ಮುಸಲ್ಮಾನ್ ಬಾಂಧವರಿಗೆ ಎಳ್ಳು ಬೆಲ್ಲ ನೀಡಿ ಭಾವೈಕ್ಯತೆ ಮೆರೆದ ಮೈಸೂರು ಯುವ ಬಳಗ

ಮೈಸೂರು: ಮೈಸೂರು ಯುವ ಬಳಗದವರು
ಮುಸಲ್ಮಾನ್ ಬಾಂಧವರಿಗೆ ಎಳ್ಳು ಬೆಲ್ಲ ನೀಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ನಗರದ ದಿವಾನ್ಸ್ ರಸ್ತೆಯಲ್ಲಿರುವ
ಖಾಸಗಿ ಹೋಟೆಲ್ ನಲ್ಲಿ ಮೈಸೂರು ಯುವ ಬಳಗದ ವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಭಾವೈಕ್ಯತೆ ಬೆಸೆಯುವ ನಿಟ್ಟಿನಲ್ಲಿ ಶುಭ ಕೋರಿದರು.

ಈ ವೇಳೆ ಶಾಸಕ ಹರೀಶ್ ಗೌಡ ಅವರ ಧರ್ಮಪತ್ನಿ ಗೌರಿ ಅವರು ಗೋಪೂಜೆ ನೆರವೇರಿಸಿ ನಂತರ ಮುಸಲ್ಮಾನ್ ಬಾಂಧವರಿಗೆ ಎಳ್ಳು ಬೆಲ್ಲ ನೀಡಿ ಶುಭ ಹಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೌರಿ ಹರೀಶ್ ಗೌಡ,ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡುವ ಯತ್ನಗಳು ನಡೆಯುತ್ತಿವೆ ಎಂದು ಬೇಸರಪಟ್ಟರು.

ಎರಡೂ ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು. ಈ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ರೀತಿ ಎಲ್ಲಾ ಹಬ್ಬಗಳಲ್ಲೂ ಸೌಹಾರ್ದತೆ ಪ್ರತಿ ಜಿಲ್ಲೆಯಲ್ಲೂ ಆದರೆ ಸಮಾಜದಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟರು.

ಈ ವೇಳೆ ಸೌಭಾಗ್ಯ ಗಿರೀಶ್, ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಮೈಸೂರು ಯುವ ಬಳಗದ ಅಧ್ಯಕ್ಷ ರವಿಚಂದ್ರ,ಆನಂದ,ಮಹಾದೇವ್, ಮಂಜುನಾಥ್, ನವೀನ, ಹರೀಶ್ ಗೌಡ,ವಕೀಲ ಸೂರ್ಯ ಕುಮಾರ್, ನಂಜುಂಡಸ್ವಾಮಿ, ಚೆಲುವರಾಜ,ಜ್ಞಾನೇಶ, ಪವನ,ಮಹಿಳಾ ಮುಖಂಡರಾದ ಮಂಗಳ, ಶಾಂತ, ಲೀಲಾ, ರಾಣಿ, ಲೋಕೇಶ್, ನಿತಿನ್, ಸಂತೋಷ್, ಶ್ರೀನಿವಾಸ್ ಶೆಟ್ಟಿ,ಸಮೀರಾ, ಫಾತಿಮಾ, ಹಾಗೂ ಮುಸಲ್ಮಾನ್ ಬಾಂಧವರು ಮತ್ತು ಪೌರಕಾರ್ಮಿಕರು ಮತ್ತಿತರರು ಹಾಜರಿದ್ದರು.

ಮುಸಲ್ಮಾನ್ ಬಾಂಧವರಿಗೆ ಎಳ್ಳು ಬೆಲ್ಲ ನೀಡಿ ಭಾವೈಕ್ಯತೆ ಮೆರೆದ ಮೈಸೂರು ಯುವ ಬಳಗ Read More

ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಪ್ ನಿಂದ ಪಂಗನಾಮ ಅಭಿಯಾನ

ಬೆಂಗಳೂರು: ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ ಪಂಗನಾಮ ಅಭಿಯಾನ‌ ಹಮ್ಮಿಕೊಂಡಿದೆ.

ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಮಾತನಾಡಿದರು.

ದೇಶದಾದ್ಯಂತ ಅದರಲ್ಲೂ ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ನಗರದಲ್ಲಿಯೇ ಅದರಲ್ಲಿಯೂ ವಿದ್ಯಾವಂತರೇ ಸೈಬರ್ ಅಪರಾಧಗಳಿಗೆ ತುತ್ತಾಗಿ ಸಾವಿರಾರು ಕೋಟಿ ತಮ್ಮ ಗಳಿಕೆಯ ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.

ಸೈಬರ್ ಅಪರಾಧಗಳ ವಿರುದ್ಧ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ ಎಲ್ಲಾ ವಾರ್ಡ್ ಗಳಲ್ಲಿ ಮನೆಮನೆಗೆ ತೆರಳಿ ಹಾಗೂ ಜನನಿ ಬಿಡ ಪ್ರದೇಶಗಳಲ್ಲಿ ಪಂಗನಾಮ ವಿಶೇಷ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಸೈಬರ್ ಅಪರಾಧಗಳು ತಕ್ಕಮಟ್ಟಿಗಾದರೂ ನಿಯಂತ್ರಣಕ್ಕೆ ಬರಬೇಕೆಂಬುದು ನಮ್ಮ ಅಭಿಲಾಷೆ ಎಂದು ಜಗದೀಶ್ ಚಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದು ಎಂಟು ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗದಲ್ಲಿ 8000ಕ್ಕೂ ಹೆಚ್ಚು ದೂರುಗಳು ದಾಖಲಾಗಿ 1250 ಕೋಟಿ ರೂಪಾಯಿಗಳು ಕಳ್ಳರ ಪಾಲಾಗಿದೆರುವುದು ಗೊತ್ತಾಗಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೈಬರ್ ಅಪರಾಧವನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಸರ್ಕಾರಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.

ಅತ್ಯಾಧುನಿಕ ತಂತ್ರಜ್ಞಾನವನ್ನು ಕಾಲಕಾಲಕ್ಕೆ ಅಳವಡಿಸಿಕೊಂಡು ಸೈಬರ್ ತಜ್ಞರನ್ನು ನೇಮಕ ಮಾಡಿಕೊಂಡು ಈ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲ ವಾಗಿರುವುದು ಕಂಡುಬರುತ್ತಿದೆ.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸೈಬರ್ ಕ್ರೈಮ್ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ ಜಗದೀಶ್ ಚಂದ್ರ, ಜನತೆಗೆ ಅರಿವು ಮೂಡಿಸುವ ಪಂಗನಾಮ ಅಭಿಯಾನವನ್ನು ಯಶಸ್ವಿಗೊಳಿಸಲು ನಾಗರಿಕರು ಸಹ ನಮ್ಮೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾತನಾಡಿ ಈಗಾಗಲೇ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಅಭಿಯಾನವನ್ನು ನಡೆಸುತ್ತಿದ್ದೇವೆ. ನಾಗರೀಕರಿಂದ ಅಭೂತ ಪೂರ್ವ ಸ್ವಾಗತ ದೊರೆಯುತ್ತಿದ್ದು ಅಲ್ಲಿನ ಸ್ಥಳಿಯರು ಸಹ ನಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ
ಎಂದು ತಿಳಿಸಿದರು.

ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಪ್ ನಿಂದ ಪಂಗನಾಮ ಅಭಿಯಾನ Read More

ಬೈಕ್ ಸವಾರರ ಮೇಲೆ ಒಂಟಿ ಸಲಗ ದಾಳಿ:ಲಾರಿಯಿಂದ ಬಚಾವ್

ಬಂಡೀಪುರ: ಬೈಕ್ ನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಘಟನೆ ಬಂಡೀಪುರ ಅರಣ್ಯಪ್ರದೇಶದಲ್ಲಿ ನಡೆದಿದೆ.

