ಕಂದಕಕ್ಕೆ ಉರುಳಿದ ಸಿ ಆರ್ ಪಿ ಎಫ್ ವಾಹನ:ಮೂವರು ಯೋಧರು ಸಾವು

ಜಮ್ಮು: ಕೇಂದ್ರ ಮೀಸಲು ಪೊಲೀಸ್​ ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಮೃತಪಟ್ಟ ಘಟನೆ
ಜಮ್ಮು ಮತ್ತು ಕಾಶ್ಮೀರದ ಉಧಂಪುರ್​​ ಜಿಲ್ಲೆಯ ನಲ್ಹಾದಲ್ಲಿ ನಡೆದಿದೆ.

ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 10.30ಕ್ಕೆ ಅಪಘಾತ ಸಂಭವಿಸಿದೆ. 23 ಮಂದಿ ಸಿಆರ್​ಪಿಎಫ್​ ಯೋಧರು ಬಸಂತ್​ ಘರ್​ನಿಂದ ವಾಪಸಾಗುತ್ತಿದ್ದರು.

ಜಮ್ಮು ಮತ್ತು ಕಾಶ್ಮೀರದವರೇ ಆಗಿರುವ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್, ಉಧಂಪುರ​​ ಜಿಲ್ಲಾಧಿಕಾರಿಯಿಂದ ಈ ಬಗ್ಗೆ ಮಾಹಿತಿ ಪಡೆದಿದ್ದು, ಗಾಯಗೊಂಡ ಯೋಧರಿಗೆ ಎಲ್ಲ ರೀತಿಯ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.