ವ್ಯಕ್ತಿತ್ವ ಬೆಳೆಸುವಲ್ಲಿ ಸಾಂಸ್ಕೃತಿಕ ಚಟುವಟಿಕೆ ಪೂರಕ:ಪ್ರೀತಿ ಶೆಣೈ,

Spread the love

ಮೈಸೂರು: ಸಮುದಾಯದ ಒಡನಾಟ, ಸಾಮಾಜಿಕ ಕಳಕಳಿ, ನಾಯಕತ್ವದ ಗುಣಗಳ ವೃದ್ಧಿಗೆ ಸಾಂಸ್ಕೃತಿಕ ಚಟುವಟಿಕೆಗಳು ಪೂರಕ ಎಂದು ಪರಿಸರ ಪ್ರೇಮಿ ಪ್ರೀತಿ ಶೆಣೈ, ಹೇಳಿದರು.

ನಗರದ ಚಾಮುಂಡಿಪುರಂ ನಲ್ಲಿರುವ ಆರಾಧ್ಯ ಸಭಾಂಗಣದಲ್ಲಿ ಆರಾಧ್ಯ ಗುರುಕುಲದ ವತಿಯಿಂದ ಹಮ್ಮಿಕೊಂಡಿದ್ದ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾಂಸ್ಕೃತಿಕ ದಿನಾಚರಣೆ ವೇಳೆ ಶ್ರೀ ಕೃಷ್ಣ ರಾಧೆ ವೇಷ ಧರಿಸಿದ್ದ ಪುಟಾಣಿಗಳನ್ನು ಶ್ಲಾಘಿಸಿ ಅವರು ಮಾತನಾಡಿದರು.

ಬದುಕಿನ ಮೌಲ್ಯ ಅರಿಯುವಲ್ಲಿ, ಬೌದ್ಧಿಕ ಮತ್ತು ಕಲಾತ್ಮಕ ವ್ಯಕ್ತಿತ್ವ ಬೆಳೆಸುವಲ್ಲಿ, ಸಹಕಾರ, ಸಮಾನತೆ, ಸಹಬಾಳ್ವೆ ಪಸರಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಕಾರಣವಾಗಿವೆ ಎಂದು ಹೇಳಿದರು.

ಪ್ರೀತಂ ಶೆಣೈ ಸಹನಾ ಗೌಡ, ಶಾಲೆಯ ವ್ಯವಸ್ಥಾಪಕರಾದ ಮಮತ, ಶಾಲೆಯ ಮುಖ್ಯೋಪಾಧ್ಯಾಯಿನು ಶಿಲ್ಪ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.