ಅದೃಷ್ಟವಶಾತ್ ಇದೇ ವೇಳೆ ಬಂದ ಲಾರಿಯಿಂದ ಯುವಕರು ಬಚಾವಾಗಿದ್ದು ಈ ವಿಡಿಯೋ ವೈರಲ್ ಆಗಿದೆ.

ಬಂಡೀಪುರ ಮುಖ್ಯರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಒಂಟಿ ಸಲಗ ದಾಳಿ ನಡೆಸಿದೆ.ಒಬ್ಬ ಯುವಕ ಸ್ಥಳದಿಂದ ಓಡಿ ಪಾರಾದರೆ,ಮತ್ತೊಬ್ಬ ಅಸಹಾಯಕನಾಗಿ ಅಲ್ಲೇ ನಿಂತಿದ್ದ.

ಆನೆ ಯುವಕನ ಹತ್ತಿರ ಬರುವ ವೇಳೆಗೆ ಸರಿಯಾಗಿ ಲಾರಿಯೊಂದು ಆಗಮಿಸಿ ಜೋರಾಗಿ ಹಾರ್ನ್ ಮಾಡಿದ್ದರಿಂದ ಗಾಬರಿಯಾಗಿ ಸಲಗ ಹಿಂದೆ ಸರಿದಿದೆ.

ಲಾರಿ ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ,ನಂತರ
ಯುವಕರು ಅದೇ ಲಾರಿ ಹತ್ತಿ ಅಪಾಯದಿಂದ ಪಾರಾಗಿದ್ದಾರೆ.

ಯುವಕರ ಹೆಸರು ಗೊತಗತಾಗಿಲ್ಲ,ಮಾನಂದವಾಡಿಯಿಂದ ಮೈಸೂರಿಗೆ ಬರುತ್ತಿದ್ದರೆಂದು ಹೇಳಲಾಗಿದೆ.

ಬೈಕ್ ಸವಾರರ ಮೇಲೆ ಒಂಟಿ ಸಲಗ ದಾಳಿ:ಲಾರಿಯಿಂದ ಬಚಾವ್ Read More

ದೇಶದ ಅಭಿವೃದ್ಧಿಗೆ ಕಾನೂನು ವ್ಯವಸ್ಥೆ ಅತ್ಯವಶ್ಯಕ-ಹೆಚ್.ಕೆ.ಸ್ವಾಮಿಗೌಡ

ನಂಜನಗೂಡು: ದೇಶದ ಸರ್ವತೋಮುಖ ಅಭಿವೃದ್ಧಿಗೆ ಆ ದೇಶದ ಕಾನೂನು ವ್ಯವಸ್ಥೆ ಅತ್ಯವಶ್ಯಕ,ಹಾಗಾಗಿ ಪ್ರತಿಯೊಬ್ಬರೂ ದೇಶದ ಕಾನೂನು ಚಾಚು ತಪ್ಪದೆ ಪಾಲಿಸಬೇಕು ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಹೆಚ್ಚ್. ‌ಕೆ ಸ್ವಾಮಿಗೌಡ ತಿಳಿಸಿದರು.

ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ‌ ನೀಡಿದ‌ ಅವರು,ಕಾನೂನು ಪಾಲಿಸಿದಾಗ ಮಾತ್ರ ಬಲಿಷ್ಠ ದೇಶವನ್ನು ಕಟ್ಟಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವತ್ ನಾರಾಯಣಗೌಡರು ಮಾತನಾಡಿ,ಯಾವ ದೇಶ ಕಾನೂನಾತ್ಮಕವಾಗಿ ಬಲಿಷ್ಠವಾಗಿರುವುದೊ ಅಂತಹ ದೇಶಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಬಲವಾಗಿರುತ್ತದೆ. ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗಣ್ಣ ಸ್ವಾಮಿ, ರಂಗಸ್ವಾಮಿ, ಹೆಚ್ .ಕೆ .ಪ್ರಕಾಶ್ ,ಟಿ ಕೆ ರವಿ, ಅದಿಲ್ ಹುಸೇನ್,ರೂಪ ,ಮಾಲತಿ ,ವತ್ಸಲ ,ಮೀನಾ,ದಿನೇಶ್, ಗೋಪಲ್ ಕೃಷ್ಣ ,ಸುಮಿತ್ರ ,ವಸಂತ ಕುಮಾರಿ ,ನಾಗರಾಜ ರೆಡ್ಡಿ ,ರಾಮಾನುಜ, ಹರೀಶ್, ಬಸವಣ್ಣ, ಮಲ್ಲಿಕಾರ್ಜುನ, ನಾಗರಾಜು, ಬಿಂದು, ಶೃತಿ ಮತ್ತಿತರರು ಉಪಸ್ಥಿತರಿದ್ದರು.

ದೇಶದ ಅಭಿವೃದ್ಧಿಗೆ ಕಾನೂನು ವ್ಯವಸ್ಥೆ ಅತ್ಯವಶ್ಯಕ-ಹೆಚ್.ಕೆ.ಸ್ವಾಮಿಗೌಡ Read More

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪುಣ್ಯ ಸ್ಮರಣೆ: ಕುವೆಂಪು ಜಯಂತೋತ್ಸವ

ಮೈಸೂರು: ಮೈಸೂರಿನ ಹೂಟಗಳ್ಳಿ ಕೆ ಎಚ್ ಬಿ ಬಡಾವಣೆಯಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ
ಪುಣ್ಯಸ್ಮರಣೆ ಮತ್ತು ರಾಷ್ಟ್ರಕವಿ ಕುವೆಂಪು ಜಯಂತೋತ್ಸವ ಹಮ್ಮಿಕೊಳ್ಳಲಾಯಿತು.

ಬಡಾವಣೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಉದ್ಯಾನವನದಲ್ಲಿ ಸ್ವಾಮೀಜಿಯರವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಂತರ ರಾಷ್ಟ್ರಕವಿ ಕುವೆಂಪು ವೃತ್ತದಲ್ಲಿ ಕುವೆಂಪು ಅವರ ಜಯಂತೋತ್ಸವ ಆಚರಿಸಲಾಯಿತು.

ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಸಂಘದ‌ ಸದಸ್ಯರು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.

ನಂತರ ಎಲ್ಲರಿಗೂ ಸಿಹಿ ವಿತರಣೆ ಮಾಡಿದರು.ಕಾರ್ಯಕ್ರಮದಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ದಾಸೇಗೌಡ, ನಾಗೇಶ್, ಸುರೇಶ್, ಮೋಹನ್, ಗಿರೀಶ್, ಶಂಕರ್ ಲಿಂಗಯ್ಯ, ಪ್ರಕಾಶ್, ಚಂದ್ರು, ರಕ್ತದಾನಿ ಮಂಜು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪುಣ್ಯ ಸ್ಮರಣೆ: ಕುವೆಂಪು ಜಯಂತೋತ್ಸವ Read More

