ಮಕ್ಕಳು ಪರಿಸರ ಸಹಜ ಶಿಕ್ಷಣಕ್ಕೆ ಮರಳಬೇಕಿದೆ : ಸತೀಶ್ ತಿಪಟೂರು,

Spread the love

ಮೈಸೂರು: ರಂಗಾಯಣವು ಮಕ್ಕಳು ಪೋಷಕರು ಮತ್ತು ಶಿಕ್ಷಕರನ್ನು ಪ್ರಯೋಗದೊಡನೆ ಅನುಸಂಧಾನ ಮಾಡಬೇಕು ಎಂದು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.

ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಆರ್.ಎಲ್.ಎಚ್.ಪಿ ಮೈಸೂರು ಮತ್ತು ಯುನೆಸೆಫ್, ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ಸಂಸತ್ -24 ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನೆ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಅಂಗೈ ಜಗತ್ತಿನಲ್ಲಿ ಶಿಕ್ಷಣ ಸಿಗುತ್ತಿದೆ,
ಮಕ್ಕಳು ಪರಿಸರ ಸಹಜ ಶಿಕ್ಷಣಕ್ಕೆ ಮರಳಬೇಕಿದೆ ಎಂದು ಹೇಳಿದರು.

ಸಂವಿಧಾನದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶಗಳು ಮತ್ತು ಮಕ್ಕಳಿಗಿರುವ ಸೌಲಭ್ಯಗಳನ್ನು ನಾವೆಲ್ಲರೂ ಒದಗಿಸಿಕೊಡಬೇಕು.

ಪ್ರಸ್ತುತ ಸ್ಥಿತಿಯಲ್ಲಿ ಮಕ್ಕಳ ವಿಕಾಸ ಹೇಗೆ ಎಂದು ನೋಡಲು ಇದು ಸರಿಯಾದ ಕಾಲ ಅನಿಸುತ್ತದೆ. ಭಾಗವಹಿಸುವಿಕೆಯು ವಿಕಾಸದ ಭಾಗವಾಗಬೇಕು ಎಂದು ಸತೀಶ್ ತಿಪಟೂರು ತಿಳಿಸಿದರು.

ಕಾರ್ಯಕ್ರಮದ ಕುರಿತು ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕಿ ಸರಸ್ವತಿ ಅವರು ಮಾತನಾಡಿ, ಜಿಲ್ಲೆಯ ಮಕ್ಕಳ ಸ್ಥಿತಿಗತಿಗಳು ಮಕ್ಕಳ ಬದುಕು, ಆರೋಗ್ಯ, ರಕ್ಷಣೆ, ಶಿಕ್ಷಣ, ಅಭಿವೃದ್ಧಿ ಮತ್ತು ಭಾಗವಹಿಸುವಿಕೆ ಹಿನ್ನೆಲೆಯಲ್ಲಿ ವಿಶ್ಲೇಷಿಸಲು ಮತ್ತು ಮಕ್ಕಳ ಅವಶ್ಯಕತೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಆಗ್ರಹಿಸಲು, ಮುಂದೆ ನಡೆಯುವ ಮಕ್ಕಳ ಸಂಸತ್ತಿನಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿ ಸಮಸ್ಯೆಗಳ ಕುರಿತು ಚರ್ಚಿಸಬೇಕಿದೆ ಈ ಹಿನ್ನೆಲೆಯಲ್ಲಿ ಇಂದು ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಧನಂಜಯ ಎಲಿಯೂರು, ಸದಸ್ಯರು ಮಕ್ಕಳ ಕಲ್ಯಾಣ ಸಮಿತಿ, ಮೈಸೂರು ಇವರು ಮಕ್ಕಳಿಗೆ ವಿಶ್ವ ಮಕ್ಕಳ ಒಡಂಬಡಿಕೆ ಜಾರಿ ಹಿನ್ನೆಲೆ ಮತ್ತು ಪ್ರಮುಖ ಹಕ್ಕುಗಳು ಕರ್ತವ್ಯಗಳ ಕುರಿತು ತಿಳಿಸಿದರು.

ಮೈಸೂರಿನಲ್ಲಿ ಮಕ್ಕಳ ಸ್ಥಿತಿ-ಗತಿ, ಸಮಸ್ಯೆಗಳ ಕುರಿತು ವಿವರಿಸಲಾಯಿತು. ಇಲ್ಲಿಯವರೆಗೂ ಮೈಸೂರಿನ ರಾಜಕೀಯ ಪ್ರತಿನಿಧಿಗಳು ಮಕ್ಕಳ ಪರವಾಗಿ ಕೇಳಿರುವ ಪ್ರಶ್ನೆಗಳು ಕುರಿತು ವಿವರವಾಗಿ ತಿಳಿಸಲಾಯಿತು.

ಯೋಗೇಶ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಕ್ಕಳ ಸಂಸತ್ತಿನಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿ ಸಮಸ್ಯೆಗಳ ಕುರಿತು ಚರ್ಚಿಸಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿಮಹಿಳಾ ವಿ.ವಿ. ವಿಜಯಪುರ ವಿಶ್ರಾಂತ ಕುಲಪತಿಗಳು
ಸಬೀಹ ಭೂಮಿಗೌಡ ವಹಿಸಿದ್ದರು.

ಪ್ರಸನ್ನ ಕುಮಾರ್ ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕ ಮೈಸೂರು ನಗರ, ಪ್ರೊ. ಭೂಮಿಗೌಡ, ಮಕ್ಕಳ ಪ್ರತಿನಿಧಿಯಾಗಿ ಕುಮಾರಿ ಹೇಮಾ ಹಾಗೂ ರಿತೇಶ್, ವಿವಿಧ ತಾಲೂಕುಗಳಿಂದ ಆಗಮಿಸಿದಂತಹ 35 ಮಕ್ಕಳು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.