ದಸರಾ ದೀಪಾಲಂಕಾರ ಸೌಂದರ್ಯ ಕಣ್ತುಂಬಿಕೊಂಡ ಸಿಎಂ

Spread the love

ಮೈಸೂರು: ದಸರಾ ಹಬ್ಬದ‌‌ ಪ್ರಯುಕ್ತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಖುಷಿಪಟ್ಟರು.

ಅಂಬಾರಿ ಬಸ್ಸಿನಲ್ಲಿ ಶುಕ್ರವಾರ ನಗರ ಪ್ರದಕ್ಷಿಣೆ ಹಾಕಿದ ಸಿಎಂ,ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ದೀಪಾಲಂಕಾರದ ಅದ್ಭುತ ಆಕರ್ಷಣೆಗೆ ಮನಸೋತು ಸಂತಸ‌ ವ್ಯಕ್ತಪಡಿಸಿದರು.

ನಗರದ ರಾಮಸ್ವಾಮಿ ವೃತ್ತದಿಂದ ಆರಂಭಿಸಿ, ಬಸವೇಶ್ವರ ವೃತ್ತ, ವಿದ್ಯಾಪೀಠ ವೃತ್ತ, ಹಾರ್ಡಿಂಜ್ ಸರ್ಕಲ್, ಕೆ.ಆರ್.ಸರ್ಕಲ್, ಆಯುರ್ವೇದ ಕಾಲೇಜು ವೃತ್ತ, ಬಂಬೂಬಜಾರ್ ರಸ್ತೆ, ಹೈವೇ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದ ವರೆಗೂ ದೀಪಾಲಂಕಾರ ವೀಕ್ಷಿಸಿದರು.

ಅಂಬಾರಿ ಬಸ್ ಮೂಲಕ ಸಿಟಿ ರೌಂಡ್ಸ್ ಹಾಕಿದ ಸಿಎಂ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಜಿಪಂ ಸಿಇಒ ಯುಕೇಶ್ ಕುಮಾರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಅಧೀಕ್ಷಕ ಇಂಜಿನಿಯರ್ ಸುನೀಲ್, ಎಇಇ ಅನಿತಾ ಮತ್ತಿತರರು ಸಾತ್ ನೀಡಿದರು.