ಅಪ್ಪು ಸ್ಮರಣೆಯಲ್ಲಿ ‌ಅನ್ನದಾನ ಕಾರ್ಯಕ್ರಮ

ಮೈಸೂರು: ಪುನೀತ್ ರಾಜಕುಮಾರ್ ಅವರ ಮೂರನೆ‌ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಮೈಸೂರಿನ ಸಿದ್ದಾರ್ಥ ನಗರದ ಲಲಿತಮಹಲ್ ಪ್ಯಾಲೇಸ್ ಮುಖ್ಯ ರಸ್ತೆ ಸಮೀಪ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕರ್ನಾಟಕ ಯುವ ರಕ್ಷಣ ವೇದಿಕೆ, ಬೀದಿಬದಿ ವ್ಯಾಪಾರಿ ಸಂಘ ದವರು ಮತ್ತು ಅಪ್ಪು ಅಭಿಮಾನಿಗಳು ಸೇರಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಪುನೀತ್ ರಾಜಕುಮಾರ್ ಅವರ ದೊಡ್ಡ ಭಾವಚಿತ್ರ ಇಟ್ಟು ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.

ನಂತರ ನೂರಾರು ಮಂದಿ ಆಗಮಿಸಿ ಅಪ್ಪು‌‌ಭಾವಚಿತ್ರಕ್ಕೆ‌ ನಮಿಸಿ ಗುಣಗಾನ ಮಾಡಿದರು.ನಂತರ ಅನ್ನಪ್ರಸಾದ ಸ್ವೀಕರಿಸಿದರು.

ಅಪ್ಪು ಸ್ಮರಣೆಯಲ್ಲಿ ‌ಅನ್ನದಾನ ಕಾರ್ಯಕ್ರಮ Read More

ಮಧ್ಯಸ್ಥಿಕೆಗಾರರು ಪ್ರಕರಣಗಳ ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಿ: ರವೀಂದ್ರ ಹೆಗಡೆ

ಮೈಸೂರು: ಮಧ್ಯಸ್ಥಿಕೆಗಾರರು ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗದೆ ಇರಬಹುದು, ಆದರೆ ಅವುಗಳನ್ನು ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಹೆಗಡೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಕರ್ನಾಟಕ ಮಧ್ಯಸ್ಥಿಕಾ ಕೇಂದ್ರ, ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಮೈಸೂರು, ಚಾಮರಾಜನಗರ ಮತ್ತು ಕೊಡಗು-ಮಡಿಕೇರಿ ಜಿಲ್ಲೆಯ ಮಧ್ಯಸ್ಥಿಕಗಾರರಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು.

ಮಧ್ಯಸ್ಥಿಕಗಾರರು ಬಹಳ ಹಿಂದಿನಿಂದ ನೇಮಕವಾಗಿದ್ದಾರೆ. ತುಂಬಾ ಪ್ರಕರಣದಲ್ಲಿ ಅಂಕಿ ಅಂಶ ಗಮನಿಸಿದಾಗ ಇನ್ನೂ ಸುಧಾರಣೆ ಅಗಬೇಕು ಅನ್ನಿಸಿದೆ, ಸಮಯ ಪಾಲನೆ ಮಾಡಬೇಕು, ನಿಮ್ಮ ಸಮಯ ಪಾಲನೆ ಹಾಗೂ ಪ್ರಕರಣದ ಫಲಿತಾಂಶಕ್ಕೆ ಜನರು‌ ಅಕರ್ಷಿತರಾಗಬೇಕು ಎಂದು ಸಲಹೆ‌ ನೀಡಿದರು.

