ಮೈಸೂರು: ಶ್ರೀ ಬಾಲಕೃಷ್ಣಾನಂದ ಮಹಾಸಂಸ್ಥಾನಮ್ ತಲಕಾಡು ಶ್ರೀ ಮಠದ ಪೀಠಾಧಿಪತಿಗಳಾದ ಭಾಗವತೀಯ ಜಗದ್ಗುರು ಶಂಕರಾಚಾರ್ಯ ಶ್ರೀ ಗೋವಿಂದಾನಂದ ಸರಸ್ವತಿ ಮಹಾಸ್ವಾಮಿಗಳವರ 17ನೇ ಚಾತುರ್ಮಾಸ್ಯ ಆಚರಿಸಲಾಗುತ್ತಿದೆ.
ಇದಕ್ಕೆ ಸಂಬಂಧಪಟ್ಟಂತೆ ಜಯನಗರ ಶ್ರೀರಾಮಮಂದಿರದಲ್ಲಿ ನಾಳೆ 29 ರಂದು ಸಂಜೆ 5.30ಕ್ಕೆ ಚಾತುರ್ಮಾಸ್ಯ ಧರ್ಮಪ್ರಚಾರ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಬ್ರಾಹ್ಮಣ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿಪ್ರ ಸಮುದಾಯದವರು ಆಸ್ಥಿಕ ಭಕ್ತಮಹಾಶಯರು ಭಾಗವಹಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಡಿ.ಟಿ. ಪ್ರಕಾಶ್
ಮನವಿ ಮಾಡಿದ್ದಾರೆ.
ಈ ಧರ್ಮ ಪ್ರಚಾರ ಸಭೆಯಲ್ಲಿ ತಲಕಾಡು ಮಠದ ಭಾಗವತೀಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಗೋವಿಂದಾನಂದ ಸರಸ್ವತಿ ಮಹಾಸ್ವಾಮಿಗಳು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ ಎಂದು
ಅಖಿಲಕರ್ನಾಟಕ ಬ್ರಾಹ್ಮಣ ಮಹಾಸಭಾ
ರಾಜ್ಯ ಉಪಾಧ್ಯಕ್ಷ ಡಿ.ಟಿ.ಪ್ರಕಾಶ್ ಹಾಗೂ
ಬ್ರಾಹ್ಮಣ ಧರ್ಮಸಹಾಯ ಸಭಾ ನಿಕಟಪೂರ್ವ ಅಧ್ಯಕ್ಷ
ಎನ್. ಶ್ರೀನಿವಾಸ್ ತಿಳಿಸಿದ್ದಾರೆ