ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಬಲವಂತದ ಮತಾಂತರದ ಆರೋಪ ಕೇಳಿಬಂದಿದ್ದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮಿಷನರಿಗಳು ಹಣದ ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
ಬಲವಂತದ ಮತಾಂತರದ ವಿರುದ್ಧ ಶ್ರೀರಂಗಪಟ್ಟಣ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿವರೆಗೆ ಮೆರವಣಿಗೆ ಹೊರಟಿತು.
ಈ ವೇಳೆ ಬಾಲರಾಜ್ ಮತ್ತಿತರ ಮುಖಂಡರು ಮಾತನಾಡಿ, ಬಲವಂತದ ಮತಾಂತರವನ್ನು ಖಂಡಿಸಿದರು.ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಘಟನೆಯೊಂದರಲ್ಲಿ, ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣವೂ ಹಿಂದೂ ಸಂಘಟನೆಗಳ ಆಕ್ರೋಶ, ಹೋರಾಟಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಇಂತಹ ಘಟನೆಗಳು ಹೆಚ್ಚಾಗುತ್ತವೆ ಎಂದು ಕಿಡಿಕಾರಿದರು.
ಬಲವಂತದ ಮತಾಂತರದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೃಹತ್ ಜನಾಂದೋಲನಕ್ಕೆ ಕರೆ ನೀಡಿದ್ದೇವೆ ಎಂದು ಮುಖಂಡರು ತಿಳಿಸಿದರು.