್ನು ತಡೆದರೆ ಸ್ಥಳೀಯ ಯುವಕರ ತಂಡ ಕಟ್ಟಿಕೊಂಡು ಪೊಲೀಸರ ಕಾರ್ಯಚರಣೆಯ ವಿರುದ್ಧ ನಾವು ಕಾರ್ಯಚರಣೆ ಮಾಡಬೇಕಾಗುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಹೇಳುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ಅವರು ನಾವು ನ್ಯಾಯಾಲಯದ ಆದೇಶದಂತೆ ಪಾಲನೆ ಮಾಡುತ್ತಿದ್ದೇವೆ ಕಳೆದ ವರ್ಷ ಚೆಕ್ ಪೋಸ್ಟನಲ್ಲಿ ಕುರಿ ಕೋಳಿಗಳನ್ನು ತಪಾಸಣೆ ಮಾಡಿಲ್ಲಾ, ನೀವೇ ಈ ವರ್ಷ ಜಾತ್ರೆಯನ್ನು ಅಚ್ಚುಕಟ್ಟಾಗಿ ಮಾಡಿದ್ದೀರಿ ಎಂದು ಹೇಳಿದ್ದೀರಿ, ಈ ಸಭೆಯಲ್ಲಿ ಪೊಲೀಸರ ವಿರುದ್ಧ ಮಾತನಾಡುವುದು ಸರಿಯಲ್ಲ, ನಮ್ಮ ಕರ್ತವ್ಯವನ್ನು ನಾವು ಸರಿಯಾಗಿ ಮಾಡುತ್ತಿದ್ದೇವೆ. ನಮ್ಮ ಕರ್ತವ್ಯಕ್ಕೆ ಯಾರೇ ಅಡ್ಡಿ ಬಂದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಖಾರವಾಗಿಯೇ ಹೇಳಿದರು.

ಜಿ.ಪಂ. ಸಿಇಒ ಮೋನಾರೋತ್, ತಹಸೀಲ್ದಾರ್ ಗಳಾದ ಬಸವರಾಜು, ಚೈತ್ರ ತೆಳ್ಳನೂರು, ಗ್ರಾಂ.ಪಂ ಪಿಡಿಒ ಶೋಭರಾಣಿ, ಪಾಳ್ಯ ನಾಡಕಚೇರಿ ಉಪತಹಸೀಲ್ದಾರ್ ವಿಜಯಕುಮಾರ್, ರಾಜಸ್ವ ನಿರೀಕ್ಷಕ ರಂಗಸ್ವಾಮಿ, ಚಿಕ್ಕಲ್ಲೂರು ಮಠದ ಭರತ್ ರಾಜೇ ಅರಸ್ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರೆ: ಮೂಲ‌ ಸೌಕರ್ಯ ಕಲ್ಪಿಸಲು ಮಂಜುನಾಥ್ ಆದೇಶ Read More

ಕನ್ನಡ ರಾಜ್ಯೋತ್ಸವದಲ್ಲಿ ಸಾಧಕರಿಗೆ ಸನ್ಮಾನ

ಮೈಸೂರು: ಶ್ರೀ ದತ್ತಾತ್ರೇಯ ಪ್ರತಿಷ್ಠಾನ ಮತ್ತು ಕರ್ನಾಟಕ ಬಸವೇಶ್ವರ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ, ಶ್ರೀ ಶಿವರಾತ್ರಿಶ್ವರ ಆಟೋಚಾಲಕ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್, ಕಾಲಾ ಶನೇಶ್ವರ ಸ್ವಾಮಿ ದೇವಸ್ಥಾನ ಮುಖ್ಯಸ್ಥರಾದ ಸೂರ್ಯ ದೇವ , ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕಮಲಾ ನಟರಾಜ್ ಮತ್ತಿತರ ಸಾಧಕರನ್ನು ಗೌರವಿಸಲಾಯಿತು.

ಕನ್ನಡ ರಾಜ್ಯೋತ್ಸವದಲ್ಲಿ ಸಾಧಕರಿಗೆ ಸನ್ಮಾನ Read More

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಮಹತ್ವದ ವೇದಿಕೆ ಎನ್ಎಸ್ಎಸ್-ಸಿ.ಆರ್.ದಿನೇಶ್

ಹುಣಸೂರು: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಜ್ಯ ಪ್ರಶಸ್ತಿ ವಿಜೇತರಾದ ಸಿ ಆರ್ ದಿನೇಶ್ ತಿಳಿಸಿದರು.

ತಟ್ಟೆಕೆರೆ ಗ್ರಾಮದಲ್ಲಿ ಅಯೋಜಿಸಲಾಗಿದ್ದ
ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ
ಸಮಾರೋಪ ಭಾಷಣದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ, ಪುಸ್ತಕದ ಜ್ಞಾನಕ್ಕಿಂತ ಹೊರತಾಗಿ ಸಮಾಜದ ನೈಜ ಸಮಸ್ಯೆಗಳನ್ನು ಅರಿಯಲು ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸುತ್ತವೆ ಎಂದು ಹೇಳಿದರು.

