ಮೈಸೂರು: ಬುಧವಾರ ನೀಧನರಾದ ಎಸ್.ಎಲ್.ಬೈರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಸಂತಾಪ ಸೂಚಿಸಲಾಯಿತು.
ನಗರದ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗ, ಜನಮನ ವೇದಿಕೆ, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ವತಿಯಿಂದ ಸಂತಾಪ ಸೂಚಕ ಸಭೆ ಹಮ್ಮಿಕೊಳ್ಳಲಾಯಿತು
ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಭಾಗವಹಿಸಿದ್ದವರೆಲ್ಲ ತೀವ್ರ ದುಃಖ ವ್ಯಕ್ತಪಡಿಸಿದರು.
ಬೈರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ
ಅವರ ಭಾವಚಿತ್ರ ಹಿಡಿದು
ಮೇಣದಬತ್ತಿ ಬೆಳಗಿಸಿ,ಶಾಂತಿ ಮಂತ್ರ ಜಪಿಸಿ
ಸಂತಾಪ ಸೂಚಿಸಿದರು.
ಸಂತಾಪ ಸಭೆಯಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ ಪ್ರಕಾಶ್, ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮ. ವಿ ರಾಮಪ್ರಸಾದ್, ಎಂ. ಡಿ ಪಾರ್ಥಸಾರಥಿ, ಜೋಗಿ ಮಂಜು, ಮೂಡ ಮಾಜಿ ಸದಸ್ಯರಾದ ಲಕ್ಷ್ಮೀದೇವಿ, ಜಗದೀಶ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ರವಿಶಂಕರ್, ಸುಚೇಂದ್ರ, ಎಸ್ ಎನ್ ರಾಜೇಶ್,
ಮಂಜುನಾಥ್, ನಿರಂಜನ್, ಧರ್ಮೇಂದ್ರ, ಅರವಿಂದ, ಶಿವಲಿಂಗ ಆಚಾರ್ ಮತ್ತಿತರರು ಬೈರಪ್ಪ ನಿಧನಕ್ಕೆ ದುಃಖ ವ್ಯಕ್ತಪಡಿಸಿದರು.