ಪ್ರತಿ ಜಿಲ್ಲೆಗೆ ೨೦ ಮಂದಿ ಆಯ್ಕೆ ಮಾಡಲಾಗಿದೆ. ಈ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶೆ ಸಾವಿತ್ರಿ ಎಸ್.ಕುಜ್ಜಿ ಮಾತನಾಡಿ, ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ಹೆಚ್ಚಿದೆ. ಹೆಚ್ಚಿನ‌ ಪ್ರಮಾಣದಲ್ಲಿ ಮದ್ಯಸ್ಥಿಕೆಗಾರರು ಪಾತ್ರವಹಿಸಬೇಕು,ಎಲ್ಲ ಪ್ರಕರಣ ಒಂದೆ ರೀತಿಯಲ್ಲಿರುವುದಿಲ್ಲ. ಇದನ್ನ ಗಮನಹರಿಸಿ ಪ್ರಕರಣ ಬಗೆಹರಿಸಲು ಮುಂದಾಗಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿ, ವ್ಯಾಜ್ಯ ಪ್ರಕರಣ ಪರಿಹರಿಸುವಲ್ಲಿ ಮಧ್ಯಸ್ಥಿಕೆಗಾರರ ಪಾತ್ರ ದೊಡ್ಡದು, ತಾಳ್ಮೆ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಧ್ಯಸ್ಥಿಕ ತರಬೇತುದಾರರಾದ ಎಸ್.ಅರ್‌.ಅನುರಾಧಾ ಮತ್ತು ಬೃಂದಾ ನಂದಕುಮಾರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ ಮತ್ತಿತರರು ಹಾಜರಿದ್ದರು.

ಮಧ್ಯಸ್ಥಿಕೆಗಾರರು ಪ್ರಕರಣಗಳ ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಿ: ರವೀಂದ್ರ ಹೆಗಡೆ Read More

ಸಾವಿತ್ರಿಬಾಯಿ ಅವರ ವ್ಯಕ್ತಿತ್ವ ನಮಗೆಲ್ಲರಿಗೂ ಸ್ಫೂರ್ತಿ: ಜಿ.ಟಿ.ದೇವೇಗೌಡ

ಮೈಸೂರು: ಮಹಿಳೆಯೊಬ್ಬರು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂಬ ಭಾವನೆ ಇದ್ದ ಸಮಾಜದಲ್ಲಿ ದಿಟ್ಟತನದಿಂದ ಶಿಕ್ಷಕ ತರಬೇತಿ ಪಡೆದು ಅಂದುಕೊಂಡಿದ್ದನ್ನು ಸಾಧಿಸಿದ ಗಟ್ಟಿಗಿತ್ತಿ ಸಾವಿತ್ರಿಬಾಯಿ ಫುಲೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಮೈಸೂರಿನ ಶ್ರೀರಾಂಪುರದಲ್ಲಿರುವ ಟಿ.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ಸಾವಿತ್ರಿಬಾಯಿಫುಲೆ ಶೀಕ್ಷಕಿಯರ ಸಂಘದವತಿಯಿಂದ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಸಾವಿತ್ರಿಬಾಯಿಫುಲೆ ವಿಚಾರ ಸಂಕಿರಣ ಮತ್ತು ರಾಜ್ಯ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾವಿತ್ರಿಬಾಯಿ ಫುಲೆ ಅವರು ಭಾರತದ ಮೊಟ್ಟಮೊದಲ ಶಿಕ್ಷಕಿ, ಆಧುನಿಕ ಶಿಕ್ಷಣದ ಜನನಿ. ಸಾಮಾಜಿಕ ಹಾಗೂ ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಜೊತೆಗೆ ಸಾಹಿತಿ. ಮಹಾರಾಷ್ಟ್ರದಲ್ಲಿ ತರಬೇತಿ ಹೊಂದಿದ ಮೊದಲ ಶಿಕ್ಷಕಿ ಎಂದು ತಿಳಿಸಿದರು.

