ಚಿಲಕುಂದ ಸ ‌ಹಿ ಪ್ರಾ ಶಾಲೆ‌ ಮಕ್ಕಳಿಗೆ ಕೆಪಿಪಿ ರೈತಪರ್ವ‌ ದಿಂದ ನೋಟ್ ಬುಕ್ ವಿತರಣೆ

Spread the love

ಹುಣಸೂರು: ಹುಣಸೂರು ತಾಲೂಕು ಚಿಲಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ವತಿಯಿಂದ ನೋಟ್ ಬುಕ್, ಪೆನ್ಸಿಲ್ ಮತ್ತು ಪೆನ್ನುಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಅಧ್ಯಕ್ಷ ಶಿವಣ್ಣ ಮತ್ತು ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಅವರ ನೇತೃತ್ವದಲ್ಲಿ ಎಲ್ಲ ಪದಾಧಿಕಾರಿಗಳ ಸಹಮತದಲ್ಲಿ ಸರ್ಕಾರಿ ಶಾಲೆಗಳ ಸುಮಾರು ಸಾವಿರ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ಕೊಡುವ ಗುರಿಯನ್ನು ಹೊಂದಲಾಗಿದ್ದು ಈಗಾಗಲೇ 600 ವಿದ್ಯಾರ್ಥಿಗಳಿಗೆ ಇವುಗಳನ್ನು ನೀಡಲಾಗಿದೆ.

ಇಂದು ಚಿಲಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹುಣಸೂರು ತಾಲೂಕು ತಾಸಿಲ್ದಾರ್ ಮಂಜುನಾಥ್, ಬಿಇಒ ಮಹದೇವ್, ಹುಣಸೂರು ಡಿ ವೈ ಎಸ್ ಪಿ ಗೋಪಾಲಕೃಷ್ಣ, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುನಿಯಪ್ಪ, ನಗರಸಭೆ ಆಯುಕ್ತರಾದ ಮಾನಸ‌ ಪಾಲ್ಗೊಂಡಿದ್ದರು.

ಈ ವೇಳೆ ತಹಸಿಲ್ದಾರ್ ಮಂಜುನಾಥ್ ಅವರು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವದ ಕಾರ್ಯವನ್ನು ಶ್ಲಾಘಿಸಿದರು.

ಇದೇ ವೇಳೆ ಶಾಲೆಯ 115 ಮಕ್ಕಳಿಗೂ ಉಪ್ಪಿಟ್ಟು ಮತ್ತು ಕೇಸರಿ ಬಾತ್ ಅನ್ನು ಊಟಕ್ಕೆ ಬಡಿಸಲಾಯಿತು ಮಕ್ಕಳು ಅತ್ಯಂತ ಸಂಭ್ರಮದಿಂದ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಕಾರ್ಯದರ್ಶಿ ಹಾಗೂ ವಕೀಲರಾದ ಮಂಜು, ಮಡಿವಾಳ ಸಂಘದ ತಾಲೂಕು ಅಧ್ಯಕ್ಷ ರವಿ, ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ಚಿಲಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮಾದೇವಿ ಜಿ, ಶಿಕ್ಷಕರುಗಳಾದ ಪುಷ್ಪಲತಾ, ಸುಶೀಲ, ನಜತ್ ಬಾನು, ಸಂತೋಷ್, ಹರೀಶ್ ಸೀರಿದಂತೆ ಅನೇಕರು ಹಾಜರಿದ್ದರು.

ಇದೇ ವೇಳೆ ಶಾಲೆಯ ಶಿಕ್ಷಕಿಯರು ಮತ್ತು ಎಲ್ಲಾ ಮಹಿಳೆಯರಿಗೆ ಕರ್ನಾಟಕ ಪ್ರಜಾ ಪಾರ್ಟಿ ರೈತಪರ್ವ ತಾಲೂಕು ಅಧ್ಯಕ್ಷ ಚೆಲುವರಾಜು ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಅವರು ಮಹಿಳಾ ದಿನಾಚರಣೆಯ ಶುಭ ಕೋರಿದರು.