ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ವತಿಯಿಂದ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ
ಪೌರಕಾರ್ಮಿಕ ಮಹಿಳೆಯರು,
ತೃತೀಯಲಿಂಗಗಳಿಗೆ ಬಾಗಿನ ವಿತರಿಸಲಾಯಿತು.
ಚಾಮುಂಡಿ ಬೆಟ್ಟದ ಪಾದದಲ್ಲಿ ಪೌರಕಾರ್ಮಿಕ ಮಹಿಳೆಯರಿಗೆ ಹಾಗೂ ತೃತೀಯಲಿಂಗಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಅವರು ಸೀರೆ, ಕುಂಕುಮ, ಅರಿಶಿಣ, ಬಳೆ ಸಹಿತ ಬಾಗಿನ ವಿತರಿಸಿ ಶುಭ ಕೋರಿದರು.

ಈ ವೇಳೆ ನಾಗಲಕ್ಷ್ಮಿ ಅವರು ಸಮಸ್ತ ನಾಡಿನ ಜನತೆಗೆ ಚಾಮುಂಡೇಶ್ವರಿ ವರ್ಧಂತಿ ಶುಭಾಶಯ ಕೋರಿದರು.
ವಿಶೇಷವಾಗಿ ಮಹಿಳೆಯರಿಗೆ ಚಾಮುಂಡೇಶ್ವರಿ ತಾಯಿ ಹೆಚ್ಚು ಶಕ್ತಿ ನೀಡಲಿ, ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಗಳನ್ನು ಗುರುತಿಸಿ ಬಾಗಿನ ನೀಡುವ ಸೌಭಾಗ್ಯ ಕಲ್ಪಿಸಿಕೊಟ್ಟ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ಗಳಿಗೆ ಧನ್ಯವಾದ ತಿಳಿಸಿದರು,
ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಕೆವಿಕೆ ಫೌಂಡೇಶನ್ ಅಧ್ಯಕ್ಷರಾದ ಖುಷಿವಿನು, ಸವಿತಾ ಘಾಟ್ಕೆ, ಜಯಶ್ರೀ ಶಿವರಾಂ, ಚಿಕ್ಕಮಂಗಳೂರು
ಮುರಾಜಿ ಶಾಲೆಯ ಪ್ರಾಂಶುಪಾಲರಾದ ದೀಪ, ಅಶ್ವಿನಿ ಗೌಡ, ಸುಶೀಲ, ಸರಸ್ವತಿ ಹಲಸಗಿ, ರಾಣಿ ಪ್ರಭ ಮತ್ತಿತರರು ಹಾಜರಿದ್ದರು.