ಮಹಿಳೆಯರು ಮನೆಯಿಂದ ಹೊರಬಂದು ಸಾಮಾಜಿಕ ಚಳವಳಿಯಲ್ಲಿ ಪಾಲ್ಗೊಳ್ಳಲು ಹಿಂಜರಿಯುತ್ತಿದ್ದ ಕಾಲದಲ್ಲಿ ಪತಿ ಜ್ಯೋತಿ ಬಾ ಫುಲೆ ಅವರ ಜೊತೆಗೂಡಿ ಹದಿನಾಲ್ಕು ಶಾಲೆಗಳನ್ನು ಸ್ಥಾಪಿಸಿದವರು.
ಸಾವಿತ್ರಿ ಬಾಯಿ ಪುಲೆ ವರು ಪಾಠ ಮಾಡಲು ಶಾಲೆಗೆ ಹೊರಟಾಗ ಊರಿನ ಜನರು ಲೇವಡಿ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಕಲ್ಲು ತೂರುವುದು, ಸಗಣಿ ಎರಚುವುದು, ಮೈಮೇಲೆ ಕೆಸರು ಸುರಿಯುವುದು ಹೀಗೆ ಕಿರುಕುಳ ಕೊಟ್ಟಿದ್ದನ್ನು ಸಹಿಸಿಕೊಂಡು ಕೈಚೀಲದಲ್ಲಿ ಇನ್ನೊಂದು ಸೀರೆ ಇಟ್ಟುಕೊಂಡು ಮಕ್ಕಳು ಬರುವ ಮೊದಲೇ ಶಾಲೆಗೆ ಹೋಗಿ ಸೀರೆ ಬದಲಾಯಿಸಿ ಪಾಠ ಮಾಡಲು ಸಿದ್ಧರಾಗುತ್ತಿದ್ದರು. ಅವರ ಈ ಎಲ್ಲಾ ಹೋರಾಟದಲ್ಲೂ ಭುಜಕ್ಕೆ ಭುಜ ಕೊಟ್ಟು ನಿಂತವರು ಪತಿ ಜ್ಯೊತಿಬಾ ಪುಲೆ ಅವರು ಎಂದು ಜಿ.ಟಿ.ಡಿ ಹೇಳಿದರು.

ಬ್ರಿಟಿಷ್ ಸರ್ಕಾರ ಅವರ ಕಾರ್ಯವನ್ನು ಮೆಚ್ಚಿ ಭಾರತದ ಮೊದಲ ಶಿಕ್ಷಕಿ ಎಂಬ ಮನ್ನಣೆ ನೀಡಿತು. ಸ್ತ್ರೀಯರು ಸಹ ಪುರುಷರಂತೆ ಶಿಕ್ಷಣ ಪಡೆಯಬೇಕು ಎಂಬುದು ಈ ದಂಪತಿಗಳ ಹಂಬಲವಾಗಿತ್ತು. ಬಾಲ್ಯವಿವಾಹ, ಸತಿ ಸಹಗಮನ, ವಿಧವೆಯರಿಗೆ ಕೇಶಮುಂಡನ ಮುಂತಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಟ ನಡೆಸಿದ ಅವರು, ಮಹಿಳೆಯರಿಗಾಗಿಯೇ ಶಾಲೆಗಳು, ಅಬಲಾಶ್ರಮಗಳನ್ನು ಸ್ಥಾಪಿಸಿದರು ಎಂದು ವಿವರಿಸಿದರು.

ಪ್ಲೇಗ್ ರೋಗಿಗಳ ಸೇವೆ ಮಾಡುತ್ತಲೇ ಸ್ವತಃ ಆ ರೋಗಕ್ಕೆ ಬಲಿಯಾದರು ಸಾವಿತ್ರಿ ಬಾಯಿ ಫುಲೆ.ಅವರು ನಮ್ಮೆಲ್ಲರಿಗೂ ಆದರ್ಶ ತೋರಿದ ಧೀಮಂತ ಮಹಿಳೆ.

ಸಮಾರಂಭದಲ್ಲಿ ಉಪ ನಿರ್ದೇಶಕ ಜವರೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ರಾಷ್ಟ್ರೀಯ ಅಧ್ಯಕ್ಷೆ ಡಾ. ಲತಾ ಎಸ್. ಮುಳ್ಳೂರು, ಜಿಲ್ಲಾಧ್ಯಕ್ಷೆ ಸರಸ್ವತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರಕಾಶ್, ಮಹೇಶ್, ಮಹದೇವ್, ರವಿಪ್ರಸನ್ನ, ರವಿಪ್ರಸನ್ನ, ಶಿವಮೂರ್ತಿ ಮತ್ತಿತರರು ಹಾಜರಿದ್ದರು.

