ಹುಣಸೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹುಣಸೂರಿನ ಎಪಿಎಂಸಿ ಆವರಣದಲ್ಲಿ ರೈತ ಸಂಘದ ಗಾಗೇನಹಳ್ಳಿ ಗ್ರಾಮದ ರೈತ ಮುಖಂಡರಾದ ಚಂದ್ರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಹೊಸೂರ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಅಧ್ಯಕ್ಷ ಬೆಂಕಿಪೂರ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಅಗ್ರ ರಾಮೇಗೌಡ, ಗ್ರಾಮ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ
ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಹೊಸೂರು ಕುಮಾರ್ ಅವರು ಮಾತನಾಡಿ ಮೃತಪಟ್ಟ ಚಂದ್ರು ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಮೃತಪಟ್ಟ ಚಂದು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು
ಪ್ರಾರ್ಥಿಸಿದರು.
ನಂತರ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿ, ಚಂದ್ರು ಅವರೆಗೆ ಶಾಂತಿ ಕೋರಲಾಯಿತು.