ಎನ್ಎಸ್ಎಸ್ ಶಿಬಿರಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ತಪಾಸಣೆ ಶಿಬಿರಗಳು, ಮಹಿಳಾ ಸಬಲೀಕರಣ, ಮತದಾರರ ಜಾಗೃತಿ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ಡಿಜಿಟಲ್ ಸಾಕ್ಷರತೆ ಹಾಗೂ ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿರುವುದನ್ನು ದಿನೇಶ್ ಅವರು ಪ್ರಶಂಸಿಸಿದರು.

ಈ ಎಲ್ಲ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುವಲ್ಲಿ ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.
ಹುಣಸೂರಿನ ತಹಸಿಲ್ದಾರರಾದ ಮಂಜುನಾಥ್ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ರಾಷ್ಟ್ರದ ಭವಿಷ್ಯ ಎಂದು ತಿಳಿಸಿದರು.

ಸೇವೆಯ ಮೂಲಕ ಸ್ವಭಾವ ನಿರ್ಮಾಣವೇ ಎನ್ ಎಸ್ ಎಸ್ ಮೂಲ ತತ್ವ. ಸೇವೆಯ ಅನುಭವದಿಂದ ವಿದ್ಯಾರ್ಥಿಗಳಲ್ಲಿ ಸಹಾನುಭೂತಿ, ನಾಯಕತ್ವ ಮತ್ತು ಶಿಸ್ತು ಗುಣಗಳು ಬೆಳೆಯುತ್ತವೆ ಎಂದು ಹೇಳಿದರು.

ಪ್ರತಿಯೊಬ್ಬ ಎನ್ಎಸ್ಎಸ್ ಸ್ವಯಂಸೇವಕರು ತಮ್ಮ ಜೀವನದಲ್ಲಿಯೂ ಸೇವಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪತ್ರಕರ್ತ ಹನುಗೋಡು ನಟರಾಜ್ ಅವರು ಮಾತಾಡಿ, ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಸಾಧ್ಯವಾಗುತ್ತದೆ. ಉನ್ನತ ಹುದ್ದೆ ಪಡೆದವರು ಅವರ ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರದಲ್ಲಿ ಭಾಗವಹಿಸಿದ ಪರಿಣಾಮವಾಗಿ ಅವರುಗಳು ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ಕೊಡಗಿನ ಈ ಹಿಂದೆ ಜಿಲ್ಲಾಧಿಕಾರಿ ಆಗಿದ್ದ ಐಎಎಸ್ ಅಧಿಕಾರಿ ಶ್ರೀವಿದ್ಯಾ ಇದಕ್ಕೆ ಉದಾಹರಣೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮೇಗೌಡ ಅವರು ಅಧ್ಯಕ್ಷೀಯ ಭಾಷಣ ಮಾಡಿ ರಾಷ್ಟ್ರೀಯ ಸೇವಾ ಯೋಜನೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತಟ್ಟೆಕೆರೆ ಶ್ರೀನಿವಾಸ್ ವಿದ್ಯಾರ್ಥಿನಿಯರು ನಮ್ಮ ಗ್ರಾಮಕ್ಕೆ ಆಗಮಿಸಿ ಬಹಳ ಅಚ್ಚುಕಟ್ಟಾಗಿ ಸ್ವಚ್ಛತೆಯ ಅರಿವು ಮೂಡಿಸಿದ್ದಾರೆ. ನಮ್ಮ ಗ್ರಾಮಸ್ಥರು ಎಲ್ಲಾ ರೀತಿಯಲ್ಲೂ ಅವರಿಗೆ ಸಹಕಾರ ನೀಡಿದ್ದಾರೆ. ಅದಕ್ಕಾಗಿ ಎಲ್ಲಾ ಗ್ರಾಮಸ್ಥರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದೇವರಾಜ್ ಅವರು ವಾರ್ಷಿಕ ವರದಿಯನ್ನು ಮಂಡಿಸಿ, ಸ್ವಯಂಸೇವಕರ ಶ್ರಮ, ತ್ಯಾಗ ಮತ್ತು ಸೇವಾಭಾವವನ್ನು ಸ್ಮರಿಸಿದರು.

ಸಮಾರಂಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಎನ್ಎಸ್ಎಸ್ ಸ್ವಯಂಸೇವಕರಿಗೆ ಹಾಗೂ ತಂಡಗಳಿಗೆ ಪ್ರಮಾಣಪತ್ರಗಳು ಮತ್ತು ಗೌರವ ಪತ್ರಗಳನ್ನು ವಿತರಿಸಲಾಯಿತು.

ಸುಶ್ಮಿತಾ ತಮ್ಮ ಶಿಬಿರ ಅನುಭವಗಳನ್ನು ಹಂಚಿಕೊಂಡು,ಎನ್ಎಸ್ಎಸ್ ಜೀವನದಲ್ಲಿ ತಂದಿರುವ ಸಕಾರಾತ್ಮಕ ಬದಲಾವಣೆಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೌರಮ್ಮ, ಉಪಾಧ್ಯಕ್ಷರಾದ ನಟರಾಜು ,ಉಪನ್ಯಾಸಕರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಯಜಮಾನರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಮಹತ್ವದ ವೇದಿಕೆ ಎನ್ಎಸ್ಎಸ್-ಸಿ.ಆರ್.ದಿನೇಶ್ Read More