ಸಾವಿತ್ರಿಬಾಯಿ ಅವರ ವ್ಯಕ್ತಿತ್ವ ನಮಗೆಲ್ಲರಿಗೂ ಸ್ಫೂರ್ತಿ: ಜಿ.ಟಿ.ದೇವೇಗೌಡ Read More

ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ:ಸಿಎಂ

ಮೈಸೂರು: ದುಷ್ಟರ ಶಿಕ್ಷೆ, ಶಿಷ್ಟರ ರಕ್ಷೆ ದಸರೆಯ ಪ್ರತೀಕ. ವಿಜಯನಗರ ಅರಸರ ಜಯದ ಸಂಕೇತವಾಗಿ ಪ್ರಾರಂಭಿಸಲಾದ ಆಯುಧಪೂಜೆ, ದಸರಾ ಉತ್ಸವವನ್ನು ಮೈಸೂರು ಒಡೆಯರ್ ಅವರು ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದು ಹೇಳಿದರು.

ದಸರಾ ಉತ್ಸವದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಸರ್ಕಾರದ ಜಾಹೀರಾತಿನ ಕುರಿತ ಪ್ರಶ್ನೆಗೆ ಸಿಎಂ ಮೇಲಿನಂತೆ ಉತ್ತರಿಸಿದರು.

ದುಷ್ಟರ ಸಂಹಾರ ಆಗಬೇಕಿದೆ ಎಂಬ ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು, ಈ ರೀತಿ ಸುಳ್ಳು ಮಾತನಾಡುವುದು ತಪ್ಪು ಕೋರ್ಟ್​ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಜನತೆಗೆ ದಸರಾ ಹಬ್ಬದ ಶುಭ ಕೋರಿದ ಸಿದ್ದು, ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ ಶತ್ರುಗಳು, ಅಭಿಮಾನಿಗಳೂ ಇರುತ್ತಾರೆ, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದರು.

ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ನನಗೆ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಇರುವ ಕಾರಣದಿಂದ ದೀರ್ಘಕಾಲದಿಂದ ರಾಜಕೀಯದಲ್ಲಿರಲು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದರೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ತಿಳಿಸಿದರು.

ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ:ಸಿಎಂ Read More

ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು-ಸಿಎಂ

ಬೆಂಗಳೂರು:ನ್ಯಾಯಾಲಯಗಳಲ್ಲಿ ನ್ಯಾಯ ಸಿಗದೇ ಹೋಗದರೂ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಅದೇ ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ‌ ಹೇಳಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ‌ ವತಿಯಿಂದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಮಾತನಾಡಿದರು.

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ‌ ಅವರು ಮಹಾತ್ಮ ಗಾಂಧಿ ಅವರ ಮಾತನ್ನು ಸ್ಮರಿಸಿದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ.ಅವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದು ತಿಳಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ಪ್ರಬುದ್ಧ ರಾಜಕಾರಣಿ. ಇವರುಗಳ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಸಿಎಂ ಹೇಳಿದರು.

ಗಾಂಧೀಜಿ ಅವರ ಹೋರಾಟದಿಂದಾಗಿ ನಾವು ಸ್ವಾತಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎಂಬ ಗೌರವ ಸಿಕ್ಕಿರುವುದು ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದು ‌ಸಿದ್ದು‌ ಬಣ್ಣಿಸಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ್, ಗಾಂಧಿ ಸ್ಮಾರಕ‌‌ ನಿಧಿಯ ಊಡೆ ಪ.ಕೃಷ್ಣ,ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್ ಲೇಖಕ ನಟರಾಜ್ ಹುಳಿಯಾರ್ ಮತ್ತಿತರರು ಉಪಸ್ಥಿತರಿದ್ದರು.

ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು-ಸಿಎಂ Read More