ಚನ್ನರಾಯಪಟ್ಟಣ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರೂ ಕೈ ಸದಸ್ಯರೂ,ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಬಾಗೇಗೌಡ ಅವರು ಇಂದು ನಿಧನರಾಗಿದ್ದಾರೆ
ಚನ್ನರಾಯಪಟ್ಟಣ ತಾಲೂಕು, ಹಿರೀಸಾವೆ ಹೋಬಳಿ, ಚೆನ್ನೆನಹಳ್ಳಿ ಗ್ರಾಮದ ಬಾಗೇಗೌಡ ಅವರಿಗೆ ಇನ್ನೂ 57 ವರ್ಷಗಳು.
ನಿನ್ನೆ ಇದ್ದಕ್ಕಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ,ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ವೈದ್ಯರು ಏನಾಗಿದೆ ಎಂದು ತಿಳಿಯುವ ಮೊದಲೇ ಬಾಗೇಗೌಡರು ಇಹಲೊಕ ತ್ಯಜಿಸಿದ್ದಾರೆ.
ಬಾಗೇಗೌಡ ಅವರು ಪತ್ನಿ, ಪುತ್ರ, ಪುತ್ರಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ಬಾಗೇಗೌಡ ಅವರು ಗ್ರಾಮದಲ್ಲಿ ಒಳ್ಳೆಯ ಕೆಲಸ ಮಾಡುವ ಮೂಲಕ ಜನಾನುರಾಗಿಯಾಗಿದ್ದರು.ಹಾಗಾಗಿ ಅವರ ನಿಧನಕ್ಕೆ ಇಡೀ ಊರೇ ಕಂಬನಿ ಮಿಡಿದಿದೆ.
ಬಂಧು-ಬಳಗ ಅಷ್ಟೇ ಅಲ್ಲದೆ ಸಾವಿರಾರು ಸ್ನೇಹಿತರು ಸುತ್ತಮುತ್ತಲಿನ ಗ್ರಾಮಸ್ಥರು ಕಾಂಗ್ರೆಸ್ ಹಿರಿಯ ನಾಯಕರು ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.